Home / ಕವನ / ಕವಿತೆ / ಅಂತರಾರಾಮ

ಅಂತರಾರಾಮ

ಹೃದಯದಾಕಾಶವಿದು ಅದುರಿ ಗಡ ಗದ್ದರಿಸಿ
ಪ್ರೇಮವಂಕುರಿಸಿ ಸೌರಭವು ಹಾರಿ
ಭೇದಿಸುತ ಸಪ್ತತಲ ಇಂದ್ರಚಂದ್ರರ ಲೋಕ
ಪಾರ ಅಪರಂಪಾರ ದೂರ ಸೇರಿ

ಆವ ಲೋಕವ ಕಾಣೆ-ದಿವ್ಯಜ್ಯೋತಿಯ ಕಂಡೆ
ಕಣ್ಣರಳಿ ಬಂತಾಗ ಭವ್ಯದೃಷ್ಟಿ
ಆವ ಆಶೆಯ ಪಾಶವೆಸಗಿಲ್ಲ ಬಿರುಗಾಳಿ
ಬೀಸಿ ಸೂಸಿತು ಈ ಪ್ರಕಾಶವೃಷ್ಟಿ

ನಲ್ಲನಲ್ಲೆಯ ಪ್ರೇಮ ಬಲ್ಲೆನೆಂಬುವ ಬಿರುದು
ಹದಿನಾಲ್ಕು ಲೋಕಕ್ಕೆ ತಟ್ಟಿಮುಟ್ಟಿ
ಎಲ್ಲೆಡೆಗೆ ವ್ಯಾಪಿಸಿತು ಬೆಳ್ಳಬೆಳು ಬೆಳಕಾಗಿ
ನನ್ನಲ್ಲೆ ಆ ಕಳೆಯ ಮೊಳಕೆ ಹುಟ್ಟಿ

ಉರಿದುರಿದು ಉರಿದೆದ್ದ ಆ ಊರ್‍ಮೆಯುರಿಯಲ್ಲಿ
ಒಂದಾಗಿ ಸದಾ ಸವಿಯನುಂಡೆ
ಸುರರು ಸುರಗುರು ಸೂರ್ಯಚಂದ್ರರೂ ಕಾಣದಾ
ಬೆಳಕಿನುನ್ಮಾದದಾ ಕಾಂತಿ ಕಂಡೆ

ಪ್ರೇಮದಾಚೆಯ ಊರ್‍ಮೆ ಪ್ರೇಮಕ್ಕೆ ಬೀಜವದು
ಪ್ರೇಮದಾ ಫಲವಾಗಿ ಫಲಿಸಿ ನಿಂದು
ಉಮ್ಮಳಿಸಿ ತನ್ಮಯತೆ ಪಾವಿತ್ರ್ಯ ಪರವಶತೆ
ಪರದೆಗಳ ಹರಿಹರಿದು ಸುಳಿದು ಬಂದು

ವೇದಶಾಸ್ತ್ರ ಪುರಾಣ ವರ ಕುರಾನಗಳೆಲ್ಲ
ಕುಣಿಕುಣಿದು ನನ್ನ ಊರ್‍ಮೆಯೊಳೆ ಹುಟ್ಟಿ
ಅಡಗಿಹವು ಇಡಗಿಹವು ಎಲ್ಲೆಡೆಗೆ ನುಡಿಯುವವು
ಊರ್‍ಮೆಕೂರ್‍ಮೆಯೆ ಭವ್ಯದಿವ್ಯ ಸೃಷ್ಟಿ

ಮರವು ಮತ್ಸರ ಕರಗಿ ಕಷ್ಟನಷ್ಟವು ಸುಟ್ಟು
ಭರದಿ ಭಸ್ಮಿಭೂತವಾಗಿ ಹಾರಿ
ಅರವು ಅಗಲಾಗಿ ಅದ್ಭುತದ ಅಘಟಿತ ಶಕ್ತಿ
ಹೆಡಕರಿಸಿ ಹೊಳೆದು ಕುಡಿಮಿಂಚುದೋರಿ

ಘನಸಿರಿಯ ಚಿನ್ಮಯ ಚಿದಾನಂದವನು ಕಂಡೆ
ಹೊರಮರೆದು ಒಳ ಉರ್‍ಮೆ ಕುದುರೆ ಏರಿ
ನೆನಪುದೋರಿತು ಇತ್ತ ಕನಸು ಹರಿಯಿತು ಅತ್ತ
ಹತ್ತುತಾಸಿನ ಹಿಗ್ಗು ಹಾಡನೇರಿ
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...