Home / ಕವನ / ಕವಿತೆ / ಶ್ರಾವಣ ಬಂತೆಂದರೆ

ಶ್ರಾವಣ ಬಂತೆಂದರೆ

ಶ್ರಾವಣ ಮಾಸ ಬಂತೆಂದರೆ
ಸಿಗದು ಉಪಾಹಾರ ಜಳಕವಿಲ್ಲದೆ
ಎರಡು ದಿನಕ್ಕೊಮ್ಮೆ ಮಾಡುತ್ತಿದ್ದ ಜಳಕ
ನೀರಿಲ್ಲದಿದ್ದರೂ ಈಗ ದಿನವೂ ಜಳಕ

ದೇವರ ಪೂಜೆ ಮಾಡದಿದ್ದ ನಾನು
ಅವರ ಮೈ ತೊಳೆಯುವುದೀಗ ನನ್ನ ಸರದಿ

ಶ್ರಾವಣ ನೆಪದಲ್ಲಾದರೂ ಎಚ್ಚರಿಸುವಳು
ಮಾಡದ ತಪ್ಪಿಗೆ ಮನ್ನಿಸೆಂದು
ದೇವರಲ್ಲಿ ಬೇಡಿಕೊಳ್ಳಿ ಎಂದು

ಇಷ್ಟವಿಲ್ಲದಿದ್ದರೂ ಸಂಜೆ
ಬಿಡದೇ ಕರೆದೊಯ್ಯುವಳು ನನ್ನ
ದೇವಸ್ಥಾನಕೆ ಜೊತೆಯಲಿ

ಮುಗಿದರೂ ಶ್ರಾವಣ ಮಾಸ
ದೇವರಿಗೆ ಮಾಡಿಸುವಳು ಅಭಿಷೇಕ
ನನಗೆ ಮಾತ್ರ ನಿತ್ಯ ಅಭಿಷೇಕ
ಮಾಡಿ ದೇವರಿಗೆ ಪೂಜೆ ಎಂದು

ಶ್ರಾವಣ ಕಳೆಯುವ ತನಕ
ನಾನು ಪಕ್ಕಾ ಬ್ರಹ್ಮಚಾರಿ ಗೊತ್ತಾ!

ಆದರೂ
ಬಂತೆಂದರೆ ಶ್ರಾವಣ
ನನಗದೇನೋ ಸಂಭ್ರಮ ಮಹದಾನಂದ

ಮಾಡುವಳು ರುಚಿ ರುಚಿ ಅಡುಗೆ
ಬಗೆ ಬಗೆ ತಿಂಡಿ ತಿನಿಸು
ಕಡುಬು ಪಾಯಸ ಖೀರು ಕೋಸುಂಬರಿ
ನಾ ತಿನ್ನುವೆ ಚಪ್ಪರಿಸಿ

ಕೈ ಬಳೆ ಸದ್ದಿನಲಿ ಮಾಡಿದಡುಗೆ
ಘಮ-ಘಮಿಸುತಲಿ
ಅದೇನೋ ಪರಿಮಳದಾಕರ್ಷಣೆ ಅದರಲಿ

ಓರೆಗಣ್ಣಿನಲಿ ನೋಡುತ ಪ್ರೀತಿಯಲಿ
ಬಡಿಸಿದರೆ ಪಾಯಸದ ರುಚಿ ಸಿಗದು ಬೇರೆಲ್ಲೂ

ಅವಳ ನಡಿಗೆಯ ಗೆಜ್ಜೆಯ ಸಪ್ಪಳದಲಿ
ಸಿರಿಲಕ್ಷ್ಮಿ ಇಲ್ಲೆಂದೆನಿಸದಿರದು ಮನೆಯಲಿ

ನನಗದು ಕೋಟಿ ರುಪಾಯಿಗೂ ಮಿಗಿಲು
*****
೫-೯-೨೦೧೦ರ ಸಂಯುಕ್ತ ಕರ್ನಾಟಕದ ಸಾಪ್ತಾಹಿಕ ಸೌರಭದಲ್ಲಿ ಪ್ರಕಟ

Tagged:

Leave a Reply

Your email address will not be published. Required fields are marked *

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...