Home / ಕವನ / ಕವಿತೆ / ಶ್ರಾವಣ ಬಂತೆಂದರೆ

ಶ್ರಾವಣ ಬಂತೆಂದರೆ

ಶ್ರಾವಣ ಮಾಸ ಬಂತೆಂದರೆ
ಸಿಗದು ಉಪಾಹಾರ ಜಳಕವಿಲ್ಲದೆ
ಎರಡು ದಿನಕ್ಕೊಮ್ಮೆ ಮಾಡುತ್ತಿದ್ದ ಜಳಕ
ನೀರಿಲ್ಲದಿದ್ದರೂ ಈಗ ದಿನವೂ ಜಳಕ

ದೇವರ ಪೂಜೆ ಮಾಡದಿದ್ದ ನಾನು
ಅವರ ಮೈ ತೊಳೆಯುವುದೀಗ ನನ್ನ ಸರದಿ

ಶ್ರಾವಣ ನೆಪದಲ್ಲಾದರೂ ಎಚ್ಚರಿಸುವಳು
ಮಾಡದ ತಪ್ಪಿಗೆ ಮನ್ನಿಸೆಂದು
ದೇವರಲ್ಲಿ ಬೇಡಿಕೊಳ್ಳಿ ಎಂದು

ಇಷ್ಟವಿಲ್ಲದಿದ್ದರೂ ಸಂಜೆ
ಬಿಡದೇ ಕರೆದೊಯ್ಯುವಳು ನನ್ನ
ದೇವಸ್ಥಾನಕೆ ಜೊತೆಯಲಿ

ಮುಗಿದರೂ ಶ್ರಾವಣ ಮಾಸ
ದೇವರಿಗೆ ಮಾಡಿಸುವಳು ಅಭಿಷೇಕ
ನನಗೆ ಮಾತ್ರ ನಿತ್ಯ ಅಭಿಷೇಕ
ಮಾಡಿ ದೇವರಿಗೆ ಪೂಜೆ ಎಂದು

ಶ್ರಾವಣ ಕಳೆಯುವ ತನಕ
ನಾನು ಪಕ್ಕಾ ಬ್ರಹ್ಮಚಾರಿ ಗೊತ್ತಾ!

ಆದರೂ
ಬಂತೆಂದರೆ ಶ್ರಾವಣ
ನನಗದೇನೋ ಸಂಭ್ರಮ ಮಹದಾನಂದ

ಮಾಡುವಳು ರುಚಿ ರುಚಿ ಅಡುಗೆ
ಬಗೆ ಬಗೆ ತಿಂಡಿ ತಿನಿಸು
ಕಡುಬು ಪಾಯಸ ಖೀರು ಕೋಸುಂಬರಿ
ನಾ ತಿನ್ನುವೆ ಚಪ್ಪರಿಸಿ

ಕೈ ಬಳೆ ಸದ್ದಿನಲಿ ಮಾಡಿದಡುಗೆ
ಘಮ-ಘಮಿಸುತಲಿ
ಅದೇನೋ ಪರಿಮಳದಾಕರ್ಷಣೆ ಅದರಲಿ

ಓರೆಗಣ್ಣಿನಲಿ ನೋಡುತ ಪ್ರೀತಿಯಲಿ
ಬಡಿಸಿದರೆ ಪಾಯಸದ ರುಚಿ ಸಿಗದು ಬೇರೆಲ್ಲೂ

ಅವಳ ನಡಿಗೆಯ ಗೆಜ್ಜೆಯ ಸಪ್ಪಳದಲಿ
ಸಿರಿಲಕ್ಷ್ಮಿ ಇಲ್ಲೆಂದೆನಿಸದಿರದು ಮನೆಯಲಿ

ನನಗದು ಕೋಟಿ ರುಪಾಯಿಗೂ ಮಿಗಿಲು
*****
೫-೯-೨೦೧೦ರ ಸಂಯುಕ್ತ ಕರ್ನಾಟಕದ ಸಾಪ್ತಾಹಿಕ ಸೌರಭದಲ್ಲಿ ಪ್ರಕಟ

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...