Home / ಲೇಖನ / ಇತರೆ / ಪ್ರಗತಿ ಅಥವಾ ದಾಸ್ಯವಿಮೋಚನೆ – ೧೧ನೆಯ ಖಂಡ – ಆಸ್ಥೆ-ಕಾಳಜಿ

ಪ್ರಗತಿ ಅಥವಾ ದಾಸ್ಯವಿಮೋಚನೆ – ೧೧ನೆಯ ಖಂಡ – ಆಸ್ಥೆ-ಕಾಳಜಿ

“ಹೆಚ್ಚು ಕೆಲಸಮಾಡುವವನಿಗಿಂತ ಕಾಳಜಿಪೂರ್‍ವಕ ಕೆಲಸ ಮಾಡುವವನು ನನಗೆ ಅತ್ಯಂತ ಪ್ರಿಯೆನಾಗುವನು” ಎಂದು ಓರ್ವ ಬ್ರಿಟಿಶ ಮಂತ್ರಿವರ್‍ಯನು ಅಂದಿದ್ದಾನೆ. ಆಚಾರ್ಯರು ಕುದುರೆಯ ಹಿಂದೆಬಿದ್ದದ್ದನ್ನೆಲ್ಲ ತಕ್ಕೊಂಡುಬಾ ಎಂದು ಹೇಳಿದ ಮಾತ್ರದಿಂದ ಬುದ್ಧಿಗೇಡಿ ಭಗವಂತನು ಕುದುರೆಯ ಲದ್ದಿಯನ್ನು ಕೂಡ ಹಸಿಬೆಯಲ್ಲಿ ತುಂಬಿತಂದಂತೆ, ಕಾರ್‍ಯಗಳ ಮಹತ್ವವನ್ನು ತಿಳಿಯದೆ ಕೆಲಸ ಮಾಡುವವರು ಬಹಳ. ಕಾರ್‍ಯದ ಮಹತ್ವ ತಿಳಿಯುವದಕ್ಕೆ ಮನಸ್ಸಿನಲ್ಲಿ ಆಸ್ಥೆ-ಕಾಳಜಿ ವಹಿಸಬೇಕಾಗುವದು. ಆಸ್ಥೆಯು ಬೆಳೆ ಬೆಳೆದಂತೆ ಪ್ರಯತ್ನಗಳು ಎಂದೂ ನಿರರ್‍ಥಕವಾಗುವದಿಲ್ಲ.

ಹಿಂದಕ್ಕೆ ಆಗಿ ಹೋದ ಮಂತ್ರಿವರ್‍ಯ ಯೋಗಂಧರಾಯಣ, ಅಮಾತ್ಯರಾಕ್ಷಸ ಮೊದಲಾದವರು ಅತ್ಯಂತ ಆಸ್ಥೆಯಿಂದ ಕೆಲಸಮಾಡುತ್ತಿದ್ದದರಿಂದಲೇ ಅವರು ಸುಪ್ರಸಿದ್ಧ ಪ್ರಧಾನರಾಗಿದ್ದರು. ಮೈಸೂರ ಮಾಜಿ ದಿವಾಣರಾದ ಸರ ಶೇಷಾದ್ರಿ ಅಯ್ಯನವರು ಒಳ್ಳೇ ಆಸ್ಥೆಯಿಂದ ಕಾರ್ಯಭಾರವನ್ನು ಸಾಗಿಸಿದ್ದರಿಂದಲೇ ಅಂಥ ಕಠಿಣ ಪ್ರಸಂಗದಲ್ಲಿ ಕೂಡಾ ಮೈಸೂರ ರಾಜ್ಯವು ಪ್ರಗತಿಯನ್ನು ಹೊಂದಿತು. ನಮ್ಮ ವಿಷಯಕ್ಕೇ ನಮ್ಮಲ್ಲಿ ಆಸ್ಥೆಯಿಲ್ಲದಿರಲು ಮಂದಿಯ ಬಗ್ಗೆ ನಾವು ಆಸ್ಥೆ ಪಡುವ ಬಗೆಯಾದರೂ ಹೇಗೆ?

“ತನ್ನಂತೆ ಪರರಬಗೆದೊಡೆ ಕೈಲಾಸಬಿನ್ನಣವಳ್ಳ್ಳು” ಎಂಬ ಸರ್ವಜ್ಞ ಕವಿಯ ಉಕ್ತಿಯು ಮನನೀಯವಾಗಿದೆ. ಖರೇ ಆಸ್ಥೆಯಿಂದಾಗಲಿ, ತೋರಿಕೆಯ ಡಂಭಾಚಾರದ ಆಸ್ಥೆಯಿಂದಾಗಲಿ ನಾವು ನಮ್ಮ ಕೆಲಸಗಳನು ಹೇಗಾದರೂ ಸಾಗಿಸಿಕೊಳ್ಳುತ್ತಿರುವೆವು. ಆದರೆ ಪರರ ಕೆಲಸದಲ್ಲಿ ನಮ್ಮ ಆ ಡಂಭಾಚಾರದ ಆಸ್ಥೆಯನ್ನು ಕೂಡ ಉಪಯೋಗಿಸ ಹೋಗದೆ, “ಹತ್ತಿದಲ್ಲಿ ಹತ್ತಿತು ಹಾರಿದಲ್ಲಿ ಹಾರಿತು” ಎನ್ನುವಂತೆ ದುರ್ಲಕ್ಷ್ಯಮಾಡುವೆವು. ಇದರಿಂದ ಕಾರ್ಯಕೆಟ್ಟು ಹಾನಿಯೊಗುವ ಮಾನಕ್ಕಿಂತ, ನಮ್ಮ ವೃತ್ತಿಯು ಕೆಟ್ಟು ಪ್ರಗತಿಹೀನವಾಗುವ ಮಾನವು ಹೆಚ್ಚಾಗುವದು. ಆದ್ದರಿಂದ ಪ್ರಗತಿಪರನು ಪ್ರಗತಿಹೊಂದುವದಕ್ಕಾಗಿ ಮಾಡಬೇಕಾದ ಕೆಲಸವನ್ನು ಒಳ್ಳೇ ಆಸ್ಥೆಯಿಂದ ಮಾಡಿ ಪ್ರಗತಿಹೊಂದಬೇಕು.
*****
ಮುಂದುವರೆಯುವುದು

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...