Home / ಕವನ / ಕವಿತೆ / ಇದು ಬರಿ ನಾಡಲ್ಲೋ…

ಇದು ಬರಿ ನಾಡಲ್ಲೋ…

ಸಿಹಿಮೊಗೆ ಎಂದರೆ ಬರಿ ನಾಡಲ್ಲೋ ಅಣ್ಣಾ
ಇದು ಬರಿ ನಾಡಲ್ಲೋ…||

ಶರಣ ಶರಣೆಯರ ಪುಣ್ಯಕ್ಷೇತ್ರಗಳ ಬೀಡು
ಹಲವು ಪ್ರಥಮಗಳ ವೈಭವದ ನಾಡು
ಕ್ರಾಂತಿಕಾರಕ ರೈತ ಚಳುವಳಿಗಳ ನಾಡು
ಉಳುವವನೇ ಹೊಲದೊಡೆಯ- ಬಳುವಳಿಯನಿತ್ತ ನಾಡು||

ಕುವೆಂಪು ಹಾಮಾನಾ ಮೂರ್ತಿ ತೇಜಸ್ವಿ ಜಿ‌ಎಸ್ಸೆಸ್‌
ಲಂಕೇಶ್‌ ಸುಬ್ಬಣ್ಣ ಶಾಂತವೇರಿ ಶಾಂತಲೆಯನಿತ್ತ ನಾಡು
ಪರಮದೇವ ದೇವತಾರಾಮಯ್ಯ ಲಿಂಗಣ್ಣ
ಕವಿ ವರೇಣ್ಯರು ಜನಿಸಿದ ನಾಡು ||

ಸ್ನೇಹ ಹಸ್ತವ ಚಾಚಿದ ವೀರಾಗ್ರಣಿ
ಕೆಳದಿ ಚೆನ್ನಮ್ಮನಾಳಿದ ನಾಡು
‘ಸಿಸ್ತು’ ತಂದ ಶಿಸ್ತಿನ ಶಿವಪ್ಪನಾಯಕನಾಳಿದ ನಾಡು
ಕೋಟೆ ಕೊತ್ತಲಗಳ ಶಿಲಾಶಾಸನಗಳ ಬೀಡು ||

ಸ್ವಾತಂತ್ರ್ಯ ಹೋರಾಟಗಾರರ ನೆಲೆವೀಡು
ಈ ಮಲೆನಾಡ ಚಪ್ಪರದಲಿ ಬಿಟ್ಟ ಕಾಯ್ಗಳನೇಕ
ನಾಲ್ವರು ಮುಖ್ಯಮಂತ್ರಿಗಳನ್ನಿತ್ತ ಹೆಮ್ಮೆಯ ನಾಡು
ಕರುನಾಡಿನಲಿ ಶಿಖರದಂತೆ ಮೆರೆತಿಹುದು ಈ ನಾಡು ||

ತುಂಗ ಭದ್ರೆ ಶರಾವತಿ
ಕುಮದ್ವತಿ ವರದೆ ಹರಿದಿಹ ನಾಡು
ಅಡಿಕೆ ತೆಂಗು ಜಾಗರವಾಡುವ ನಾಡು
ಸಿರಿ ಗಂಧದ ಕಂಪ ಸೂಸುವ ಬೀಡು ||

ರಾಜಾ ರಾಣಿ ರೋರರ್ ರಾಕೆಟ್
ನಾಲ್ಕು ಟಿಸಿಲಿನ ಘರ್ಜನೆಯ ರೋಮಾಂಚನ
ಚಲುವಿನ ಸಿರಿ ಜೋಗದ ಬೀಡು
ಈ ಜಗಕೆ ಬೆಳಕ ನೀಡಿದ ನಾಡು ||

ಸರ್‍ವಧರ್‍ಮಗಳ ಸಮನ್ವಯದ ಪ್ರತೀಕ ಈ ನಾಡು
ಕೈಗಾರಿಕೋದ್ಯಮ ಕಲರವದ ಬೀಡು
ಶಿಕ್ಷಣ ತಂತ್ರಜ್ಞಾನದಿ ನಲಿದಿಹ ನಾಡು
ಸಾಹಿತ್ಯ ಕಲೆ ಸಂಸ್ಕೃತಿ ಶಿಲ್ಪಕಲೆಗಳ ತವರೂರು ||

ಸಹ್ಯಾದ್ರಿ ಕೊಡಚಾದ್ರಿಯ ಸೆರಗಿನಲಿ
ಸಸ್ಯಶ್ಯಾಮಲೆಯಲ್ಲರಳಿದ ಈ ನಾಡು
ಪಕ್ಷಿ ಸಂಕುಲ ಸಿಂಹದಾಮ ಗುಡ್ಡಬೆಟ್ಟಗಳ ಸಾಲೇ ಸಾಲು
ಎತ್ತರೆತ್ತರ ಮರಗಿಡ ಬಳ್ಳಿ ಕೈಬೀಸಿ ಕರೆತಿಹವು ||
*****
೮-೧-೨೦೧೦ರಲ್ಲಿ ಶಿವಮೊಗ್ಗಾದ ಕ್ರಾಂತಿದೀಪ ಪತ್ರಿಕೆಯಲ್ಲಿ ಪ್ರಕಟ.
೯-೧-೨೦೧೦ರ ಸೃಷ್ಠಿರಾಜ್ ಟೈಮ್ಸ್ ಪತ್ರಿಕೆಯಲ್ಲಿ ಪ್ರಕಟ.

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...