Home / ಕವನ / ತತ್ವಪದ / ಚಿನ್ನದ ವೈರಾಗ್ಯ

ಚಿನ್ನದ ವೈರಾಗ್ಯ

ಪತ್ನಿಗೆ ಚಿನ್ನದ ಮೇಲೆ ವ್ಯಾಮೋಹ
ಇದು ಪ್ರಕೃತಿಯ ಸಹಜ ಗುಣಮೋಹ
ಸ್ತ್ರಿಗೆ ಆಸ್ತಿ ಅಂತಸ್ತುಗಳೇ ಪ್ರೀತಿ
ನಿಸರ್ಗದ ಬಾಳಿಕೆಗೆ ಇದೇ ಜ್ಯೋತಿ

ಇತಿಹಾಸಗಳಲೆಲ್ಲ ಸ್ತ್ರೀಯ ಒಡೆತನ ಕಂಡಾಗ
ಸಂತಜನ ಸ್ತ್ರೀಯರಿಗೂ ಸಿರಿ ಅನುರಾಗ
ತುಕಾರಾಮ ಮಡದಿಗೆ ಸಿರಿತನದ ಕನಸು
ಆದರೆ ಸಂತರಿಗೆ ನಿರಾಶೆಯ ಮನಸು

ಬಾಪೂಜಿಯ ಅರ್ಧಾಂಗಿಗೆ ಚಿನ್ನದಲಿ ಆಸೆ
ಕಂಡೊಮ್ಮೆ ವಿಶದಸಿದರು ನಿನಗೋ ಆಸೆ
ಬೇಡ ನಿನಗೆ ಹೇಮದಲಿ ಲೋಭ
ನಮ್ಮ ಬಾಳಿಗೆ ತರುವುದಿಲ್ಲ ಶೋಭ

ಪರಮಹಂಸ ಸತಿ ಶಾರದೆ ಮಾತೆಗೆ
ಪ್ರಾರಂಭದಲಿತ್ತು ಚಿನ್ನದಲಿ ಚಿತ್ತ
ಕ್ಷಣ ಹೊತ್ತು ಅವರ ಅಂತರಂಗ ತೆರೆದರು
ಅಶಾಶ್ವತ ಚಿನ್ನ ಆಸ್ತಿ ಎಂದು ಬಿತ್ತಿದರು

ದೇವರೆ ನಮಗೆಂದೂ ಬಾರದಿರಲಿ
ಅಂತಸ್ತು ಲೋಭಗಳ ಬಯಕೆ
ಬಾಳನ್ನೆ ಪ್ರಪಾತಕ್ಕೆ ತಳ್ಳುವುದು
ಮಾಣಿಕ್ಯವಿಠಲ ನೆನೆಯದಿರೆ ನರಕಕ್ಕೆ
*****

Tagged:

Leave a Reply

Your email address will not be published. Required fields are marked *

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...