Home / ಕವನ / ಕವಿತೆ / ಮಾನ್ಯರಿಗೆ ಶರಣು

ಮಾನ್ಯರಿಗೆ ಶರಣು

ಮಾನ್ಯರಿಗೆ ಶರಣು ಜನ
ಸಾಮಾನ್ಯರಿಗೆ ಶರಣು
ಅನ್ಯರಿಗೆ ಶರಣು ಅನನ್ಯರಿಗೆ ಶರಣು
ಗಣ್ಯರಿಗೆ ಶರಣು ನಗಣ್ಯರಿಗೆ ಬಹಳ ಶರಣು

ಹೊನ್ನೆ ಮರದಡಿ ಕೂತವರಿಗೆ
ಚೆನ್ನೆಯಾಡುವ ಕನ್ನೆಯರಿಗೆ
ಕನ್ನಡದ ಜಾಣೆಯರಿಗೆ
ಕನ್ನಡದ ಜಾಣರಿಗೆ ಬಹಳ ಶರಣು

ಮೊನ್ನೆ ಹೋದವರಿಗೆ
ನಿನ್ನೆ ಬಂದವರಿಗೆ
ಮುನ್ನ ಇದ್ದವರಿಗೆ
ಇನ್ನು ಬರುವವರಿಗೆ ಬಹಳ ಶರಣು

ಅಂಕೆಗಳಲಿ ಸೊನ್ನೆಗೆ
ಸಂಕದಲಿ ದಾರಿ ಬಿಡುವವರಿಗೆ
ತೆಂಕಣ ಗಾಳಿಗೆ
ಮಂಕು ಪರಿಹರಿಸುವ ವಿದ್ಯೆಗೆ ಬಹಳ ಶರಣು

ನಿಂತ ಗಿರಿಗಳಿಗೆ
ಹರಿವ ತೊರೆಗಳಿಗೆ
ತುಂಬಿದ ಕೆರೆಗಳಿಗೆ
ಬೀಳುವ ಮಳೆಹನಿಗಳಿಗೆ ಬಹಳ ಶರಣು

ಕತೆಗೆ ಕತೆ ಹೇಳುವರಿಗೆ
ಕವಿತೆಗೆ ಕವಿತೆ ಕಟ್ಟುವರಿಗೆ
ಸುಖದಂತೆ ವ್ಯಥೆಯ ಹಂಚಿಕೊಳ್ಳುವವರಿಗೆ
ಪೃಥ್ವಿಯೇ ಸ್ವರ್‍ಗವೆಂದು ತಿಳಿದವರಿಗೆ ಬಹಳ ಶರಣು

ಕೋಲಾಟದವರಿಗೆ ಬಯಲಾಟದವರಿಗೆ
ಡೊಳ್ಳುಕುಣಿತದವರಿಗೆ
ಹಲಗೆ ಬಡಿವವರಿಗೆ
ಉಳುವ ರೈತರಿಗೆ ಬಹಳ ಶರಣು

ವೈದ್ಯರಿಗೆ ವಕೀಲರಿಗೆ
ಮದ್ಯ ಕುಡಿಯದವರಿಗೆ
ಗದ್ಯ ಬರೆವವರಿಗೆ ಪದ್ಯ ಓದುವರಿಗೆ
ಸದ್ಯ ದುಡಿವವರಿಗೆ ಬಹಳ ಶರಣು

ದೇಶವನಾಳುವ ಪ್ರಜೆಗಳಿಗೆ
ವೇಷ ಹಾಕುವ ನಟರಿಗೆ
ಕಾಶಾಯವಸ್ತ್ರಧಾರಿಗಳಿಗೆ
ಬೇಸಾಯಗಾರರೆಲ್ಲರಿಗೆ ಬಹಳ ಶರಣು

ದೀನರಿಗೆ ದಲಿತರಿಗೆ
ದಾನ ನೀಡುವ ಉದಾರಿಗಳಿಗೆ
ಜ್ಞಾನಿಗಳಿಗೆ ವಿಜ್ಞಾನಿಗಳಿಗೆ
ಧ್ಯಾನಿಗಳಿಗೆ ಮಹಾಮೌನಿಗಳಿಗೆ ಬಹಳ ಶರಣು

ನಕ್ಷತ್ರಗಳಿಗೆ ಶರಣು
ಸಕಲ ಸಾಕ್ಷಿಗಳಿಗೆ ಶರಣು
ಅಕ್ಷಯ ಕನಸುಗಳಿಗೆ ಶರಣು
ಕನಸ ರಕ್ಷಿಸುವ ಕವಿಗಳಿಗೆ ಬಹಳ ಶರಣು
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...