Home / ಕವನ / ಕವಿತೆ / ಉಸಾಬರಿ

ಉಸಾಬರಿ

ಬರೆಯಬೇಕು ನಾ ಏನನ್ನಾದರೂ
ವರ್ಷಗಳಿಂದಲೂ ಮನ ತುಡಿಯುತ್ತಿದ್ದರೂ
ಬರೆಯಬಲ್ಲೆನಾದರೂ ನಾನು
ಉಳಿದಿರುವುದಾದರೂ ಏನು?
ಶತಶತಮಾನಗಳಿಂದ ಬರೆದು ಬರೆದು
ನವರಸಗಳೆಲ್ಲವ ಅರೆದು ಕುಡಿದು
ಮಾಡಿ ಸರಸತಿಯ ಭಂಡಾರ ಲೂಟಿ
ನನಗೇನು ಸಿಕ್ಕದು ಬರೀ ಪಾಟಿ.
ಪಂಪ ರನ್ನ ಪೊನ್ನ ಜನ್ನರ ಕಾವ್ಯದ ಗಂಟು
ನನಗಂತೂ ಅರ್‍ಥೈಸಿಕೊಳ್ಳಲಾಗದ ಕಗ್ಗಂಟು
ಕನ್ನಡದ ಕಂಪರಿಯದ ಮೂಗಿಗೆ
ದೇವಭಾಷೆಯ ಗಂಧ ಪಸರಿಸುವುದೇ
“ನೀರಿಳಿಯದ ಗಂಟಲಲಿ ಕಡುಬು”
ಮುದ್ದಣ್ಣನ ಉಕ್ತಿ
ನನ್ನ ಪಾಲಿಗಲ್ಲ ಅತಿಶಯೋಕ್ತಿ.
ಕುವೆಂಪು, ಬೇಂದ್ರೆ ಪುತಿನಾರ ಗತ್ತು
ಬ್ರಹ್ಮ ನೀಡಲಿಲ್ಲ ಬುದ್ಧಿಗೆ ಕಸರತ್ತು
ಇನ್ನು ಕಥೆ ಬರೆಯೋಣವೆನಿಸಿತು
ನನ್ನದೇ ಆಸ್ತಿ ಎಂದರು ಮಾಸ್ತಿ
ಕವನ ಗೀಚಿದರೆ ಬಲು ಸುಲಭವೆಂದುಕೊಂಡೆ
ಒಬ್ಬೊಬ್ಬ ಕವಿಗಳು ಎದುರು ಬಂದು
ನನ್ನದೇ ಪದ, ನನ್ನದೇ ಶೈಲಿ
ಅರಚಾಡಿದರು ಕಿವಿ ಮುಚ್ಚಿಕೊಂಡೆ.
ನಾಟಕವಾದರೆ ಹೇಗೆ? ಕಾಳಿದಾಸನ ಹಾಗೆ
ಈ ನಾಟಕ ಪಾಠಕ ಎಲ್ಲಾ ತಲೆಬಿಸಿ
ಹರಿಹರನ ರಗಳೆಯೇ ವಾಸಿ.
ಕಾದಂಬರಿಯೇ ಸರಿ, ಎಲ್ಲರಿಗೂ ಮೋಡಿ
ಆದರೆ ಬರೆಯುವ ಮೂಡಿಲ್ಲ ಬಿಡಿ
ಕುಣಿಯಲಾರದವಳಂದಳಂತೆ ನೆಲಡೊಂಕು
ಇಲ್ಲ ನನ್ನ ಲೇಖನಿಯ ತುದಿಯೇ ಕೊಂಕು.
ನವ್ಯಕಾವ್ಯ ಬರೆದರಾಯ್ತು ಅರ್ಥವಾಗದ ಪರಿ
ಬಲವಾಗಿ ನಿರ್ಧರಿಸಿದೆ ಮನೆಯೇ ಸರಿ
ಹೋದರಾಯ್ತು ಸಂಸಾರದಲ್ಲಿ ತರಾ ‘ವರಿ’
ದುರಾದೃಷ್ಟಕ್ಕೆ ಅಂದೇ ಮುಗಿಯಬೇಕೆ ತರಕಾರಿ
ಪಲ್ಯ ಮಾಡಲಿಲ್ಲವೆಂದು ಗಂಡನ ಮಾರ ಮಾರಿ
‘ಚೂಡಿ’ ತರಲಿಲ್ಲವೆಂದು ಮಗಳ ಕಿರಿಕಿರಿ
ಆಯಿತಲ್ಲ ಬರೆವುದಕ್ಕೆ ಕತ್ತರಿ
ಬರೆಯುವವರು ಬರೆಯಲಿ ಬಿಡಿ
ನನಗೇಕೆ ಈ ಉಸಾಬರಿ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...