Home / ಕವನ / ಕವಿತೆ / ಅವಲಂಬನ

ಅವಲಂಬನ

ನೋಡಿ ಕೊಂಡು ಬರಲಿ
ಯಾರಿಗಾದರು ಸಹಜವಲ್ಲವೆ
ಹೆತ್ತು ಹೊತ್ತವರ ತನ್ನೆಲ್ಲ ಹತ್ತಿರದವರ ನೋಡ ಬೇಕೆಂಬ ಆಸೆ.
ಹೊತ್ತು ತರಲಿ ನೆನಪಿನ ಬುತ್ತಿಯನು
ನೆನಪು ಉತ್ತೇಜನಕಾರಿಯಲ್ಲವೆ!

ನಾವಾದರೆ
ಎಲ್ಲೆಲ್ಲೋ ತಿರುಗಿ ಬರುವೆವು
ಅವಳಿನ್ನೆಲ್ಲಿಗೆ ಹೋಗಿ ಬರಬೇಕು
ಎಲ್ಲರಿಗೂ ಸುಸ್ತು-ಸಾಕು ಇರುವುದೇ ತಾನೆ!

ನಿಜ,
ನಾನು ಬೇಡವೆಂದರೆ ಹೋಗಲಾರಳು
ಸುಮ್ಮನಾಗುವಳು
ಹಾಗೆಯೆ… ಆಮೇಲಿನದ ಕೂಡ ನಾನು ಸ್ವಲ್ಪ ವಿಚಾರ
ಮಾಡಬೇಕು-

ಕಳಿಸದಿದ್ದರೆ…
ಮೌನ ಮನೆಯನಾಳತೊಡಗುವುದು
ಮಾತು ಕತೆಯೆ ನಿಂತು ಹೋಗಬಹುದು
ಒಟ್ಟಾರೆ ಮನೆಯ ಲಕ್ಷಣವೇ ಕೆಟ್ಟು ಹೋಗಿ
ಸೂತಕವು ಮನೆಯಲ್ಲಿ ಬೀಡು ಬಿಡ ಬಹುದು
ನಿರ್ಜೀವ ಪಾತ್ರೆಗಳಿಗೂ ಜೀವ ಬರಬಹುದು.
ಮಾತು, ಗೊಣಗು, ಗುಸ್ಸದ ರೂಪತಾಳಿ
ಇರುಸು-ಮುರುಸು ಸರ್ವೇ ಸಾಮಾನ್ಯವಾಗ ಬಹುದು.
ಹೋಗಿ ಬರಲಿ
ಎಷ್ಟ ದಿನಗಳು ಮಹಾ!
ಅತ್ತಲೇ ಏನು ಹೋಗುವುದಿಲ್ಲವಲ್ಲ
ಅವಳ್ಹೋದರೇನು ಊರು, ಮನೆಯನ್ನು ಜೊತೆಯಲ್ಲಿ
ಒಯ್ಯುವಳೇನು?

ಸಮಸ್ಯೆ
ಊಟ ತಿಂಡಿಯದು ತಾನೆ!
ಅಲ್ಲೋ, ಇಲ್ಲೋ, ಎಲ್ಲೋ ಒಂದು ಕಡೆ ತಿಂದರಾಯಿತು
ಅವಳಿಲ್ಲದಿದ್ದರೇನು
ನನ್ನಷ್ಟಕ್ಕೆ ನಾನು ಬದುಕಲಾರೆನೇನು?
ಇವಳೇ ಇದ್ದಳೇನು
ನನಗೆ ತಡಾಯ ಮೊದಲು?
ಹಾಯಾಗಿ ಒಂದೆರಡುದಿನ
ಸುಖವಾದ ಬ್ರಹ್ಮಚಾರಿ ಜೀವನವ ನೆನೆಪಿಸಿ ಕೊಳ್ಳಬಹುದೆಂದು
ಉಢಾಫೆ ವಿಚಾರದಲ್ಲಿ ಉದಾರನಾಗಿ
‘ಹೋಗಿ ಬಾ’ ಎಂದೆ
ಪೇಚಿಗೆ ಸಿಕ್ಕಿಕೊಂಡೆ.

ಸಣ್ಣದು, ಪುಟ್ಟದು, ನನ್ನದೆಲ್ಲಕ್ಕು ಅವಳ ಕಡೆ ನೋಡಿ
ಅಭ್ಯಾಸವಾಗಿದ್ದ ನನಗೆ
ಅದು ಬೇಕು!
ಇದು ಬೇಡ! ವೆನಿಸಿಬಿಟ್ಟಿತು ಬೇಗ.

ಎಲ್ಲಾ ಇದ್ದು, ಏನೂ ಇಲ್ಲದಂತಾಗಿ
ಒಂಟಿ, ಒಂಟಿಯೆನಿಸಿ
ಅವಳಿಲ್ಲದ ಕೊರತೆ ದೊಡ್ಡದಾಗಿ ಬೆಳೆದು
ಬದುಕು, ಅನುಕ್ಷಣವು ದುಸ್ಸಹನೀಯ ವೆನಿಸಿ ಬಿಟ್ಟೋಯ್ತು
ಇದು ಹೀಗೆ ಮುಂದುವರಿದರೆ
ಹತ್ತಿರದಿ ನನಗೆ ಹುಚ್ಚು ಹಿಡಿಯುವುದು ಖಾತರಿ
ಯೆಂಬ ಭಯವಾವರಿಸ ತೊಡಗಿತು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...