Home / ಕವನ / ಕವಿತೆ / ಘಮ್ಮಂತ ಕಮ್ಮಂತ

ಘಮ್ಮಂತ ಕಮ್ಮಂತ

ಚೈತ್ರ ವೈಶಾಖದ ಶುಕ್ಲ ಪೂರ್ಣಿಮೆ
ಎಲ್ಲೆಲ್ಲೂ ಬೆಳದಿಂಗಳು ಹರಡಿದ ಬಯಲು.
ಎಲ್ಲೇ ಕಂಡ ಬೆಳಕು ಎದೆಯೊಳಗೆ ಇಳಿದ
ಭಾವ. ಅವಳು ದುಃಖದ ಮಗುವಿಗೆ
ಹುಷಾರಾಗು ಎಂದು ಹಾಲು ಕುಡಿಸುತ್ತಿದ್ದಾಳೆ.
ಜಗದ ಜನರ ಬದುಕಿನ ಘಮ ಅರಳಿ
ಅಡುಗೆ ಮನೆಯ ತುಂಬ ಬಿಳಿಬಿಳಿ ಅನ್ನ.
ಅವನು ಮುಂಜಾನೆ ಸದ್ದಿಲ್ಲದೇ ನೇಗಿಲ ಹೂಳುತ್ತಿದ್ದಾನೆ.
ಬೆವರ ಹನಿಗಳು ಆಕಾಶದಲಿ ಇಂಗಿವೆ.
ಕಾಯಕ ಜಗವ ಅರಳಿಸಿದೆ. ಅದು ಆಸೆಯಲ್ಲ.
ನಿಯಮದ ಪಾಲನೆ ಮತ್ತೆ ಅರಳಿ, ಹೂವು ಹಣ್ಣು
ಪಶು ಪಕ್ಕಿಗಳ ಸಂತತಿ ಚಿಗುರಿ, ಬನದ ತುಂಬ
ಹಸಿರೆಲೆಗಳು.

ಶುಕ್ಲ ಪೂರ್ಣಿಮೆಯ ತಣ್ಣನೆಯ ಹಳದಿ
ಬೆಳಕಿಗೆ ಕವಿಬುದ್ಧ ಅರೆದು ಅರವಳಿಕೆಯ
ಮುಚ್ಚಳ ತೆಗೆದಾಗ, ಜಗದ ನಿದ್ದೆಯಲ್ಲೂ
ಚಲನೆ, ಬೆಳಕಿನ ಬೀಜಗಳ ಚಲನೆ, ಇತಿಹಾಸ
ಮನುಕುಲದ ಚಲನೆ, ಬೀಜ ಮೂಕಮರ್ಮರವಾಗಿ
ಹಸಿರು ಚಿಗುರುವೆ ಚಲನೆ, ಜಗದ ಅಣುತೃಣವೂ
ಬದಲಾಗದ ಭೂಮಿಯ ಆಕಾಶದ ಚಲನೆ
ಶಬ್ದಗಳ ನಿಶ್ಯಬ್ದಗಳ ಚಲನೆ, ಅದು ಮೋಹದ
ಮಾಯೆಯ ಆಚೆಯ ಚಲನೆ, ಅದು ಮೋಹದ
ಮಾಯೆಯ ಆಚೆಯ ಚಲನೆ, ಭಾವ ಬುದ್ದಿಗಳ
ಅರಮನೆ, ಅದು ಧಮ್ಮ. ಇದು ಹುಟ್ಟು ಗಟ್ಟಿ ಬಂಡೆಯ
ಮೆತ್ತಗಾಗಿಸಿದೆ ಬೆಳದಿಂಗಳು.

ಸತ್ಯದ ಬೆಳದಿಂಗಳು ಎಲ್ಲರ ಪಾತ್ರೆಗಳು
ತುಂಬಿವೆ ಅವರವರ ರುಚಿಗೆ, ಮತ್ತೆ
ಅವರಿವರ ಸ್ಥಿತಿಗತಿಗೆ ಕಂಡ ನೋಟದ ಒಳ ಹರವು
ಒಳಗೊಳಗೆ ಗಟ್ಟಿಯಾಗುವ ಕಾಯಕ, ಜಗದ ಕರುಣಿಯ
ತಿಳಿಗಾಳಿ ಗಂಧ ಸೂಸಿ ಅರಿತವರೆಲ್ಲಾ ಶರಣಬುದ್ದರು
ನಡೆನುಡಿಗಳ ಪಥದ ಜೀವ ದ್ರವ್ಯ ತಂಪು ಹನಿಹನಿಯಾಗಿ
ಎದೆಗಿಳಿದ ತಣ್ಣನೆಯ ರಾತ್ರಿ ಆತ್ಮಕಲ್ಯಾಣ ಲೋಕಕಲ್ಯಾಣ
ಕುದುರೆ ಏರಿ ಹೊರಟವರೆಲ್ಲರೂ, ಜೀವ ಪ್ರೀತಿಸಿ ದೇವ
ಪ್ರೀತಿಗೆ ಒಳಗಾದರು ಮತ್ತೆ ಪೂರ್ಣ ವಿಕಾಸದ ದಾರಿ
ನಿರ್ಮಾಣವಾಯಿತು ಎಲ್ಲಾ ಪರಂಪರೆಯ ಬೆಳದಿಂಗಳ
ಶೃತಿಯಲಿ.
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...