Home / ಕವನ / ಕವಿತೆ / ಗುಲಾಮ ಗೀತೆ

ಗುಲಾಮ ಗೀತೆ

ಬೇರು ಕಿತ್ತ ಮರ, ನಾರು ನನ್ನ ನರ
ಹಗ್ಗವಾಯಿತು ನಿಮಗೆ ಉರುಳು ನನಗೆ
ಸಾವ ನೇಯುವ ನೂಲು, ಭಾವ ಬತ್ತಿದ ಮಾಲು
ಬಣ್ಣ ಬಣ್ಣದ ನೇಯ್ಗೆ ಬಿದ್ದೆ ಬಲೆಗೆ.

ನಿಮ್ಮ ಅನ್ನದ ಅಗುಳು, ಯಾರೂ ತಿನ್ನದ ಉಗುಳು
ಕಾಲು ಒತ್ತುವ ಕಾಲ-ಎಲ್ಲ ನಾನು
ಹುಟ್ಟು ಹಬ್ಬದ ಕಾಳು, ಸತ್ತ ಸೂಚನೆ ಕೂಳು
ನಡುವೆ ನಡ ಮುರಿದಂಥ ನಗುವು ನಾನು.

ಕಲ್ಲುಕೋಟೆಯ ಬೆವರು, ಗುಡಿಯ ಗೋಪುರ ಸೂರು
ಆಣೆಕಟ್ಟ ನಿಟ್ಟುಸಿರು, ನೀರಾದ ನಂಬಿಗನು
ಓಣಿ ಓಣಿಯ ಪೊರಕೆ, ಶುದ್ಧ ಬಯ್ಗಳ ಹರಕೆ
ಗುಡಿಸುತ್ತ ಗುಡಿ-ಸುತ್ತ ತಾನೇ ಕಸವಾದವನು.

ಯುದ್ಧಕಾಲದ ಕವಚ, ನಿದ್ದೆ ಕಾಲದ ಕಾವಲು
ಕಾಲದ ಕಾಲಿಗೆ ಮೆಟ್ಟು ಮೈಯ್ಯಾದೆನು
ಈಜು ಬುರುಡೆಯ ರೀತಿ ಮೇಲೆದ್ದು ಬರುವಂಥ
ಕನಸುಗಳು ಸುಟ್ಟು ಕರುಕಾದೆನು.

ನಿಮ್ಮ ಕನಸಿನ ಮನಸು, ಸುಳ್ಳ ಹಿಂದಿನ ಸತ್ಯ
ಕಾನೂನು ಕಂಬಿಗಳ ಕರುಳು ನಾನು
ಚಳಿಗೆ ಉಣ್ಣೆಯ ಉಡುಪು, ಬಿಸಿಲು ಕಾಲದ ಕೊಡೆ
ಗುಡುಗು ಸಿಡಿಲುಗಳ ಕೊರಳು ನಾನು.

ನಿಮ್ಮ ಮದುವೆಗೆ ತಾಳಿ, ಹಾಸಿಗೆಯು ಪ್ರಸ್ತಕೆ
ಜೀವರಸ ಧಾರೆಯ ಎರೆದು ಕೊಟ್ಟಾಯ್ತು
ಜೋಲಿ ಹೊಡೆಯದ ನಾನು ಜೋಗುಳದ ಹಾಡು
ಅತ್ತು ಕರೆದರೆ ಇಲ್ಲಿ ಕತ್ತು ಹೋದೀತು.

ಏನ ಹೇಳಲಿ ನಾನು ಕಣ್ಣ ಕಸಿದರೊ ನನ್ನ
ಹೇಳುತ್ತ ಬಂದದ್ದೆ ನೋಟವಾಯ್ತು
ನಾಲಗೆಯ ಕಿತ್ತು ನೆತ್ತರ ಕುಡಿದರೊ
ಅಮಲಲ್ಲಿ ಅಂದದ್ದೆ ವೇದವಾಯ್ತು.

ಹುಲಿಯ ವೇಷಕೆ, ನನ್ನ ಚರ್‍ಮ ತಮಟೆ
ನೋವ ಕಾಯಿಸಿದಾಗ ಕೆರಳುಶಬ್ದ
ಗಬ್ಬ ಹತ್ತಿದ ಗೀತೆ ಹೇಗೆ ಹಾಡಲಿ ನಾನು
ನಿಮ್ಮ ಕಾಲ್ತುಳಿತಕ್ಕೆ ಜೀವ ಸ್ತಬ್ಧ.

ಒತ್ತೆಯಾದವು ಚಿತ್ತ ಮಾತು ಮೈ ಮುನಿಸು,
ತಿನಿಸುಗಳ ರಾಜ್ಯದಲಿ ಮೇವು ನಾನು
ಗೋಳ ಗೀತೆಯು ಇಲ್ಲಿ ಗುಲಾಮ ಗುರುವೆ
ಮುಕುತಿಯೆಂದರೆ ನಮ್ಮ ಮಣ್ಣು ಹುಣ್ಣು.

ಉದ್ದ ಹಾಸಿದ ನಿಮ್ಮ ಹೆಬ್ಬಾವ ಇತಿಹಾಸ
ಸೀಳಿ ಬಂದೀತು ಸತ್ಯ ನಾಳೆ ಬೆಳಕು
ಹೂತ ಭೂತದ ಬೆವರು ವರ್‍ತಮಾನದ ನೀರು
ಹರಿದೀತು ನೆಲ ತುಂಬ ತೆನೆಯು ತೂಗೀತು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...