Home / ಕವನ / ಕವಿತೆ / ಅವಲಂಬನ

ಅವಲಂಬನ

ನೋಡಿ ಕೊಂಡು ಬರಲಿ
ಯಾರಿಗಾದರು ಸಹಜವಲ್ಲವೆ
ಹೆತ್ತು ಹೊತ್ತವರ ತನ್ನೆಲ್ಲ ಹತ್ತಿರದವರ ನೋಡ ಬೇಕೆಂಬ ಆಸೆ.
ಹೊತ್ತು ತರಲಿ ನೆನಪಿನ ಬುತ್ತಿಯನು
ನೆನಪು ಉತ್ತೇಜನಕಾರಿಯಲ್ಲವೆ!

ನಾವಾದರೆ
ಎಲ್ಲೆಲ್ಲೋ ತಿರುಗಿ ಬರುವೆವು
ಅವಳಿನ್ನೆಲ್ಲಿಗೆ ಹೋಗಿ ಬರಬೇಕು
ಎಲ್ಲರಿಗೂ ಸುಸ್ತು-ಸಾಕು ಇರುವುದೇ ತಾನೆ!

ನಿಜ,
ನಾನು ಬೇಡವೆಂದರೆ ಹೋಗಲಾರಳು
ಸುಮ್ಮನಾಗುವಳು
ಹಾಗೆಯೆ… ಆಮೇಲಿನದ ಕೂಡ ನಾನು ಸ್ವಲ್ಪ ವಿಚಾರ
ಮಾಡಬೇಕು-

ಕಳಿಸದಿದ್ದರೆ…
ಮೌನ ಮನೆಯನಾಳತೊಡಗುವುದು
ಮಾತು ಕತೆಯೆ ನಿಂತು ಹೋಗಬಹುದು
ಒಟ್ಟಾರೆ ಮನೆಯ ಲಕ್ಷಣವೇ ಕೆಟ್ಟು ಹೋಗಿ
ಸೂತಕವು ಮನೆಯಲ್ಲಿ ಬೀಡು ಬಿಡ ಬಹುದು
ನಿರ್ಜೀವ ಪಾತ್ರೆಗಳಿಗೂ ಜೀವ ಬರಬಹುದು.
ಮಾತು, ಗೊಣಗು, ಗುಸ್ಸದ ರೂಪತಾಳಿ
ಇರುಸು-ಮುರುಸು ಸರ್ವೇ ಸಾಮಾನ್ಯವಾಗ ಬಹುದು.
ಹೋಗಿ ಬರಲಿ
ಎಷ್ಟ ದಿನಗಳು ಮಹಾ!
ಅತ್ತಲೇ ಏನು ಹೋಗುವುದಿಲ್ಲವಲ್ಲ
ಅವಳ್ಹೋದರೇನು ಊರು, ಮನೆಯನ್ನು ಜೊತೆಯಲ್ಲಿ
ಒಯ್ಯುವಳೇನು?

ಸಮಸ್ಯೆ
ಊಟ ತಿಂಡಿಯದು ತಾನೆ!
ಅಲ್ಲೋ, ಇಲ್ಲೋ, ಎಲ್ಲೋ ಒಂದು ಕಡೆ ತಿಂದರಾಯಿತು
ಅವಳಿಲ್ಲದಿದ್ದರೇನು
ನನ್ನಷ್ಟಕ್ಕೆ ನಾನು ಬದುಕಲಾರೆನೇನು?
ಇವಳೇ ಇದ್ದಳೇನು
ನನಗೆ ತಡಾಯ ಮೊದಲು?
ಹಾಯಾಗಿ ಒಂದೆರಡುದಿನ
ಸುಖವಾದ ಬ್ರಹ್ಮಚಾರಿ ಜೀವನವ ನೆನೆಪಿಸಿ ಕೊಳ್ಳಬಹುದೆಂದು
ಉಢಾಫೆ ವಿಚಾರದಲ್ಲಿ ಉದಾರನಾಗಿ
‘ಹೋಗಿ ಬಾ’ ಎಂದೆ
ಪೇಚಿಗೆ ಸಿಕ್ಕಿಕೊಂಡೆ.

ಸಣ್ಣದು, ಪುಟ್ಟದು, ನನ್ನದೆಲ್ಲಕ್ಕು ಅವಳ ಕಡೆ ನೋಡಿ
ಅಭ್ಯಾಸವಾಗಿದ್ದ ನನಗೆ
ಅದು ಬೇಕು!
ಇದು ಬೇಡ! ವೆನಿಸಿಬಿಟ್ಟಿತು ಬೇಗ.

ಎಲ್ಲಾ ಇದ್ದು, ಏನೂ ಇಲ್ಲದಂತಾಗಿ
ಒಂಟಿ, ಒಂಟಿಯೆನಿಸಿ
ಅವಳಿಲ್ಲದ ಕೊರತೆ ದೊಡ್ಡದಾಗಿ ಬೆಳೆದು
ಬದುಕು, ಅನುಕ್ಷಣವು ದುಸ್ಸಹನೀಯ ವೆನಿಸಿ ಬಿಟ್ಟೋಯ್ತು
ಇದು ಹೀಗೆ ಮುಂದುವರಿದರೆ
ಹತ್ತಿರದಿ ನನಗೆ ಹುಚ್ಚು ಹಿಡಿಯುವುದು ಖಾತರಿ
ಯೆಂಬ ಭಯವಾವರಿಸ ತೊಡಗಿತು.
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...