Home / ಕವನ / ಕವಿತೆ / ಸಂಜೆಯ ಹಾಡು

ಸಂಜೆಯ ಹಾಡು

ಹಗಲೆಲ್ಲಾ ಕಳೆಯಿತು ಸೂರ್ಯನು ಮುಳುಗೆ;
ಖಗ ಹಾರಿತು ಗೂಡಿನ ಒಳಗೆ;
ಜಗವೆಲ್ಲಾ ಬೆಳಗಿತು ದೀಪವು ಬೆಳಗೆ,
ಗಗನಾಂಗಣದಲ್ಲಿ ಉಡು ತೊಳಗೆ;
ಮೃಗವೆಲ್ಲಾ ಅಲೆವವು ಬೆಟ್ಟದ ಕೆಳಗೆ;
ಹೊಗುತಿರುವುದು ಕತ್ತಲೆ ಇಳೆಗೆ.

ಓ-ಮಗುವೇ, ನೀ ಸಂಜೆಯ ಗಳಿಗೆಯಲಿ
ನಗುತಲಿ ಬಾ ನನ್ನಯ ಬಳಿಗೆ; ಕೈ
ಮುಗಿಯುತ ದೇವರ ಪದಗಳಿಗೆ, ಈ
ಹಗಲಲ್ಲಿ ನಿನ್ನನ್ನು ಕಾಯ್ದಾ ದೇವರಿಗೆ,
ಮಿಗೆ ವಂದಿಸು ಸಂತಸದಿಂದಾ.

ವದನಾ ಭೂಷಣವೇ ನೀರಿನ ಕೆರೆಯು
ಘನ ಸರಸಿಗೆ ಕೆಂದಾವರೆಯು;
ವನಿತಾಲಂಕಾರವೆ ಸುಗುಣದ ಸಿರಿಯು;
ಜನರಾಷ್ಟ್ರಕೆ ಧರ್ಮದ ದೊರೆಯು;
ಮನುಜನಿಗಾಭರಣವೆ ವಿದ್ಯೆಯ ಪರಿಯು;
ಮನೆಗಾ ಚೆಲು ಮಕ್ಕಳು ಮರಿಯು.

ಹಾ, ತನಯಾ, ಸಜ್ಜನರೊಡವೆರೆಯು; ದು-
ರ್‍ಜನ ಸಂಗವ ಬೇಗನೆ ತೊರೆಯು; ವಂ-
ಚನೆ ಮರೆಮೋಸಗಳನ್ನು ಮರೆಯು; ನೀ-
ನೆನೆಯದಿರೈ ಕೆಡುಕನು ಲೋಕದ ಜನಕೆ;
ಜನದೂಷಣೆ ಬಿಡಬೇಕೆಂದಾ.

ಇರಬೇಕೈ ಮಕ್ಕಳ ಚೆಲುಮನೆತನವು;
ಸರಿ ಹಾಲನು ಕರೆವಾ ದನವು;
ಬರಬೇಕೈ ತನ್ನಯ ಬೆವರಿನ ಧನವು;
ಭರದಾಪತ್ಕಾಲಕೆ ಜನವು;
ಹೊರಬೇಕೈ ಕಷ್ಟವ ಸಹಿಸುವ ತನುವು;
ಪರದುಃಖಕ ಕೂಗುವ ಮನವು.

ಶ್ರೀ ಗುರುಹಿರಿಯರ ನೀನನುದಿನವು ತಾಂ
ಪರಿಪೂಜಿಪಗುಣ ಲಾಂಛನವು; ಇದು
ದೊರೆಕೊಂಬುದ ಜನಕೆ ಘನವು; ಸೋ
ದರರೆಂಬಾ ಭಾವನೆ ಸರ್‍ವರೊಳಿರಿಸು;
ಭರತಾತ್ಮಜನೆನ್ನಿಸು ಕಂದಾ.

ಕೊಡಬೇಕೈ ಕಿವಿಯನು ಸರ್‍ವರ ನುಡಿಗೆ;
ನುಡಿಬಾರದು ನೀನಡಿಗಡಿಗೆ;
ಉಡಬೇಕೈ ಪದವಿಗೆ ಸರಿಯಾದುಡಿಗೆ;
ತೊಡಬಾರದು ಅನ್ಯರ ತೊಡಿಗೆ;
ಬಿಡಬೇಕೈ ಹಣವನು ಧರ್‍ಮದ ಕುಡಿಗೆ,
ಬಡವಾಗಿರದಂದದಿ ಕಡೆಗೆ.

ನೀ ಪೊಡಮಡು ಗುರುಹಿರಿಯರ ಅಡಿಗೆ; ನೀ
ನಿಡು ಸತ್ಯವ ಕಾರ್‍ಯಗಳೆಡೆಗೆ; ನೀ
ನಡೆವೈ ಸಂಪತ್ತಿನ ತಡಿಗೆ; ಈ
ಮುಡಿಹೂಗಳ್ ಬಾಡದ ಸದ್ವಿಧದಿಂದಾ
ಬಡಕೂಸನು ಸಲಹೋ, ಮುಕುಂದಾ.
*****
(ಕವಿಶಿಷ್ಯ)

Tagged:

Leave a Reply

Your email address will not be published. Required fields are marked *

ಪೆಟ್ರೋಲ್ ವಾಸ್ತೆ ಮೂಗಿಗೆ “ಗಫ್” ಅಂತಾ ಬಡೀತು! ಐದಾರು ಕ್ಯಾನ್‌ಗಟ್ಟಲೆ ಮನೆ ಸುತ್ತಮುತ್ತ ಉಗ್ಗಿ ಬಾಗಿಲು ಕಿಟಕಿ ಸಂಧಿನಿಂದ ಧುಭುಧುಭು – ಪೆಟ್ರೋಲ್ ಸುರಿವಿದ ತೀರಿಗೆ ಅದು ಹಳ್ಳ ಕೊಳ್ಳವಾಗಿ ಮನೆಯೊಳಕ್ಕೆ ಜಗ್ಗಿ ಹರಿದು ಬಂತು! ಮಲಗಿದ್ದ ಹಾಸಿಗೆ, ದಿಂಬು, ಹೊ...

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...