Home / ಕವನ / ಕವಿತೆ / ಬಜಾರಿನಲ್ಲಿ ಬುದ್ಧ….

ಬಜಾರಿನಲ್ಲಿ ಬುದ್ಧ….

ಬಜಾರಿನಲ್ಲಿ ಇದ್ದ ಬುದ್ಧ
ರಾಮ, ಕೃಷ್ಣ, ಶಿವ, ಗಾಂಧಿ
ಅಂಬೇಡ್ಕರ್ ಅವರ ಜೊತೆಗೆ ಕುಳಿತಿದ್ದ.

ಮೊಂಡು ಕೈ, ಹರಿದ ಅಂಗವಸ್ತ್ರ….
ಬುದ್ಧ ಹೌದೋ ಅಲ್ಲವೋ ಎಂದು
ಅನುಮಾನಿಸುವಷ್ಟು ಚಿಂದಿಯಾಗಿದ್ದ.

ಆದರವೇ ಜಾಜ್ವಲ್ಯಮಾನ ಕಣ್ಣುಗಳು
ಸೆಳೆದವು, ಹೊಳೆದವು ಫಳ ಫಳ
ಪುಳಕಿತಳಾಗಿ ಮನೆಗೆ ಕರೆದೆ, ಬಂದ.

ಒಣಗಿದ ಹೂವು, ಆರಿದ ದೀಪ, ಪಿನ್ನು,
ಪುಸ್ತಕ, ಎಂಜಲು ತಟ್ಟೆ, ಒಣಗಿದ ಬಟ್ಟೆ,
ಹಣ್ಣು-ತರಕಾರಿಯ ಒತ್ತರಿಸಿ, ಅಂಗೈಯಲ್ಲಿ
ಗುಡಿಸಿ, ಸಾರಿಸಿ ಜಾಗ ಮಾಡಿಕೊಟ್ಟೆ-
ಮೇಜಿನ ಮೂಲೆಯಲಿ ಕೂತ.

ಅವನು ಬುದ್ಧ
ಮೈತ್ರಿ-ಕರುಣೆಯ ಸಾಕಾರ
ಅವನದೇ ಮಾತು: ಸಂಸಾರ ದುಃಖಸಾಗರ
ಆಶೆಯೇ ದುಃಖಕ್ಕೆ ಮೂಲ, ಜೀವನವು ನಶ್ವರ.

ಮಾರನಿಗೊಲಿದಿದ್ದ ನಾವು ಅವನ ಮುಂದೆಯೆ
ಶುರು ಹಚ್ಚಿಕೊಂಡೆವು ವ್ಯವಹಾರ
ಮನೆ ಮಂದಿಯ ಮೋಹ, ಮದ, ಮತ್ಸರ
ಆತಂಕ, ಆವೇಶ, ದುಃಖ, ಕೋಪ
ಎಲ್ಲವೂ ಈಗವನ ಸಮ್ಮುಖ!

ದೂಷಣೆ, ಶೋಷಣೆ, ಘೋಷಣೆ
ಯುದ್ಧ-ಕದನ ವಿರಾಮಗಳಿಗೆ-
ಅವನೇ ಸಾಕ್ಷಿ, ಅವನದೇ ರಾಯಭಾರ.
ರೋಗ ರುಜಿನ, ಮರಣ ಎಲ್ಲವುಗಳಿಗೆ
ಅವನೇ ಕಾರಣ, ಅವನಿಂದಲೇ ಶಮನ!

ಅಷ್ಟಾಂಗ ಮಾರ್ಗಗಳಿಗೆ ನಮಿಸಿದೆವು ನಿಜ,
ಆಚರಿಸಿದೆವೋ ಅನುಮಾನ!
ಏರಿದ ಎತ್ತರ, ಇಳಿದ ಪ್ರಪಾತ,
ಕವಿದ ಕಾರ್ಮೋಡ, ಕರಗಿದ ಕಾವಳ-
ಇಲ್ಲದೆಯೂ ಇದ್ದಂತೆ, ಜೊತೆಗಿದ್ದ….

ಇಪ್ಪತ್ತು ವರುಷವಾಯಿತು ಬುದ್ಧ
ನಮ್ಮಲ್ಲಿಗೆ ಬಂದು-
ನಮ್ಮೊಂದಿಗೇ ನಿಂದು, ನೊಂದು, ಬೆಂದು;
ಈಗವನು ನಮ್ಮವನು, ನಮ್ಮಲ್ಲೇ ಒಂದು.

ಇನಿತೂ ಬದಲಾಗಿಲ್ಲ….ಅದೇ
ಗುಂಡು ಮುಖ, ತುಂಡು ಬಾಯಿ
ಮೊಂಡು ಕೈ, ಹರಿದ ಅಂಗವಸ್ತ್ರ,
ಅದೇ ಮೌನ, ಸಮಾಧಾನ

ನಾವೂ ಅಷ್ಟೆ, ಇನಿತೂ ಬದಲಾಗಿಲ್ಲ!
ಅದೇ ವೇಗ, ಅದೇ ಭೋಗ,
ಅದೇ ತನ್ಹಾ….ಅದೇ ತಲ್ಲಣ!!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...