Home / ಕವನ / ಕವಿತೆ / ಅಪ್ಪ ಸತ್ತಾಗ!

ಅಪ್ಪ ಸತ್ತಾಗ!

ಅಪ್ಪ ಸತ್ತಾಗ! ನಾ ಇನ್ನು ಚಿಕ್ಕವನು|
ಗೋಲಿ ಆಡುವ ವಯಸ್ಸು
ಸದಾ ಟಿ.ವಿ ನೋಡುವ ಮನಸು||

ಏನೋ ಪೋನ್ ಬಂತು
ಎಲ್ಲ ಗುಸುಗುಸು ಮಾತು
ಅಮ್ಮನಿಗೆ ಭಯ ದನಿಯ ಕಂಪನ|
ಅಂದು ತಡವಾಗಿ ಚಿಕ್ಕಪ್ಪ ಹೇಳಿದರು
ನಿನ್ನ ಅಪ್ಪ ಇನ್ನಿಲ್ಲವೆಂದು|
ನನಗೆ ಏನೂ ಅನ್ನಿಸಲಿಲ್ಲ ಅಂದು
ಎಲ್ಲರೂ ಗೊಳೋ ಎಂದು ಅಳುತ್ತಿದ್ದರು||
ನನಗೆ ಅಳುಬರುತ್ತಿರಲಿಲ್ಲ

ಅಳುವವರ ನೋಡಿದರೂ
ಅರ್ಥವಾಗುತ್ತಿರಲಿಲ್ಲ|
ಬಂದ ಸಂಬಂಧಿಕರೆಲ್ಲಾ
ನನ್ನ ನೋಡಿದೊಡನೆ ಅವರ
ಕಣ್ಣುಗಳು ತುಂಬಿಕೊಳ್ಳುತ್ತಿದ್ದವು||

ಅಪ್ಪ ನಿನ್ನೆ ಹೊರಡುವಾಗ ಎಂದಿನಂತೆ
ಟಾಟ ಮಾಡಿದ್ದು ನನ್ನ ಕಣ್ಣಲ್ಲಿಯೇ ಇತ್ತು
ಆ ಟಾಟದಲ್ಲಿ ಏನೋ ವಿಶೇಷವೆನಿಸಿತ್ತು|
ಆಗ ಅನ್ನಿಸಿರಲಿಲ್ಲ ಅದುವೆ ನನ್ನಾ
ನನ್ನ ತಂದೆಯ ಕೊನೆಯ ಮಿಲನಕ್ಷಣವೆಂದು|
ರಸ್ತೆ ಅಪಘಾತ ಇಂಥಾ ಆಪತ್ತತರುತ್ತದೆಂದು
ನಾವು ಯಾರೂ ಊಹಿಸಿರಲಿಲ್ಲವೆಂದು||

ಅಪ್ಪ ಹೊರಗೆ ಹೂವಿನ ಹಾಸಿಗೆಯಲಿ
ಮಲಗಿದಂತೆ ನನಗೆ ಕಾಣಿಸುತ್ತಿತ್ತು|
ಮುಖಮಾತ್ರ ಕಾಣುತಿತ್ತು
ಬೇರೆಲ್ಲಾ ಬ್ಯಾಂಡೇಜು ಸುತ್ತಿತ್ತು|
ಮನೆತುಂಬ ಜನ, ಸಾಂಬ್ರಾಣಿ ಹೊಗೆ
ಕಣ್ಣು ಉರಿಯುತಿತ್ತು
ನೀಲಗಿರಿ‌ಎಣ್ಣೆ ವಾಸನೆ ಜಾಸ್ತಿಯೆನಿಸುತ್ತಿತ್ತು||

ಸೂರ್‍ಯ ಇಳಿಯುತ್ತಿದ್ದ ಸಮಯ
ಯಾರೋ ಮರದ ಸಾಮಾನುಗಳ ತಂದರು|
ಏನೋ ಚೌಕಾಕಾರದಂತೆ ಕಟ್ಟಿದರು
ಅದರಮೇಲೆ ಅಪ್ಪನ ಮಲಗಿಸಿದರು|
ಎಲ್ಲರೂ ಹೂ ಪತ್ರೆಗಳ ಹಾಕಿ ಹೊತ್ತೊಯ್ದರು
ಚಿಕ್ಕಪ್ಪನೇ ಎಲ್ಲಾ ಕಾರ್‍ಯವ ಮಾಡಿ
ಮುಗಿಸಿದರು||

ಆಜ್ಜಿ ಅಜ್ಜ ನಮ್ಮನು ಕರೆದುಕೊಂಡೋದರು
ಎಷ್ಟೋ ದಿನ ನೆಲ ಹಿಡಿದ
ಆಮ್ಮ ಮೇಲೆದ್ದರು|
ಸಣ್ಣದೊಂದು ಕೆಲಸಹಿಡಿದರು
ಬದುಕು ಕುಂಟುತಾ ಸಾಗಿ
ನನ್ನ ಶಾಲೆ ಹೇಗೋ ಮುಗಿಯಿತು|
ಆಮ್ಮ ಮತ್ತು ನನ್ನನು
ಮಾವಂದಿರು, ಚಿಕ್ಕಪ್ಪಂದಿರು ಎಲ್ಲಾ
ಚೆನ್ನಾಗಿ ನೋಡಿಕೊಂಡರಿಲ್ಲಿಯವರೆಗೆ||

ಆದರೆ ಏನೋ ಕೊರತೆ
ಏನೋ ಮಹತ್ವದ ಎಂದೋ
ಕಳೆದುಕೊಡ ಭಾವ ಕಾಡುತ್ತಿದೆ|
ಈಗ ಒಬ್ಬನೇ ಅಳುತ್ತಿರುವೆ
ಒಮ್ಮೊಮ್ಮೆ ಅಪ್ಪ ಎಲ್ಲಿ ಎಂದು
ಯಾರು ಸಂತೈಸುವರಿಲ್ಲ ಬಂದು|
ಅಮ್ಮನಿಗೆ ನಾನು, ನನಗೆ ಅಮ್ಮನೇ ಬಂಧು||
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...