Home / ಕವನ / ಕವಿತೆ / ಷಣ್‍ಮುಖ

ಷಣ್‍ಮುಖ


ಕೋಳಿ ಕೂಗೋದು ಕಾದು
ಬಾಳ ತಂಗಳು ತಿಂದು
ಹೊತ್ತಿನ ಜತ್ಯಾಗೆ ಹೊಲದಾಕೆ ಬಂದು
ಬಿತ್ತಿದ್ದು ಒಣ ನವಣೆ
ಬೆಳೆದದ್ದು ಬರೀ ಬವಣೆ.


ಹಾರಕ ತಂದು ನೆಲತುಂಬ ಹೊಯ್ದರೂ
ಸುರಕೊಂಡಿದ್ದು ಮಾತ್ರ ಹತ್ತಾರು ಸೇರು
ತಿಂದು ಕುಂತರೆ ಈಗ
ಮುಂದೆ ಬೀಜಕ್ಕೆ ಕಾಳಿಲ್ಲ
ಹೊಟ್ಟೆ ಕಟ್ಟಿದರೂ ಹಾರಕಕ್ಕೆ ಬೆಲೆಯಿಲ್ಲ.


ಕಡಲೆ ಕಾಯಿಯ ಬೀಜ
ಒಣ ಹೂಲದ ರಾಜ
ಬಿತ್ತಿ, ಬೆಳೆಯಿತು ಆಸೆ.

ಹರಡಿಕೊಂಡು ಗಿಡ
ನೂರು ಬೇರಿನ ಬುಡ
ರೆಪ್ಪೆಯಂಚಿನ ಒಳಗೆ
ಬಿರಿದ ಕಮಲ
ಕಣ್ಣು ತೆರೆದರೆ ಅಲ್ಲಿ
ಉರಿಗಣ್ಣ ಸೂರ್ಯನಿಗೆ
ಸೀದು ಹೋದ ಹಸಿರು
ಹೊಲವೆಲ್ಲ ನಿಟ್ಟುಸಿರು.


ರಾಗಿ ಪೈರಿನ ಬೆಳಸು
ತೂಗಿ ತೊನೆಯುವ ತೆನೆ
ಎದೆಯಾಗೆ ಮೂಡಿದವು
ರಾಶಿರಾಶಿ ಮುದ್ದೆ.

ಕುಣಿದು ಕುಪ್ಪಳಿಸಿ
ಕೈ ಚಾಚಿದರೆ
ಬಂಧನದ ಬೇಡಿ
ತೆನೆ ರುಂಡ ತಂದು
ಒಂದರ ಹಿಂದೊಂದು
ತುಂಬಿದ ಗಾಡಿ.


ಭತ್ತ ಬೆಳೆಯೋಣೆಂದರೆ
ಬಾವಿಯಿಲ್ಲ
ಕೆರೆಯ ಹಿಂದುಗಡೆ
ಗದ್ದೆಯಿಲ್ಲ.

ಅಕ್ಕಿ ಹಕ್ಕಿಯ ರೆಕ್ಕೆ
ಸುಟ್ಟು ಬಿದ್ದಿತು ನೆಲಕೆ
ಅನ್ನ ತಿನ್ನುವ ಆಸೆ
ಬಂಜೆ ಬಯಕೆ.


ನವಣೆ ಹಾರಕವಿಲ್ಲ
ಕಡಲೆಕಾಯಿ ಬೀಜವಿಲ್ಲ
ಅಕ್ಕಿ ರಾಗಿಯ ಹೆಸರು
ಎತ್ತೊ ಹಂಗಿಲ್ಲ.

ಕಂಡೂರ ಹೊಲದಾಗೆ
ಕೂಲಿ ಮಾಡಿದರುಂಟು
ಎತ್ತು ನೇಗಿಲಿಗೆಲ್ಲ
ಬಾಡಿಗೆ ನಂಟು.

ನೋವು ತುಂಬಿದ ನಾನು
ಏನ ಪ್ರೀತಿಸಲಿನ್ನು
ನೆಲವೂ ಇಲ್ಲ, ನೇಗಿಲೂ ಇಲ್ಲ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...