Home / ಕವನ / ಕವಿತೆ / ಕನ್ನಡದ ಸಿರಿಕಂಠ ಶ್ರೀ ಕಾಳಿಂಗರಾಯ

ಕನ್ನಡದ ಸಿರಿಕಂಠ ಶ್ರೀ ಕಾಳಿಂಗರಾಯ

ಕನ್ನಡದ ಶ್ರೀಕಂಠ ಕಾಳಿಂಗರಾಯ
ಕನ್ನಡ ತಾಯ ದಯವಾಗಿ ನೀವು
ಕನ್ನಡದ ನೆಲದ ವರವಾಗಿ ನೀವು
ಆ ಅಂಥ ಉದಯದಲಿ
ನೀವಿದ್ದಿರಿ

ಎಬ್ಬಿಸಿದಿರಿ ಉದ್ದೀಪಿಸಿದಿರಿ
ಸತ್ತಂತೆ ಮಲಗಿದವರ ಎಚ್ಚರಿಸಿದಿರಿ
ಸುಮಧುರ ಗಾಯನದಿಂದ
ಹಾಡ ತುಂಬಿದಿರಿ ನಾಡ ತುಂಬಿದಿರಿ
ಪ್ರತಿಯೊಂದು ಪದಕೂ ಅರ್‍ಥ ತುಂಬಿದಿರಿ
ಕನ್ನಡ ಪುಷ್ಪೋದ್ಯಾನದ ತುಂಬಿಯೇ ಆದಿರಿ

ಕೇಳಿದವರ ಐಸಿರಿ
ರೋಮಾಂಚನಗೊಳಿಸಿದಿರಿ
ಜನಪದವನೆ ಕುಣಿಸಿದಿರಿ

ಕನ್ನಡ ನಾಡು ಋಣಿ ಕನ್ನಡ ಭಾಷೆ ಋಣಿ
ಓ ಮಹಾ ಗಾಯಕ
ಚೆಲುವ ಕನ್ನಡ ಕೋಗಿಲೆ
ಓ ಧ್ವನಿಗಳ ಖಣಿ
ಕನ್ನಡ ಕವಿಸಂಕುಲವೆ ನಿಮಗೆ ಋಣಿ

ಕಂಚಿನ ಕಂಠವೇ ಚಿನ್ನದ ಕಂಠವೇ
ಅದೇನು ಕಂಪನ ಅದೇನು ಗುಂಫನ
ಏನು ಇಳಿತ ಏನು ಭರತ
ಅದೇನು ಕರ್‍ಣರಸಾಯನ
ದೇವಳದ ಘಂಟಾನಾದವೋ
ಹಸುವಿನ ಮಣಿನಾದವೋ
ಶಂಖವೊ ಕೊಳಲೊ
ಝಣಝಣನೆ ಸುರಿದ ನಾಣ್ಯವೋ

ಭಾವ ಸುರಿಯಿತು ಎಲ್ಲಿಂದ
ಅರ್‍ಥ ಸೇರಿತು ಎಲ್ಲಿಂದ
ಎಲ್ಲ ನಿಮ್ಮ ಕಂಠದಿಂದ
ಕಂಠವೇನು ಜೇನು ಜೇನು
ನಿಮಗೆ ನೀವೆ ಮಾದರಿ
ಆದರೂ ಮುಂದಿನವರಿಗೆ ದಾರಿಯಾದಿರಿ

ಹೋಳಿಯ ಹುಣ್ಣಿಮೆ
ಓಕುಳಿ ಜೋಕುಳಿ
ದೀಪೋತ್ಸವ ನಿತ್ಯೋತ್ಸವ
ಗಂಗಾವತರಣ
ಅಳುವ ಕಡಲೊಳು ತೇಲಿ ಬರುತ್ತಿರುವ
ನಗೆಯ ಹಾಯಿದೋಣಿ
ಅದು ಆಗಲಿ ಇದು ಆಗಲಿ
ಅನಂತದಿಂದ ದಿಗಂತದಿಂದ
ಅಲ್ಲಿಂದಲಾಗಲಿ ಇಲ್ಲಿಂದಲಾಗಲಿ
ಎಲ್ಲಿಂದಾಗಲಿ, ಅವು ನಿಮ್ಮ ಕಂಠದಲ್ಲಿ ಬಂದು
ಜೀವ ಪಡೆದುವು

ಅಡಿಗರಾಗಲಿ ಬೇಂದ್ರೆಯಾಗಲಿ ವಿಶ್ವಕವಿ ಕುವೆಂಪುವಾಗಲಿ
ರಾಷ್ಟ್ರಕವಿ ಗೋವಿಂದ ಪೈ
ನಿಮ್ಮ ಸ್ವರದಿ ಮನೆಮನೆಗೆ ಬಂದು
ಕನ್ನಡಿಗರಿಗೆ ಸಿಕ್ಕರು
ಅವರು ಸೆರೆಸಿಕ್ಕರು

ಆಲಿಸಿದವರ ಪರವಶ
ಆಲಿಸಿದವರ ಮಂತ್ರಮುಗ್ಧ
ಆಲಿಸಿದವರ ತನ್ಮಯ
ಆಲಿಸಿದವರ ಮೈಪುಳಕ

ಹಾಡು ಕಳಕೊಂಡರೆ ನಾವು
ನಾವು ಕಳಕೊಂಡಂತೆಯೆ ಎಂದು
ಹಿಡಿಸಿ ನಮಗೆ ಹಾಡಿನ ಮೋಹ

ಹಾಡಲೆಂದೇ ಬಂದ ಹಕ್ಕಿ
ಹಾಡಿ ಹಾರಿ ಹೋದಂತೆ
ಲಯವಾಗಿ ಮಹಾಲಯದಲ್ಲಿ
ಉಳಿದ ಬಳುವಳಿ ಮಹಾಪೂರ
ತಾಳ ಲಯ ಗಾನ ಗಾಯನ ವಾಹಿನಿ
ಮಹಾ ಧ್ವನಿ ಸಮ್ಮೋಹಿನಿ
ಇದು ಇಲ್ಲಿ ಆರಂಭ
ಇಲ್ಲಿಗಿದು ಮುಗಿಯದೆನ್ನುವ ಭರವಸೆಯೆ
ಕನ್ನಡಿಗರು ನಿಮಗೀಯುವ ನಮನ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...