Home / ಕವನ / ಕವಿತೆ / ಕನ್ನಡದ ಸಿರಿಕಂಠ ಶ್ರೀ ಕಾಳಿಂಗರಾಯ

ಕನ್ನಡದ ಸಿರಿಕಂಠ ಶ್ರೀ ಕಾಳಿಂಗರಾಯ

ಕನ್ನಡದ ಶ್ರೀಕಂಠ ಕಾಳಿಂಗರಾಯ
ಕನ್ನಡ ತಾಯ ದಯವಾಗಿ ನೀವು
ಕನ್ನಡದ ನೆಲದ ವರವಾಗಿ ನೀವು
ಆ ಅಂಥ ಉದಯದಲಿ
ನೀವಿದ್ದಿರಿ

ಎಬ್ಬಿಸಿದಿರಿ ಉದ್ದೀಪಿಸಿದಿರಿ
ಸತ್ತಂತೆ ಮಲಗಿದವರ ಎಚ್ಚರಿಸಿದಿರಿ
ಸುಮಧುರ ಗಾಯನದಿಂದ
ಹಾಡ ತುಂಬಿದಿರಿ ನಾಡ ತುಂಬಿದಿರಿ
ಪ್ರತಿಯೊಂದು ಪದಕೂ ಅರ್‍ಥ ತುಂಬಿದಿರಿ
ಕನ್ನಡ ಪುಷ್ಪೋದ್ಯಾನದ ತುಂಬಿಯೇ ಆದಿರಿ

ಕೇಳಿದವರ ಐಸಿರಿ
ರೋಮಾಂಚನಗೊಳಿಸಿದಿರಿ
ಜನಪದವನೆ ಕುಣಿಸಿದಿರಿ

ಕನ್ನಡ ನಾಡು ಋಣಿ ಕನ್ನಡ ಭಾಷೆ ಋಣಿ
ಓ ಮಹಾ ಗಾಯಕ
ಚೆಲುವ ಕನ್ನಡ ಕೋಗಿಲೆ
ಓ ಧ್ವನಿಗಳ ಖಣಿ
ಕನ್ನಡ ಕವಿಸಂಕುಲವೆ ನಿಮಗೆ ಋಣಿ

ಕಂಚಿನ ಕಂಠವೇ ಚಿನ್ನದ ಕಂಠವೇ
ಅದೇನು ಕಂಪನ ಅದೇನು ಗುಂಫನ
ಏನು ಇಳಿತ ಏನು ಭರತ
ಅದೇನು ಕರ್‍ಣರಸಾಯನ
ದೇವಳದ ಘಂಟಾನಾದವೋ
ಹಸುವಿನ ಮಣಿನಾದವೋ
ಶಂಖವೊ ಕೊಳಲೊ
ಝಣಝಣನೆ ಸುರಿದ ನಾಣ್ಯವೋ

ಭಾವ ಸುರಿಯಿತು ಎಲ್ಲಿಂದ
ಅರ್‍ಥ ಸೇರಿತು ಎಲ್ಲಿಂದ
ಎಲ್ಲ ನಿಮ್ಮ ಕಂಠದಿಂದ
ಕಂಠವೇನು ಜೇನು ಜೇನು
ನಿಮಗೆ ನೀವೆ ಮಾದರಿ
ಆದರೂ ಮುಂದಿನವರಿಗೆ ದಾರಿಯಾದಿರಿ

ಹೋಳಿಯ ಹುಣ್ಣಿಮೆ
ಓಕುಳಿ ಜೋಕುಳಿ
ದೀಪೋತ್ಸವ ನಿತ್ಯೋತ್ಸವ
ಗಂಗಾವತರಣ
ಅಳುವ ಕಡಲೊಳು ತೇಲಿ ಬರುತ್ತಿರುವ
ನಗೆಯ ಹಾಯಿದೋಣಿ
ಅದು ಆಗಲಿ ಇದು ಆಗಲಿ
ಅನಂತದಿಂದ ದಿಗಂತದಿಂದ
ಅಲ್ಲಿಂದಲಾಗಲಿ ಇಲ್ಲಿಂದಲಾಗಲಿ
ಎಲ್ಲಿಂದಾಗಲಿ, ಅವು ನಿಮ್ಮ ಕಂಠದಲ್ಲಿ ಬಂದು
ಜೀವ ಪಡೆದುವು

ಅಡಿಗರಾಗಲಿ ಬೇಂದ್ರೆಯಾಗಲಿ ವಿಶ್ವಕವಿ ಕುವೆಂಪುವಾಗಲಿ
ರಾಷ್ಟ್ರಕವಿ ಗೋವಿಂದ ಪೈ
ನಿಮ್ಮ ಸ್ವರದಿ ಮನೆಮನೆಗೆ ಬಂದು
ಕನ್ನಡಿಗರಿಗೆ ಸಿಕ್ಕರು
ಅವರು ಸೆರೆಸಿಕ್ಕರು

ಆಲಿಸಿದವರ ಪರವಶ
ಆಲಿಸಿದವರ ಮಂತ್ರಮುಗ್ಧ
ಆಲಿಸಿದವರ ತನ್ಮಯ
ಆಲಿಸಿದವರ ಮೈಪುಳಕ

ಹಾಡು ಕಳಕೊಂಡರೆ ನಾವು
ನಾವು ಕಳಕೊಂಡಂತೆಯೆ ಎಂದು
ಹಿಡಿಸಿ ನಮಗೆ ಹಾಡಿನ ಮೋಹ

ಹಾಡಲೆಂದೇ ಬಂದ ಹಕ್ಕಿ
ಹಾಡಿ ಹಾರಿ ಹೋದಂತೆ
ಲಯವಾಗಿ ಮಹಾಲಯದಲ್ಲಿ
ಉಳಿದ ಬಳುವಳಿ ಮಹಾಪೂರ
ತಾಳ ಲಯ ಗಾನ ಗಾಯನ ವಾಹಿನಿ
ಮಹಾ ಧ್ವನಿ ಸಮ್ಮೋಹಿನಿ
ಇದು ಇಲ್ಲಿ ಆರಂಭ
ಇಲ್ಲಿಗಿದು ಮುಗಿಯದೆನ್ನುವ ಭರವಸೆಯೆ
ಕನ್ನಡಿಗರು ನಿಮಗೀಯುವ ನಮನ
*****

Tagged:

Leave a Reply

Your email address will not be published. Required fields are marked *

ಪೆಟ್ರೋಲ್ ವಾಸ್ತೆ ಮೂಗಿಗೆ “ಗಫ್” ಅಂತಾ ಬಡೀತು! ಐದಾರು ಕ್ಯಾನ್‌ಗಟ್ಟಲೆ ಮನೆ ಸುತ್ತಮುತ್ತ ಉಗ್ಗಿ ಬಾಗಿಲು ಕಿಟಕಿ ಸಂಧಿನಿಂದ ಧುಭುಧುಭು – ಪೆಟ್ರೋಲ್ ಸುರಿವಿದ ತೀರಿಗೆ ಅದು ಹಳ್ಳ ಕೊಳ್ಳವಾಗಿ ಮನೆಯೊಳಕ್ಕೆ ಜಗ್ಗಿ ಹರಿದು ಬಂತು! ಮಲಗಿದ್ದ ಹಾಸಿಗೆ, ದಿಂಬು, ಹೊ...

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...