Home / ಕವನ / ಕವಿತೆ / ಘಮ್ಮಂತ ಕಮ್ಮಂತ

ಘಮ್ಮಂತ ಕಮ್ಮಂತ

ಚೈತ್ರ ವೈಶಾಖದ ಶುಕ್ಲ ಪೂರ್ಣಿಮೆ
ಎಲ್ಲೆಲ್ಲೂ ಬೆಳದಿಂಗಳು ಹರಡಿದ ಬಯಲು.
ಎಲ್ಲೇ ಕಂಡ ಬೆಳಕು ಎದೆಯೊಳಗೆ ಇಳಿದ
ಭಾವ. ಅವಳು ದುಃಖದ ಮಗುವಿಗೆ
ಹುಷಾರಾಗು ಎಂದು ಹಾಲು ಕುಡಿಸುತ್ತಿದ್ದಾಳೆ.
ಜಗದ ಜನರ ಬದುಕಿನ ಘಮ ಅರಳಿ
ಅಡುಗೆ ಮನೆಯ ತುಂಬ ಬಿಳಿಬಿಳಿ ಅನ್ನ.
ಅವನು ಮುಂಜಾನೆ ಸದ್ದಿಲ್ಲದೇ ನೇಗಿಲ ಹೂಳುತ್ತಿದ್ದಾನೆ.
ಬೆವರ ಹನಿಗಳು ಆಕಾಶದಲಿ ಇಂಗಿವೆ.
ಕಾಯಕ ಜಗವ ಅರಳಿಸಿದೆ. ಅದು ಆಸೆಯಲ್ಲ.
ನಿಯಮದ ಪಾಲನೆ ಮತ್ತೆ ಅರಳಿ, ಹೂವು ಹಣ್ಣು
ಪಶು ಪಕ್ಕಿಗಳ ಸಂತತಿ ಚಿಗುರಿ, ಬನದ ತುಂಬ
ಹಸಿರೆಲೆಗಳು.

ಶುಕ್ಲ ಪೂರ್ಣಿಮೆಯ ತಣ್ಣನೆಯ ಹಳದಿ
ಬೆಳಕಿಗೆ ಕವಿಬುದ್ಧ ಅರೆದು ಅರವಳಿಕೆಯ
ಮುಚ್ಚಳ ತೆಗೆದಾಗ, ಜಗದ ನಿದ್ದೆಯಲ್ಲೂ
ಚಲನೆ, ಬೆಳಕಿನ ಬೀಜಗಳ ಚಲನೆ, ಇತಿಹಾಸ
ಮನುಕುಲದ ಚಲನೆ, ಬೀಜ ಮೂಕಮರ್ಮರವಾಗಿ
ಹಸಿರು ಚಿಗುರುವೆ ಚಲನೆ, ಜಗದ ಅಣುತೃಣವೂ
ಬದಲಾಗದ ಭೂಮಿಯ ಆಕಾಶದ ಚಲನೆ
ಶಬ್ದಗಳ ನಿಶ್ಯಬ್ದಗಳ ಚಲನೆ, ಅದು ಮೋಹದ
ಮಾಯೆಯ ಆಚೆಯ ಚಲನೆ, ಅದು ಮೋಹದ
ಮಾಯೆಯ ಆಚೆಯ ಚಲನೆ, ಭಾವ ಬುದ್ದಿಗಳ
ಅರಮನೆ, ಅದು ಧಮ್ಮ. ಇದು ಹುಟ್ಟು ಗಟ್ಟಿ ಬಂಡೆಯ
ಮೆತ್ತಗಾಗಿಸಿದೆ ಬೆಳದಿಂಗಳು.

ಸತ್ಯದ ಬೆಳದಿಂಗಳು ಎಲ್ಲರ ಪಾತ್ರೆಗಳು
ತುಂಬಿವೆ ಅವರವರ ರುಚಿಗೆ, ಮತ್ತೆ
ಅವರಿವರ ಸ್ಥಿತಿಗತಿಗೆ ಕಂಡ ನೋಟದ ಒಳ ಹರವು
ಒಳಗೊಳಗೆ ಗಟ್ಟಿಯಾಗುವ ಕಾಯಕ, ಜಗದ ಕರುಣಿಯ
ತಿಳಿಗಾಳಿ ಗಂಧ ಸೂಸಿ ಅರಿತವರೆಲ್ಲಾ ಶರಣಬುದ್ದರು
ನಡೆನುಡಿಗಳ ಪಥದ ಜೀವ ದ್ರವ್ಯ ತಂಪು ಹನಿಹನಿಯಾಗಿ
ಎದೆಗಿಳಿದ ತಣ್ಣನೆಯ ರಾತ್ರಿ ಆತ್ಮಕಲ್ಯಾಣ ಲೋಕಕಲ್ಯಾಣ
ಕುದುರೆ ಏರಿ ಹೊರಟವರೆಲ್ಲರೂ, ಜೀವ ಪ್ರೀತಿಸಿ ದೇವ
ಪ್ರೀತಿಗೆ ಒಳಗಾದರು ಮತ್ತೆ ಪೂರ್ಣ ವಿಕಾಸದ ದಾರಿ
ನಿರ್ಮಾಣವಾಯಿತು ಎಲ್ಲಾ ಪರಂಪರೆಯ ಬೆಳದಿಂಗಳ
ಶೃತಿಯಲಿ.
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...