Home / ಕವನ / ಕವಿತೆ / ಪ್ರೀತಿಯ ಟೈಲರ್

ಪ್ರೀತಿಯ ಟೈಲರ್

ಗೆಳೆಯ ಟೈಲರ್ ಇದ್ದ ಆರೂವರೆ ಅಡಿ
ವಿರಗಿ ವಿರಾಹಿ ನಿರಾಶಾವಾದಿ
ಕಳೆದಿಹನು ಏಳೂವರೆ ದಶಕ
ವಾಕಿಂಗು, ಜಾಗಿಂಗ್‌ನಲಿ ಬೆರೆಯುತ್ತಿದ್ದನೆಲ್ಲರ
ಅನುಮಾನದಿ ಕಾಣುತ್ತಿದ್ದ ಅವರಿವರನು
ಆದರೂ ನಂಬಿ ಇವನ ಬಳಿ
ಸುಳಿವ ಗಿರಾಕಿ ಸ್ನೇಹಿತರನೇಕರು

ಸಮಯಕೆ ಅಂಗಿ ಹೊಲಿದು ಕೊಡಲಿಲ್ಲೆಂದು
ಹೋದವರೆಷ್ಟೋ ಗಿರಾಕಿಗಳು ಕೋಪ ತಾಪದಲಿ
ಸಮಯಕೆ ಬಟ್ಟೆ ಕೊಡುವ ಪರಿಯಿಲ್ಲೆಂದರು
ಪೇಟೆಯವರಷ್ಟೇ ಅಲ್ಲ ಹಳ್ಳಿಯವರೂ
ಬಾರಿ ಬಾರಿ ಕನಲಿ ಪ್ರೀತಿಯಲಿ
ಇವ ಹೊಲಿದಂಗಿಯೇ ಬೇಕೆನ್ನುವರು

ಎಲ್ಲರಂತಿವನಲ್ಲ ಈ ಟೈಲರ್
ಭೀಮಣ್ಣ, ರಘಣ್ಣ, ಮಲ್ಲಿಕಣ್ಣ, ಶ್ರೀಧರ
ಗುಡಿಗಾರ ನಾರಾಯಣಪ್ಪ, ಪ್ರಕಾಶ್‌, ಸೇನಾಪತಿ
ಹೀಗೆ ಅನೇಕರ ಸ್ನೇಹ ಮಾಡಿದ
ಇವ ಯಾರ ಹಂಗಿಲ್ಲದಂತಿದ್ದ
ಆದರಿವ ಟೈಲರೊಳಗುತ್ತಮ ಟೈಲರ್
ಸದಾ ಹೂವಿನಂತೆ ಹಸನ್ಮುಖಿ
ನಡು ನಡುವೆ ಒಮ್ಮೊಮ್ಮೆ ಸಿಡುಕುತ್ತಿದ್ದ
ಆದರೂ ನಮ್ಮೆಲ್ಲರ ಪ್ರೀತಿಯ ಟೈಲರ್

ಎಳೆಯರ ಹಿರಿಯರ, ಹೆಂಗಳೆಯರ
ಮನವ ಗೆಲಿದಿಹನು ನಮ್ರ ಮಾತಿನಲಿ
ನೇರ ನಡೆ ನುಡಿಯುವನೀತ ತೀಕ್ಷಣದಲಿ
ಜೀವನದಲಿ ಹಿಗ್ಗರಿಸಿ ಮುಗ್ಗರಿಸಿ
ಗಿರಾಕಿಗಳ ರಂಜಿಸಿ ಪ್ರೀತಿಯ ಕಾಣುತಲಿ
ಸಲ್ಲಿಸುತಿಹನು ಉಚಿತ ಸೇವೆಯ

ಶವದ ಚೀಲ ಹೊಲಿದು ಕೊಡುತ
ಕಾಗೆಗಳಿಗೆ ಬ್ರೆಡ್‌ ಮಂಡಕ್ಕಿ ಹಾಕುತ
ಕಾಗೆಗಳೊಂದಿಗೆ ಪ್ರೀತಿಯ ಗಳಿಸಿದ

ಇವ ಎಲ್ಲರಿಗೂ ಮಾದರಿ ಟೈಲರ್
ಸಾಗರದ ಎಸ್ಸೆನ್ ನಗರದಲ್ಲೊಂದು
ಖರೀದಿಸಿದ ನಿವೇಶನದಲಿ
ವಾಸ ಮಾಡ ತೊಡಗಿದ
ಚಿಕ್ಕದಾದ ಚೊಕ್ಕದಾದ ಎರಡು
ರೂಮಿನ ಮನೆಯ ಕಟ್ಟಿಸಿ

