ಕವಿ

ಸೌಂದರ್‍ಯಸರಸಿಯೊಳು ಕವನೀಯ ಸುಕುಮಾರ
ಸಿರಿರಾಜಹಂಸವಾಗಿ
ಇಂದು ಮೂಜಗ ಮೀರಿ ಅವರ ಗದ್ದುಗೆ ಏರಿ
ಆಳ್ವ ಅಧಿಕಾರಿಯಾಗಿ

ಋತುರಾಜ ನವತರುಣ ಮಧುವನದ ಅಭಿರಾಮ
ಮೃದು ಮಂದವಾಯುವಾಗಿ
ಅತಿರೂಪಲಾವಣ್ಯ ಅರೆದೆರೆದು ಬಿರಿಬಿರಿದ
ಅರಳು ಹೂದುಂಬಿಯಾಗಿ

ಸುರಗಂಗೆ ತೆರೆಯಾಗಿ ಕೊಚ್ಚಿಕೊಳ್ಳುವೆ ಪಾಪ
ಹರಿದು ಪಾತಾಳ ಮುಟ್ಟಿ
ಮೆರೆವ ಕವಿಕುಲಕುಮುದ ಗರ್‍ಭಸ್ಥ ನಿತ್ಯಸುಧೆ
ಸುರಿಸುರಿಸಿ ಧಾರಿಗಟ್ಟಿ

ಮಕರಂದ ಶರಸೂರೆಯಾಗಿರುವ ಮೃದುಮೃದುಲ
ಕುಸುಮ ನಲಿನಲಿಯುವಲ್ಲಿ
ಸುಕುಮಾರ ಒಳ್ಳಿಮಂಟಪದಲ್ಲಿ ಅಡಗಿ ಮೈ
ಮರೆವೆನಾನಂದದಲ್ಲಿ

ಮನ್ಮನ ಮಹಾಸಿಂಧು ತಳತನಕ ಮುಳುಗುವೆನು
ಮುತ್ತುರತ್ನಂಗಳಲ್ಲಿ
ಜನ್ಮ ಜನ್ಮದ ವಿಪುಲ ಭೋಗಭಾಂಡಾರವನು
ಒಡೆಯುವೆನು ಯೋಗದಲ್ಲಿ

ರವಿಯ ರಥವನ್ನೇರಿ ವಿಶ್ವಭ್ರಮಣವ ಮಾಡಿ
ನಗುವೆನಾ ಆಡಿ ಹಾಡಿ
ಸವಿಸುಖದ ಕಲ್ಪನಾಕಾಶದೊಳು ಹಾರುವೆನು
ಮೋಡಗಳ ಜೋಡಿಗೂಡಿ

ಸುರಸ್ವರ್‍ಗಲೋಕದಾ ಅವರದೂತನು ನಾನು
ನನಗಿಲ್ಲ ಆಹುದು ಬಹುದು
ತಿರುಕರಲಿ ತಿರುಗಿದರು ರಾಜರ್‍ಷಿ ಬ್ರಹ್ಮರ್‍ಷಿ
ದೇವರ್‍ಷಿ ನಾನೆ ಹೌದು

ಚಿರಗಾನ ಲಹರಿಯಲಿ ಸಿರಿಬೆಡಗ ಬೆರಸುತಲಿ
ಬೆಳಸುವೆನು ಭಾವವನ್ನು
ಅರಿಯಲಾರದ ಗೂಢ ಗೀತೆಯಲ್ಲಿ ಹಾಡುವೆನು
ಭುವನದಲ್ಲಿ ಸ್ವರ್‍ಗವನ್ನು

ಝರಿಯಲ್ಲಿ ಬೆರೆಯುವೆನು ಸೇರುವೆನು ಹೂವಿನಲಿ
ನಲಿನಲಿದು ಬಾಳುತಿರುವೆ
ಬರಿಬಯಲಿನಾಕಾಶದುಡಿಯಲ್ಲಿ ಹೊಡಕರಿಸಿ
ಹಕ್ಕಿಯೊಲು ಹಾಡುತಿರುವೆ
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್