Home / ಕವನ / ಕವಿತೆ / ಹೊಸ ಬಾಳು

ಹೊಸ ಬಾಳು

ಅರಿತ ಜೀವಿಗಳೆರಡು ಬೆರೆತು
ಸಪ್ತಪದಿಯ ಹಾದಿ ತುಳಿದು
ಜೀವನ ಸಂಗಾತಿಗಳಾಗಿ ನಡೆದು
ಬಾಳ ದೋಣಿಯನೇರಿ ತೀರ ಬಿಡಲು
ಪಯಣವು ಹಾಯಾಗಿ ಸಾಗಿರಲು

ದೂರ ತೀರವ ಸೇರುವ ತವಕ
ನಡೆಯುತಿರಲು ಪ್ರೀತಿಯ ಪುಳಕ
ಪ್ರಣಯದ ಗೀತೆಯ ಹಾಡಿತು ಮನ
ಮಧು ಚಂದ್ರದಲಿ ಒಂದಾದರು ದಿನ
ಕಾಲ ಉರುಳಿ ಕರುಳ ಕುಡಿಗಳ ಜನನ

ಏಳು ಬೀಳಿನ ಅಲೆಗಳಲ್ಲಿ ಸಾಗಿ
ಏರಿಳಿದು ಮುಂದೆ ಸಾಗುತಲಿ ಜೊತೆಯಾಗಿ
ಮಮತೆಯ ಮೂರು ಮಕ್ಕಳ ಜೊತೆ ಸಾಗಿದ
ತುಂಬು ಸಂಸಾರದ ದೋಣಿಯ ಮಧ್ಯ
ಮೋಹದ ಸೆಳೆವಿಗೆ ಸಿಲುಕಿಕೊಂಡಿತ್ತು

ಸ್ವಚ್ಛಂದದ ಸಂಸಾರದ ನಡುವೆ
ಪತಿಯ ಅರಿವಿಗೆ ಮಂಕು ಕವಿದಿತ್ತು
ಮೋಹಿನಿಗೆ ಮೋಹಕೆ ಮನ ಸೋತಿತ್ತು
ಪ್ರೀತಿಯ ಬಲೆಯೊಳಗೆ ಜೀವ ಸಿಲುಕಿತ್ತು
ಬೇರೆ ಸುಂದರ ದೋಣಿ ಏರುವ ಮನಸ್ಸಾಗಿತ್ತು

ಸವತಿಯ ಚೆಲ್ಲಾಟಕೆ ರೋಸಿದ ಸತಿಯು
ದಿನವೂ ಹರಿಸಿದಳು ಕಣ್ಣೀರ ಕೋಡಿಯ
ಸಂಸಾರ ಸೂತ್ರ ಹರಿದ ಗಾಳಿ ಪಟವಾಯಿತೆಂದು
ಅಂಗಲಾಚಿ ತಿದ್ದಿ ಬುದ್ಧಿ ಹೇಳಿ ಬೇಡಿಕೊಂಡರೂ
ಬಿಡದಾದ ಪತಿಯು ಮೋಹಿನಿಯ ಸಂಪರ್ಕವನ್ನು

ಮಡದಿ ಮಕ್ಕಳ ದೂರ ಮಾಡಲಾಗದೆ
ಪ್ರೇಯಸಿಯ ಸಂಗವನ್ನು ಬಿಡಲಾಗದೆ
ಅತಂತ್ರದಿ ಅವನು ಕುಡಿತಕೆ ದಾಸನಾಗಿ
ದಿನಗಳು ಕಳೆದ ಮೇಲೆ ತಪ್ಪಿನ ಅರಿವಾಗಿ
ಪ್ರಾಯಶ್ಚಿತ್ತವ ಬಯಸಿದ ಮಾಡಿದ ತಪ್ಪಿಗಾಗಿ

ಮಡದಿಯ ಬಳಿಯಲಿ ಮೌನವ ಮುರಿದು
ಮಾಡಿದ ತಪ್ಪನು ಮನ್ನಿಸಿ ಬಿಡು ನೀ ಎಂದು
ಅದೇ ತಪ್ಪು ಮಾಡೆನೆಂಬ ಭಾಷೆಯ ಇತ್ತು
ರತ್ನವೇ ನೀನು ನನ್ನೊಡನೆ ಇರುವಾಗಲೂ
ಅರಿಯದೆ ಹೋಗಿ ದ್ರೋಹವ ಮಾಡಿದೆ ಎನ್ನಲು
ಸತಿಯ ಮನ ಕರಗಿ ನೀರಾಗಿ ಹೋಗಲು

ವಸಂತನ ಆಗಮನದಿ ಪ್ರಕೃತಿ ಹಸಿರಾದಂತೆ
ಬಾಡಿದ ಬದುಕದು ಮತ್ತೆ ಚಿಗುರೊಡೆದು
ಇಬ್ಬರ ಮನದೊಳು ಆಸೆಗಳು ಚಿಗುರಿದವು
ಅರಿತ ಜೀವಿಗಳೆರಡು ಒಂದೊಂದಾಗಿ ಬೆರೆತು
ದೋಣಿಯ ಪಯಣವು ಮತ್ತೆ ಸಾಗಿತ್ತು
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...