Home / ಕವನ / ಕವಿತೆ / ಶ್ರಾವಣ ಬಂತೆಂದರೆ

ಶ್ರಾವಣ ಬಂತೆಂದರೆ

ಶ್ರಾವಣ ಮಾಸ ಬಂತೆಂದರೆ
ಸಿಗದು ಉಪಾಹಾರ ಜಳಕವಿಲ್ಲದೆ
ಎರಡು ದಿನಕ್ಕೊಮ್ಮೆ ಮಾಡುತ್ತಿದ್ದ ಜಳಕ
ನೀರಿಲ್ಲದಿದ್ದರೂ ಈಗ ದಿನವೂ ಜಳಕ

ದೇವರ ಪೂಜೆ ಮಾಡದಿದ್ದ ನಾನು
ಅವರ ಮೈ ತೊಳೆಯುವುದೀಗ ನನ್ನ ಸರದಿ

ಶ್ರಾವಣ ನೆಪದಲ್ಲಾದರೂ ಎಚ್ಚರಿಸುವಳು
ಮಾಡದ ತಪ್ಪಿಗೆ ಮನ್ನಿಸೆಂದು
ದೇವರಲ್ಲಿ ಬೇಡಿಕೊಳ್ಳಿ ಎಂದು

ಇಷ್ಟವಿಲ್ಲದಿದ್ದರೂ ಸಂಜೆ
ಬಿಡದೇ ಕರೆದೊಯ್ಯುವಳು ನನ್ನ
ದೇವಸ್ಥಾನಕೆ ಜೊತೆಯಲಿ

ಮುಗಿದರೂ ಶ್ರಾವಣ ಮಾಸ
ದೇವರಿಗೆ ಮಾಡಿಸುವಳು ಅಭಿಷೇಕ
ನನಗೆ ಮಾತ್ರ ನಿತ್ಯ ಅಭಿಷೇಕ
ಮಾಡಿ ದೇವರಿಗೆ ಪೂಜೆ ಎಂದು

ಶ್ರಾವಣ ಕಳೆಯುವ ತನಕ
ನಾನು ಪಕ್ಕಾ ಬ್ರಹ್ಮಚಾರಿ ಗೊತ್ತಾ!

ಆದರೂ
ಬಂತೆಂದರೆ ಶ್ರಾವಣ
ನನಗದೇನೋ ಸಂಭ್ರಮ ಮಹದಾನಂದ

ಮಾಡುವಳು ರುಚಿ ರುಚಿ ಅಡುಗೆ
ಬಗೆ ಬಗೆ ತಿಂಡಿ ತಿನಿಸು
ಕಡುಬು ಪಾಯಸ ಖೀರು ಕೋಸುಂಬರಿ
ನಾ ತಿನ್ನುವೆ ಚಪ್ಪರಿಸಿ

ಕೈ ಬಳೆ ಸದ್ದಿನಲಿ ಮಾಡಿದಡುಗೆ
ಘಮ-ಘಮಿಸುತಲಿ
ಅದೇನೋ ಪರಿಮಳದಾಕರ್ಷಣೆ ಅದರಲಿ

ಓರೆಗಣ್ಣಿನಲಿ ನೋಡುತ ಪ್ರೀತಿಯಲಿ
ಬಡಿಸಿದರೆ ಪಾಯಸದ ರುಚಿ ಸಿಗದು ಬೇರೆಲ್ಲೂ

ಅವಳ ನಡಿಗೆಯ ಗೆಜ್ಜೆಯ ಸಪ್ಪಳದಲಿ
ಸಿರಿಲಕ್ಷ್ಮಿ ಇಲ್ಲೆಂದೆನಿಸದಿರದು ಮನೆಯಲಿ

ನನಗದು ಕೋಟಿ ರುಪಾಯಿಗೂ ಮಿಗಿಲು
*****
೫-೯-೨೦೧೦ರ ಸಂಯುಕ್ತ ಕರ್ನಾಟಕದ ಸಾಪ್ತಾಹಿಕ ಸೌರಭದಲ್ಲಿ ಪ್ರಕಟ

Tagged:

Leave a Reply

Your email address will not be published. Required fields are marked *

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...