ವಯಸ್ಸು ನಿಲ್ಲುವುದೇ
ಆರೋಗ್ಯ ಹದಗೆಟ್ಟಿತು ಒಂಟಿ ಜೀವಕೆ
ಅಂದುರಾತ್ರಿ ಹನ್ನೆರಡು ಬಡಿದಿತ್ತು
ಓಡಿದ ಗೆಳೆಯ ಮಲ್ಲಿಕಣ್ಣನ ಮನೆಗೆ
ಹೊಟ್ಟೆ ಸರಿಯಿಲ್ಲೆಂದ ಸೀರಿಯಸ್ಸೆಂದ ಅವನೆಬ್ಬಿಸಿ
ಸರಿ, ನಡೆ ಎಂದವನ ಸೇರಿಸಿದರು
ಆಸ್ಪತ್ರೆಗೆ ಸರಿರಾತ್ರಿಯಲಿ

ಶ್ರೀಧರನ ಕರೆಸಿದರೂ ಜಗ್ಗಲಿಲ್ಲ
ಭೀಮಣ್ಣನ, ರಘಣ್ಣನ ಕರೆಯಿಸಿದರು
ಸ್ನೇಹಿತನ ಸಹಾಯಕ್ಕೆ ಧಾವಿಸಿದರೆಲ್ಲರೂ
ಬೆಂಗಳೂರಿನಲ್ಲಿದ್ದ ಹೆಂಡತಿ ಮಕ್ಕಳಿಗೆ
ಫೋನಾಯಿಸಿದರು ಆದೀತೆಂದು ಹೆಚ್ಚು ಕಡಿಮೆ
ಬಂದ ಬಂಧುಗಳು ಕರೆದೊಯ್ದರು
ಅಲ್ಲಿಯೂ ಅವರನ್ನು ಕಂಡ ಅನುಮಾನದಿ

ಒಂದು ದಿನ ಇದ್ದಕ್ಕಿದ್ದಂತೆ ಇವ ಮಾಯ
ಗಾಬರಿ ಮನೆಯವರೆಲ್ಲ
ಎಲ್ಲಿ ಹೋದರೆಂದು ತಿಳಿಯಲಿಲ್ಲ
ನೀಡಿದರು ಕಂಪ್ಲೆಂಟು
ಎಷ್ಟು ಹುಡುಕಿದರೂ
ಪ್ರೀತಿಯ ಟೈಲರ್ ಸಿಗಲೇ ಇಲ್ಲ

ಯಾರಿಗೂ ತಿಳಿಸದೇ ಸೇರಿದ್ದ ವೃದ್ಧಾಶ್ರಮ
ನಾನು ಅನಾಥ ನನಗೆ ಯಾರೂ ಇಲ್ಲೆಂದ
ಅಲ್ಲಿಯೂ ತರಲೆ ಸಿಡುಕುತನ ಜಗಳ
ಅರೆ ಹುಚ್ಚುತನದಲಿ ಆಗಿಬಿಟ್ಟ ಪ್ರೀತಿಯ ಟೈಲರ್

‘ನನ್ನ ತಮ್ಮ ರಮೇಶ
ಶಿಕಾರಿಪುರದಲಿ ಪೋಲೀಸ್‌ ಎಂದು’
ಬಿಟ್ಟ ಬಾಯಿ ಈ ಟೈಲರ್
ತಮ್ಮನ ಕರೆಯಿಸಿ ಅವನಿಗೊಪ್ಪಿಸಿದರು
ಅಂತೂ ಮೂವತ್ತೈದು ನಾಲ್ವತ್ತು ವರ್ಷಗಳಿಂದ ಬಿಟ್ಟಿದ್ದ
ಹೆಂಡತಿಯೊಂದಿಗೆ ಸೇರಿಸಿದಾಕ್ಷಣದಲಿ
ಮೋಕ್ಷಕೆ ದಾರಿಯಾಯಿತು ಸುಗಮ
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...