Home / ಕವನ / ಕವಿತೆ / ಸಹಜ ಧ್ಯಾನ

ಸಹಜ ಧ್ಯಾನ

ಹೂಕೋಸಿನ ರೂಪ ಬಣ್ಣದಲಿ
ಮನ ಲೀನ, ಮಲಿನ.
ಹೆಚ್ಚುತ್ತಾ ಮೆಚ್ಚುತ್ತಾ ಅದರ
ಬುಡದಲ್ಲೇ ಹರಿವ
ಪಿತಿಪಿತಿ ಹುಳು
ಕಂಡರೂ ಕಾಣದಂತೆ
ಚೆಲುವಿನಾರಾಧನಾ ಧ್ಯಾನ

ಪೀಠಸ್ಥ ಆದೇಶಕ್ಕೆ ಮಹಾಮೌನ.

ದಂಟು ಬೇಳೆ ಬೇಯಿಸಿ ಬಸಿದು
ಮೆಣಸು ಮಸಾಲೆ ಖಾರ
ಹದ ಬೆರೆಸಿ ಕುದಿಸಿ ಒಗ್ಗರಿಸಿ
ಬಸ್ಸಾರಿನ ರಸಗಂಧವ
ಆಘ್ರಾಣಿಸಿ ಹೀರಿ
ಕರುಳಿನಾಳದ ಬಾಯ್ಚಪ್ಪರಿಕೆ
ಮಹಾರಸದುನ್ಮಾದ ಧ್ಯಾನ
ಅಮಲಿನಲಿ ಮೈಮರೆವು

ಹೊರಳು ದಾರಿಯಲಿ ತಿಳಿವು.

ಬೆಳ್ಳುಳ್ಳಿ ಒಗ್ಗರಣೆ ಘಮ ಮೂಗಿಗಡರಿ
ಆ ಗಂಧದ ಬೆನ್ನು ಹಿಡಿದು
ಗಾಳಿಯಲೆಗಳ ಮೇಲೆ ಸವಾರಿ
ಬೀಸಿ ಕೆಡವುತ್ತದೆ ವಾಸನಾ ಧ್ಯಾನ
ತಪ್ಪುತ್ತದೆ ಪ್ರಭುತ್ವ ನಿರ್ದೇಶಿತ ದಾರಿ

ನಡೆದ ದಾರಿಯೇ ಸರಿ.

ಸಬ್ಬಸಿಗೆ ಸೊಪ್ಪಿನ
ವಿನ್ಯಾಸಕ್ಕೆ ಮೃದು ಸ್ಪರ್ಶಕ್ಕೆ
ಅದೆಂಥಾ ನವುರು ಮುದ.
ಮೃದುವಾಗಿ ಮುಟ್ಟುತ್ತಾ
ಆವರಿಸುವ ಆವಾಹಿಸುವ
ಹಿತವಾದ ಮಿಡಿತ
ಕಾಡುತ್ತದೆ ಅದೇ
ಸ್ಪರ್ಶಸುಖದ ಧ್ಯಾನ

ಅನುಭವಕ್ಕೇ ಬದ್ಧ ಮನ.

ಹೆಚ್ಚಲು ಕೈಗೆತ್ತಿಕೊಂಡ
ಈರುಳ್ಳಿಯ ಮೂಲ ಕಾಡಿ
ಪಕಳೆ ಪಕಳೆಗಳ ಬಿಡಿಸುತ್ತಾ ಹೋದಂತೆ
ಅದರಲ್ಲೇ ತಲ್ಲೀನ
ಆ ಕೌತುಕಕ್ಕೇ ಸೋತು
ಆವರಿಸುತ್ತದೆ ವಿಸ್ಮಿತ ಧ್ಯಾನ

ಅಳಿಸಿಹೋಗುತ್ತದೆ ಯಾರೋ ಬರೆದಿಟ್ಟ
ಅಲೌಕಿಕ ದಿವ್ಯ ಪುರಾಣ.

ಈ ನಿತ್ಯ ಪ್ರೀತಿಯ
ರೂಪ ರಸ ಗಂಧ ಸ್ಪರ್ಶ ವಿಸ್ಮಯಗಳ
ಮಾನುಷ ಸಹಜ ಧ್ಯಾನದಲಿ
ಅನುಕ್ಷಣದ ಎಚ್ಚರ
ಮತ್ತೆ ಮತ್ತ ಮೈಮರೆವಿನ
ಹುಚ್ಚು ಮೋಹದ ಜೂಟಾಟ.
ನಿಲುಕಲಾರದ ಎತ್ತರದಲೇ ಇರಲಿ ಬಿಡು
ಅವರಿಟ್ಟ ಸಂತ ಪೀಠ.

ನನಗಾಗಿ
ಈ ನೆಲದಲ್ಲೇ ಹೀಗೇ
ಈ ಕ್ಷಣ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...