Home / ಕವನ / ಕವಿತೆ / ಅಂದಿನ ರಾಮ-ಇಂದಿನ ರಾಮ

ಅಂದಿನ ರಾಮ-ಇಂದಿನ ರಾಮ

ಗೊತ್ತಿರುವುದು ನನಗೆ
ಪಂಚೆಯ ಶ್ರೀರಾಮ
ಹುಟ್ಟಿರುವುದು ಈಗ
ಚೆಡ್ಡಿಯ ಶ್ರೀರಾಮ ||

ರಾಮ ಹುಟ್ಟಿದ ಅಂದು
ತಾಯಿಯ ಗರ್‍ಭದಲಿ
ಅವನೆ ಹುಟ್ಟಿದ ಇಂದು
ಮಸೀದಿ ಮೂಲೆಯಲಿ

ಅಂದು ರಾಮನ ಜನನ
ಹಗಲು ಹೊತ್ತಿನಲ್ಲಿ
ಇಂದು ಅವನ ಜನನ
ತೂತು ಕತ್ತಲಲ್ಲಿ

ಅಂದು ಬಿಲ್ಲು ಬಾಣ
ಅವನ ಹೆಗಲಿನಲ್ಲಿ
ಇಂದು ಬಿದಿರು ದಂಡ
ಅದೇ ಬಗಲಿನಲ್ಲಿ

ಅಂದು ರಾಮನ ಹಣೆಗೆ
ಎರಡೊ ಮೂರೊ ನಾಮ
ಇಂದು ನಮ್ಮ ಹಣೆಗೆ
ರಕ್ತದ ಒಂದೇ ನಾಮ

ಅಂದು ಹೊರಟ ರಾಮ
ವನವಾಸದ ಕಡೆಗೆ
ಇಂದು ನಮ್ಮ ರಾಮ
ನವದೆಹಲಿಯ ಕಡೆಗೆ

ಅಂದು ರಾಮನಿಗೆ ಸಾಕು
ಕಾಡಲಿ ಪರ್‍ಣ ಕುಟೀರ
ಇಂದು ಬೇಕೇ ಬೇಕು
ಕೋಟಿ ಇಟ್ಟಿಗೆ ಮಂದಿರ

ಅಂದು ರಾಮನಿಗೆ ಪ್ರಿಯವು
ಎಲ್ಲ ಜೀವ ಜಂತು
ಇಂದು ಯಾರೂ ಬೇಡ | ಇರಲಿ
ದಲಿತರಂತೂ ಇಂತು

ನಿನ್ನೆ ಶಂಭೂಕ ಮರ್‍ಡರ್
ತಪ್ಪಿತು ಕುವೆಂಪು ಇಂದ
ಇಂದು ನಾವುಗಳೆ ಮರ್‍ಡರ್
ತಪ್ಪುವುದು ಯಾರಿಂದ?

ಅಂದು ಹರಡಿದ ರಾಮ
ಹೆಚ್ಚೂ ಕಡಿಮೆ ಪ್ರೀತಿ
ಇಂದು ಹರಡುವನು ಯಾಕೆ
ಎಂದಿಲ್ಲದ ಭೀತಿ?

ಇರಲು ಎದುರಿನಲ್ಲಿ
ಭೀಮನ ಸಂವಿಧಾನ
ಮತ್ತೆ ಯಾಕೆ ಬೇಕು
ರಾಮನ ಸಂವಿಧಾನ?

ಇರಲಿ ರಾಮ ಅಲ್ಲಿ
ಜನರ ತಂಟೆ ಯಾಕೆ
ಸುಮ್ಮನಿರದೆ ಇರುವೆ
ಬಿಟ್ಟುಕೊಳುವುದ್ಯಾಕೆ?
*****

Tagged:

Leave a Reply

Your email address will not be published. Required fields are marked *

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...