Home / ಕವನ / ಕವಿತೆ / ಜೀವಗಾಳಿ

ಜೀವಗಾಳಿ


ಭೂಮಿ ಬಿರುಕು ಬಿಟ್ಟಿತು
ನಾಡಿನ ನರಗುಂದದಲ್ಲಿ ನಾಡಿ ಮಿಡಿತ ಕೇಳಿ
ಹೂತು ಹೋದ ಹೆಣಗಳೆಲ್ಲ
ಬರಡು ನೆಲದ ಕಣಗಳೆಲ್ಲ
ಪುಟಪುಟಿದು ಸೆಟೆದವು, ಬೀಸಿ ಜೀವಗಾಳಿ.

ನೆಲದೊಳಗೆ ಭೋರ್ಗರೆತ, ಸುಳಿಸುತ್ತುವ ಸೆಳೆತ
ಸಿಟ್ಟಿನ ಸುಳಿ ಸಿಂಬೆ ಸುತ್ತಿ
ಕುದಿ ಕುದಿಯುವ ರಕ್ತವೆಲ್ಲ
ಕೈಯಾಗಿ ಕಿಡಿಯಿತು ಬಿಗಿದ ಮುಷ್ಟಿ ಎದ್ದಿತು
ನೋವೆ ನೆರೆದು ನಿಂತಂತೆ
ನೆಲದ ಒಡಲು ಗುಡುಗು ಸಿಡಿಲು
ಸೀಳಿ ಸೃಷ್ಟಿಯಾಗುತ್ತಿರುವ ಸಾಲು ಸಾಲು ಕೈಗಳು
ಬುಸುಗುಟ್ಟುವ ಹೆಡೆಗಳು
ಜೊತೆ ಜೊತೆಯಲ್ಲಿ ಸೆಟೆದು ನಿಂತ
ಅರೆಬೆತ್ತಲ ನಡುಗತ್ತಲ
ಭಯ ಬದುಕಿನ ಮೈಗಳು
ಹುಟ್ಟಿಕೊಂಡವೆಲ್ಲೆಲ್ಲೂ ಕಾದ ಕೆಂಡ ಕಿಡಿಗಳು
ಮೂಳೆಯೊಳಗೆ ಮನಸ ಹರಿಸಿ
ಕಾಲಿನಲ್ಲಿ ಕನಸು ನೆಲೆಸಿ
ಶೋಷಣೆಯ ಸಜ್ಜೆ ಮೇಲೆ ಹೆಜ್ಜೆಯಿಟ್ಟು ರೈತರು


ಕೆದರಿದ ಕಿಡಿ ಕೂದಲು, ಉಬ್ಬಿ ಹೋದ ಕಾಲು
ಗರಬಡಿದ ಬಾಗಿಲಿಗೆ ಝಾಡಿಸಿ ಒದ್ದು
ನಗರವೆಲ್ಲ ಮೈ ಕೊಡವಿ ನಿಟ್ಟು ಬಿದ್ದು ಎದ್ದು
ಹೃದಯವಾಗಿ ನಿಂತಿತು, ಹಾರವಾಗಿ ಹರಿಯಿತು
ತೇಗುತ್ತಿದ್ದ ಟಾರು ರಸ್ತೆ ತೆಪ್ಪಗಾಯಿತು
“ಸೌಧ”ದತ್ತ ಸಾಗಲು ತೆಪ್ಪವಾಯಿತು.


“ನಿಧಿ” ನೆಲೆಯೂರಿದ ವಿಧಾನ ಸೌಧ
ಸರ್ಪಕಾವಲಿನ ಶ್ರೀ ಕುರುಡ
ನೆಲದ ಒಡೆಯರು ನಮ್ಮ ರೈತರು
ಕೊಚ್ಚಿ ಬಂದರು ರೊಚ್ಚೆದ್ದವರು

ವಿಧಾನ ಸೌಧದ ಹೊಟ್ಟೆಯ ಒದ್ದು
ಕಲ್ಲು ಕಲ್ಲಿಗೂ ಕ್ರಾಂತಿಯ ಸದ್ದು
ಎದೆಯುಬ್ಬಿಸಿ ಒಳ ನುಗ್ಗಿದರು

ಅತ್ತಿಂದಿತ್ತ ಹಾರುವ ಬಾವಲಿ
ಕಣ್ಣಿಗೆ ಬಡಿಯುವ ಕಳ್ಳಾಟ
ದಿಗಿಲು ಹುಟ್ಟಿಸುವ ದುರ್ನಾತ

ಕಿಡಿಕಾರುವ ಕಣ್ ಬೆಳಕನು ಬಿಟ್ಟು
ಎದೆ ಮನೆ ಬಾಗಿಲು ಭೇದಿಸಿ ಹೊಕ್ಕು
ಒಳಗೆಲ್ಲಾ ಹುಡುಕಾಡಿದರು
ಹೃದಯವ ಕಾಣಲು ಹುಡುಕಿದರು
ಮೂಲೆ ಮೂಲೆಯ ತಡಕಿದರು

ಕತ್ತಲು ಕವಿದರು ಸಿಗಲಿಲ್ಲ.
ಹೃದಯವೆ ಅಲ್ಲಿ ಇರಲಿಲ್ಲ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...