Home / ಕವನ / ಕವಿತೆ / ಧೂಮಪಾನ

ಧೂಮಪಾನ

ಹೇ…ಸಿಗರೇಟು ನೀನೆಷ್ಟು ಗ್ರೇಟು
ನಿನ್ನ ನೀ ಸುಟ್ಟುಕೊಂಡರೂ ಕೊಡುವೆ ಟೇಸ್ಟು
ಧುಮ್ಮೆಂದು ಧೂಮವ ಸೂಸುತ್ತಾ
ಧೂಳೆಬ್ಬಿಸುವೆ ಧೂಮ ವ್ಯಸನಿಗಳನು

ಮೊದ ಮೊದಲು ನಿನ್ನ ನೋಡಲು ನನಗೆ
ಕುತೂಹಲದಿ ಆಸೆಯಾಯ್ತು ಚುಂಬಿಸಲು
ಕಳೆಯುತ್ತಾ ಕಳೆಯುತ್ತಾ ದಿನಗಳಾಗಲು
ನಿನ್ನೊಳಗೆ ಲೀನವಾಗಿಸಿಬಿಟ್ಟೆ ನನ್ನನ್ನು

ಕೆಲವು ಸಮಯದಲ್ಲಿ ಶೋಕಿಗಾಗಿ ಸೇದಿದೆ
ಹಲವು ಬಾರಿ ಚಿಂತೆ ಮರೆಯಲೆಂದು ಸೇದಿದೆ
ಇನ್ನೂ ಕೆಲವೊಮ್ಮೆ ಒತ್ತಡವ ತಡೆಯದೇ ಸೇದಿದೆ
ಮುಂದೆ ಬಿತ್ತು ಭಾರವೆಲ್ಲ ನನ್ನ ತಲೆಯ ಮೇಲೆಯೇ

ನೀನು ಸುಡುತ್ತಾ ಹೋದೆ ನಿನ್ನ ಅಂದ
ನನ್ನೊಳಗೆ ನಾ ಬೆಂದೆ ನಿನ್ನ ಸೇದುತ್ತಾ
ಮೊದಲು ಅರಿಯಲಿಲ್ಲ ನಾ ಭ್ರಮೆಯಿಂದ
ಹಚ್ಚಿದ ಬೆಂಕಿ ನಿನಗಷ್ಟೇ ಅಲ್ಲ ನನಗೂ ಅಂತ

ಧೂಮಪಾನಿಯಾಗಿ ದಮ್ಮು ಸೇರಿಸಿಕೊಂಡೆ
ಕರಳುಗಳನ್ನು ಸುಟ್ಟು ಕರಕಲಾಗಿಸಿಕೊಂಡೆ
ಮಹಾಮಾರಿ ಕ್ಯಾನ್ಸರನ್ನೂ ಬರಮಾಡಿಕೊಂಡೆ
ನನ್ನ ಸಾವು ಸನಿಹಕೆ ನಾನೇ ಕಾರಣನಾದೆ

ಕುತೂಹಲವು ಆಸೆಯಾಯ್ತು
ಆಸೆಯು ಅಭಿರುಚಿಯಾಯ್ತು
ಅಭಿರುಚಿಯು ಹವ್ಯಾಸವಾಯ್ತು
ಹವ್ಯಾಸವು ಚಟವಾಯ್ತು
ಚಟವು ದುಶ್ಚಟವಾಗಿ ಚಟ್ಟಕ್ಕೆ ಕರೆದೊಯ್ಯಿತಲ್ಲೋ….

ನಾ ಮಾಡಿದ ತಪ್ಪೀಗ ಅರಿವಾದರೇನು ಫಲ
ಬದುಕಿ ಬಾಳಬಲ್ಲೆನೇ ನಾನು ಸಬಲತೆಯಿಂದ
ನನ್ನ ಈ ಬದುಕು ನನಗೆ ಕೊನೆಯಾಗಲಿ
ಧೂಮಪಾನಿಗಳಿಗೆ ನಾ ಮಾದರಿಯಾಗಲಿ
*****

Tagged:

Leave a Reply

Your email address will not be published. Required fields are marked *

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...