Home / ಕವನ / ಕವಿತೆ / ಹಕ್ಕಿಗಳ ರೋದನ

ಹಕ್ಕಿಗಳ ರೋದನ

ಎಲ್ಲಿ ಹೋಗಲಿ ಹೇಗೆ ಬದುಕಲಿ
ಎಲ್ಲಿ ಹಾಡಲಿ ಎಲ್ಲಿ ನಲಿಯಲಿ
ನಮ್ಮ ಕನಸುಗಳಿಗೆ ಕಿಚ್ಚು ಇಟ್ಟರು
ಬದುಕಿನೊಂದಿಗೆ ಇವರ ಚೆಲ್ಲಾಟ

ಬಂಗಲೆಗಳಲ್ಲ ಅರಮನೆಗಳಲ್ಲ
ಪ್ರಕೃತಿಯೇ ನಮ್ಮ ಮಡಿಲು
ನಮ್ಮಷ್ಟಕ್ಕೆ ನಮ್ಮನ್ನು ಬಿಡಿ ಬದುಕಲು
ಕೇಳುವವರ್‍ಯಾರು ನಮ್ಮ ಆಕ್ರಂದನ

ಅಪ್ಪಚ್ಚಿಯಾದ ಮರಿಗಳೆಷ್ಟೋ
ಚೂರು ಚೂರಾದ ತತ್ತಿಗಳೆಷ್ಟೋ
ಗೂಡ ಕಟ್ಟಲೆಲ್ಲಿ ಮರಿ ಮಾಡಲೆಲ್ಲಿ?
ಎಲ್ಲಿ ಹಾಡಲಿ ಜೋಗುಳವ

ಹಸಿರುಸಿರೇ ನಮ್ಮ ಜೀವ
ಕುತ್ತು ತಂದರು ಪ್ರಾಣವಾಯುವಿಗೆ
ಬಂದಿತು ಸಂಚಕಾರ ನಮ್ಮ ನೆಲೆಗೆ
ಪರಿಸರವಾದಿಗಳಲ್ಲಿ ಅಡಗಿಹರು?

ಸಾಲು ಮರದ ತಿಮ್ಮಕ್ಕನೇ
ಬಾ ನೋಡಿಲ್ಲಿ-
ಕರಗಸ ಕತ್ತಿ ಕೊಡಲಿ
ಯಮದೂತರ ಅಟ್ಟಹಾಸ

ರಸ್ತೆ ಅಗಲೀಕರಣದಲಿ
ನಿತ್ಯ ನಡೆಸುತಿಹರು
ಸಾಲು ಮರಗಳ ಮಾರಣ ಹೋಮ
ಆಗುವುದು ಪ್ರಕೃತಿ ವಿಕೃತಿ

ಇನ್ನೆಲ್ಲಿಯ ಚಿಲಿಪಿಲಿ ಕಲರವ
ಬೆಳ್ಳಿಚುಕ್ಕಿ ಮೂಡುವುದೆಂತು
ಕನಸುಗಳ ಕಟ್ಟುವವರ್‍ಯಾರು?
ರೋದನವ ಕೇಳುವವರಾರು?
*****
೨೭ ಮೇ ೨೦೧೦ ರ ಸುಧಾದಲ್ಲಿನ ಎಳೆಯರ ಅಂಗಳದಲ್ಲಿ ಪ್ರಕಟ
೬-೬-೨೦೧೦ ರ ಸಂಯುಕ್ತ ಕರ್ನಾಟಕದ ಸಾಪ್ತಾಹಿಕ ಸೌರಭದಲ್ಲಿ ಪ್ರಕಟ.

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...