Home / ಕವನ / ಕವಿತೆ / ಸೃಷ್ಟಿಕರ್‍ತ

ಸೃಷ್ಟಿಕರ್‍ತ

ಸದಾ ಉತ್ಸವ ಜಗದೊಳಗೆ-
ಉಳುವ, ಬಿತ್ತುವ, ಟಿಸಿಲೊಡೆಯುವ
ಕಾಯಿಯಾಗುವ, ಮಾಗುವ ಸಂಭ್ರಮ ಪ್ರಕೃತಿಗೆ!
ಹಸಿರು ತೋರಣ, ಋತುಗಳ ಮೆರವಣಿಗೆ,
ಬಣ್ಣಗಳ ಚೆಲ್ಲಾಟ, ಹಕ್ಕಿಗಳ ಕಲರವ, ಗಾಳಿಯ ನಿನಾದ,
ಸೂರ್‍ಯನ ಬಿಸಿ, ಚಂದಿರನ ತಂಪು
ಹೇಗೆ ಸೃಷ್ಟಿಸಿದೆ ಇದನ್ನೆಲ್ಲ?

ಭಾವಗಳ ರಂಗು ಹೃದಯದ ಒಸರಲ್ಲಿ
ಹೊಂಬಣ್ಣದ ತೆನೆ ಹಸಿರಿನ ಬಸಿರಲ್ಲಿ
ಬಣ್ಣಗಳ ಮೇಳ ಧರಣಿಯ ಉಸಿರಲ್ಲಿ
ಧರಿತ್ರಿಗೆ ಕಿರೀಟಗಳು ಹಿಮಚ್ಛಾದಿತ ಪರ್ವತಶ್ರೇಣಿಗಳು
ಏರದೆಗೆ ಪೀಠಗಳು ಗುಡ್ಡ ಬೆಟ್ಟಗಳು
ಜೀವಚರಗಳಿಗೆ ಜೀವಸೆಲೆ ಜಲಪಾತ, ಝರಿಗಳು.
ಜೀವಜಲಕೆ ಒಸರು ನದಿ, ಕೆರೆ, ಸರೋವರಗಳು!
ಹೇಗೆ ಸೃಷ್ಟಿಸಿದೆ ಇದನ್ನೆಲ್ಲ?

ಪ್ರಥ್ವಿಯ ಜತೆಗೆ ಸಾಗರವನ್ನಿಟ್ಟೆ
ಕಂಬಗಳಿಲ್ಲದೆ ಬಾನಿನ ಚಪ್ಪರ ಹಾಕಿಯೇ ಬಿಟ್ಟೆ
ಭೂಮಿಯ ಮೇಲೆ ಪಶುಪಕ್ಷಿ ಪ್ರಾಣಿಗಳ ಓಡಾಡಬಿಟ್ಟೆ,
ಮನುಷ್ಯರ ಸೃಷ್ಟಿಸಿ ಭಾವಗಳ ರಂಗನು ತುಂಬಿ ಆಳಲು ಬಿಟ್ಟೆ
ಸಾಗರದೊಳಗೆ ಬಣ್ಣ ಬಣ್ಣದ ಜಲಚರಗಳ ತೇಲಿಸಿಬಿಟ್ಟೆ
ಪುಟ್ಟ, ಚಿಟ್ಟೆಗಳ ಬಣ್ಣದಲ್ಲದ್ದಿ ಮೆರೆಯಲು ಬಿಟ್ಟೆ.
ಎಲ್ಲವೂ ನಿನ್ನಯ ಸೃಷ್ಟಿ. ಆದರೂ ಬೇರೆ ಬೇರೆ.
ಒಂದರ ಹಾಗೆ ಇನ್ನೊಂದಿಲ್ಲ.
ಒಂದರ ಬಣ್ಣ ಇನ್ನೊಂದಕ್ಕಿಲ್ಲ.
ಎಲ್ಲಿಂದ ತಂದೆ ಇಷ್ಟೊಂದು ವೈವಿಧ್ಯತೆ?

