Home / ಕವನ / ಕವಿತೆ / ಕವನ ಸೃಷ್ಠಿ

ಕವನ ಸೃಷ್ಠಿ

ಕವನ ಬರೆಯುವುದಷ್ಟು
ಸುಲಭದ ಕೆಲಸವಲ್ಲ
ತರಕಾರಿ ಅಕ್ಕಿ ಮಸಾಲೆ ಉಪ್ಪು
ನೀರು ಪಾತ್ರೆ ಪಡಗ ಎಲ್ಲಾ ಸಾಧನ
ಇದ್ದರೂ ಗೊತ್ತಿರಬೇಕಲ್ಲ
ಅಡುಗೆ ಮಾಡುವ ವಿಧಾನ

ಕವನ ಬರೆಯುವುದಷ್ಟು ಸುಲಭವಲ್ಲ
ಪದಗಳೆಲ್ಲವ ಒಟ್ಟುಗೂಡಿಸಿ
ತೂಗಿಸಿ ಅಳತೆ ಮಾಡಿ
ಜೋಡಿಸಿ ಕಳೆದು ಕೂಡಿ
ಗುಣಾಕಾರ ಭಾಗಾಕಾರ ಲೆಕ್ಕಾಚಾರ
ಮಾಡಿದರಷ್ಟೇ ಕವನ ಪ್ರಕಾರ.

ಕವನ ಬರೆಯುವುದಷ್ಟು ಸುಲಭವಲ್ಲ
ಹಾಲು ಬೆಳದಿಂಗಳ ತೊಟ್ಟಿಲಲ್ಲಿ
ಸಂಜೆಯ ತಂಬೆಲರಿನ ಜೋಗುಳ
ಮಿನುಗುವ ನಕ್ಷತ್ರಗಳ ಲಾಲಿ
ಭಾವನೆಗಳ ತಬ್ಬಿ ರಮಿಸಿ
ಲಾಲಿಸಿ ಲಲ್ಲೆಗರೆದು ಮುದ್ದು
ಮಾಡಿದಾಗಲೇ ಕವನದ ಹುಟ್ಟು.

ಕವನ ಬರೆಯುವುದಷ್ಟು ಸುಲಭವಲ್ಲ
ಚಿನ್ನದ ಅದಿರ ಕುಟ್ಟಿ ಕುಟ್ಟಿ
ಪುಡಿ ಮಾಡಿ ಕಾಯಿಸಿ ಕರಗಿಸಿ
ಪುಟಕ್ಕಿಟ್ಟಾಗಲೇ ಅಪರಂಜಿ
ಮಿಡಿದ ಭಾವನೆಗಳ ಕಟ್ಟಿ
ಉಡಿಸಿ ತೊಡಿಸಿ ಮುಡಿಸಿ
ಒನಪು ವೈಯ್ಯಾರ ಸಿಂಗಾರ
ಅಲಂಕಾರ ದೃಷ್ಟಿ
ಬೊಟ್ಟು ಇಟ್ಟಾಗಲೇ ಕವನದ ಸೃಷ್ಟಿ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...