Home / ಕವನ / ಕವಿತೆ / ಬೇಸರವೇತಕೋ ಮನವೇ

ಬೇಸರವೇತಕೋ ಮನವೇ

ನೇಸರದಾ ತಂಪಲ್ಲಿ ಈಶನಿಹನೋ
ಬೇಸರವೇತಕೋ ಮನವೇ

ಈಶ ಮಹೇಶ ಪ್ರಭು ಮಲ್ಲೇಶ
ಈಶ ಲಿಂಗೇಶ ಸರ್ವೇಶನವನು
ಬೇಸರವೇತಕೋ ಮನವೇ

ಸತಿ ಶಕ್ತಿಯು ಸಸ್ಯ ಶ್ಯಾಮಲೆ
ಜೀವ ಕೋಟಿಗೆ ಉಸಿರಾಗಿಹಳು
ಬೇಸರವೇತಕೋ ಮನವೇ

ರೆಂಬೆಕೊಂಬೆಗಳಲ್ಲಿ ಹಸಿರು ಎಲೆ
ಬಣ್ಣ ಚಿತ್ತಾರ ನಾದ ಇಂಚರದಲಿ
ಈಶನು ಬೇಸರವೇತಕೋ ಮನವೇ

ಸುಯ್‌ಗುಟ್ಟುವ ತಂಗಾಳಿ ಧರೆ ಆಗಸ
ಕಲ್ಲು ಮಣ್ಣು ಬಂಡೆ ದಡದದಲ್ಲಿಹನು
ಬೇಸರವೇತಕೋ ಮನವೇ

ಧರ್ಮ ಕರ್ಮ ಮರ್ಮ ಭೇದಗಳಲ್ಲಿ
ಸುಳ್ಳು ಮೋಸ ಕಪಟ ವಂಚನೆ ಮೋಹದಲ್ಲಿಹನೊ
ಎಚ್ಚರ! ಬೇಸರವೇತಕೋ ಮನವೇ

ನ್ಯಾಯ ಅನ್ಯಾಯಗಳ ಬೆಲೆಯ ಕಟ್ಟಿ ಹಿಡಿದು
ನೋಡುವಾತನು ಜನ್ಮ ಚಕ್ರದಾತ ಮುಕ್ಕಣನೂ
ಬೇಸರವೇತಕೋ ಮನವೇ

ವೇಷಭೂಷಣ ಜಂಗಮ ಸಂಗಮ ಉಂಬಲಿಂಗ
ಮಹೇಂದ್ರನೂ ಮಸಣವಾಸಿ ರುದ್ರನಿವನು
ಬೇಸರವೇತಕೋ ಮನವೇ

ದಾನ ಮಾನಿಯೂ ಅನ್ನದಾತ ಯೋಗಿಯು
ಭಾಗಿಯಾಗಿ ಮೌನದಲ್ಲಿ ಅವನು
ಬೇಸರವೇತಕೋ ಮನವೇ

ಶಿಷ್ಟನಾಗಿ ವಿಶಿಷ್ಟ ಜ್ಞಾನಿಯಾಗೋ
ಬೇಸರವೆಂದರೆ ಅರ್ಥವಿಲ್ಲ ಕಾಯಕ
ಸಿದ್ದಿ ಮಾಯಕ ಭವಭಾವ ಸಿದ್ದ ನೀನು
ಸರ್ವಾಂತರ್ಯಾಮಿ ಅವನ ಕಾಣಬೇಕು ಮನುಜ

ಬೇಸರವಿಲ್ಲದ ನೇಸರ ತಂಪಲ್ಲಿ
ವಿಹರಿಸು ಚೈತನ್ಯ ತುಂಬಿ
ನೇಸರನ ಗೆಲುವಿನ ಹಾದಿಯಲಿ
ನಡೆಯಬೇಕು ಮನುಜ
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...