Home / ಕವನ / ಕವಿತೆ / ಬೇಸರವೇತಕೋ ಮನವೇ

ಬೇಸರವೇತಕೋ ಮನವೇ

ನೇಸರದಾ ತಂಪಲ್ಲಿ ಈಶನಿಹನೋ
ಬೇಸರವೇತಕೋ ಮನವೇ

ಈಶ ಮಹೇಶ ಪ್ರಭು ಮಲ್ಲೇಶ
ಈಶ ಲಿಂಗೇಶ ಸರ್ವೇಶನವನು
ಬೇಸರವೇತಕೋ ಮನವೇ

ಸತಿ ಶಕ್ತಿಯು ಸಸ್ಯ ಶ್ಯಾಮಲೆ
ಜೀವ ಕೋಟಿಗೆ ಉಸಿರಾಗಿಹಳು
ಬೇಸರವೇತಕೋ ಮನವೇ

ರೆಂಬೆಕೊಂಬೆಗಳಲ್ಲಿ ಹಸಿರು ಎಲೆ
ಬಣ್ಣ ಚಿತ್ತಾರ ನಾದ ಇಂಚರದಲಿ
ಈಶನು ಬೇಸರವೇತಕೋ ಮನವೇ

ಸುಯ್‌ಗುಟ್ಟುವ ತಂಗಾಳಿ ಧರೆ ಆಗಸ
ಕಲ್ಲು ಮಣ್ಣು ಬಂಡೆ ದಡದದಲ್ಲಿಹನು
ಬೇಸರವೇತಕೋ ಮನವೇ

ಧರ್ಮ ಕರ್ಮ ಮರ್ಮ ಭೇದಗಳಲ್ಲಿ
ಸುಳ್ಳು ಮೋಸ ಕಪಟ ವಂಚನೆ ಮೋಹದಲ್ಲಿಹನೊ
ಎಚ್ಚರ! ಬೇಸರವೇತಕೋ ಮನವೇ

ನ್ಯಾಯ ಅನ್ಯಾಯಗಳ ಬೆಲೆಯ ಕಟ್ಟಿ ಹಿಡಿದು
ನೋಡುವಾತನು ಜನ್ಮ ಚಕ್ರದಾತ ಮುಕ್ಕಣನೂ
ಬೇಸರವೇತಕೋ ಮನವೇ

ವೇಷಭೂಷಣ ಜಂಗಮ ಸಂಗಮ ಉಂಬಲಿಂಗ
ಮಹೇಂದ್ರನೂ ಮಸಣವಾಸಿ ರುದ್ರನಿವನು
ಬೇಸರವೇತಕೋ ಮನವೇ

ದಾನ ಮಾನಿಯೂ ಅನ್ನದಾತ ಯೋಗಿಯು
ಭಾಗಿಯಾಗಿ ಮೌನದಲ್ಲಿ ಅವನು
ಬೇಸರವೇತಕೋ ಮನವೇ

ಶಿಷ್ಟನಾಗಿ ವಿಶಿಷ್ಟ ಜ್ಞಾನಿಯಾಗೋ
ಬೇಸರವೆಂದರೆ ಅರ್ಥವಿಲ್ಲ ಕಾಯಕ
ಸಿದ್ದಿ ಮಾಯಕ ಭವಭಾವ ಸಿದ್ದ ನೀನು
ಸರ್ವಾಂತರ್ಯಾಮಿ ಅವನ ಕಾಣಬೇಕು ಮನುಜ

ಬೇಸರವಿಲ್ಲದ ನೇಸರ ತಂಪಲ್ಲಿ
ವಿಹರಿಸು ಚೈತನ್ಯ ತುಂಬಿ
ನೇಸರನ ಗೆಲುವಿನ ಹಾದಿಯಲಿ
ನಡೆಯಬೇಕು ಮನುಜ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...