ಹೆಣ್ಣಿನ ಜತೆಗೆ ಗಂಡನ್ನಿಟ್ಟೆ
ಭಾವಗಳ ಓಟಕೆ ರಂಗನು ಎರೆದೆ.
ಕಾಮದ ಬೆಂಕಿಯ ಉರಿಸಿ ಹೊಸಹುಟ್ಟಿಗೆ ಇಂಬನ್ನಿತ್ತೆ.
ಪ್ರೀತಿ ಪಾಠದ ಅಕ್ಕರಿಗ ನೀನು
ಪ್ರೀತಿಯೇ ಜಗದ ಉಸಿರೆಂದೆ.
ಆದರೂ ಪ್ರೀತಿಯ ಜತೆಗೆ ದ್ವೇಷವನ್ನಿಟ್ಟೆ
ಸುಖದ ಜತೆಗೆ ದುಃಖವನ್ನಿಟ್ಟೆ
ಯಾಕೆ ಹೀಗೆ ಮಾಡಿದೆ?

ಹಗಲಿನಾಗಸದಲಿ ನೇಸರ ಹೊಂಬಿಸಲು
ಇರುಳಿನಾಕಾಶದಲಿ ಶಶಿಯ ತಂಬೆಳಕು;
ಅಂಬರದಂಗಳದಲಿ ನಕ್ಷತ್ರಗಳ ಹೊಳಪು;
ಮರಗಳ ತುಂಬ ಮಿಂಚುಳ್ಳಿ ಮಿಣುಕು,
ಮೋಡಗಳ ನಡುವೆ ಮಿಂಚಿನ ಝಳಪು;
ಬೆಳಕಿಗೆಂದೂ ಬರವಿಲ್ಲ.
ಆದರೆ ಮನಮನದೊಳಗೊಂದೊಂದು
ನಕ್ಷತ್ರವನ್ನಿಡಲು ಏಕೆ ಮರೆತೆ?

ಭೂಮಿಯ ಸಹನೆ, ಅಲೆಗಳ ಚಂಚಲತೆ
ಗಾಳಿಯ ಚೈತನ್ಯ, ಆಗಸದ ಐಕ್ಯತೆ
ಎಲ್ಲವೂ ಕಲಿಕೆಯ ಆಗರ. ಎಲ್ಲಕ್ಕೂ ನೀನೇ ಗುರು
ಎಲ್ಲರೂ ನಿನ್ನ ಕೈಯಲ್ಲಿ ಅಕ್ಷ,
ನೀ ಹೇಳಿದಂತೆ ಇಡೀ ಜಗ.
ಆದರೂ ಮುತ್ತಿದೆ ದ್ವೇಷದ ಹಗೆ; ನೋವಿನ ಧಗೆ
ಶಾಂತಿಯ ಏಕೆ ತುಟ್ಟಿಯಾಗಿಸಿದೆ?

ನಿನ್ನಯ ಬಣ್ಣದ ಬಾಂಡಲಿ ಅಕ್ಷಯ!
ರಂಗಿಗೆ ಬರವಿಲ್ಲ. ರಾಗಕೆ ಮೌನವಿಲ್ಲ
ನೀ ಬರೆವ ಚಿತ್ರಗಳಿಗೆ ಕೊನೆಯಿಲ್ಲ
ಇಡೀ ಬಹ್ಮಾಂಡವೇ ನಿನ್ನ ಕ್ಯಾನ್‌ವಾಸ್
ಎಲ್ಲವೂ ಅಗಾಧ, ಅಕಲಂಕ, ಅಕೃತಿಮ.
ಕಣ್ಣಿಗೆ ಕಾಣದ ಚಿತ್ರಿಕ ನೀನು;
ನಿನ್ನೊಲವು ಅಕ್ಷೀಣ. ನಿನ್ನ ಅಣತಿಗೆ ನಮ್ಮ ಸವಾಲಿಲ್ಲ.
ಎಲ್ಲವ ಹೊತ್ತ ಅಗಧರ ನೀನು. ನಿನಗೆ ನೀನೇ ಸವಾಲು.
ಎಲ್ಲಿರುವ ನೀನು? ಹೇಗಿರುವೆ?
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...