Home / ಕವನ / ಕವಿತೆ / ವಿದ್ಯುತ್‌ಪುತ್ರನ ಅವತಾರ

ವಿದ್ಯುತ್‌ಪುತ್ರನ ಅವತಾರ

ಸುಸಮರ್‍ಥನಾದ ವಿದ್ಯುತ್‌ ಪುತ್ರನೊಬ್ಬ ತಾನೀ ಭೂಮಿಗಿಳಿದು ಬಂದ
ಅಪ್ರತಿಮ ತ್ವರಿತಗತಿ ಅಗ್ನಿ-ಪಾದಗಳಿಂದ.
ಮಾನವನ ಮೈ ಕಟ್ಟು ಘನಗರ್‍ಜನೆಯ ತೊಟ್ಟು,
ನರಗರ್‍ಭದಲ್ಲಿ ಹುಟ್ಟಿತ್ತು ಬೆಳಕು.

ಸ್ವರ್‍ಗದತಿ ಶಾಂತಗತಿ, ಮಹಿಮೆಯಾ ಮಾಧುರ್‍ಯ, ಪರಿಶುದ್ಧರಾಗ
ಗರಿಗೊಂಡ ಬಲ ಇಳಿದು ಬಂದವಾಗ.
ಎಲ್ಲ ದೇವತೆಗಳೂ ಒಂದೆ ಮರ್‍ತ್ಯ ಶರೀರದಲ್ಲಿ ಬಾಳಿದವು
ಒಂದೇ ಹೆಸರ ತಾಳಿದವು.

ಅಗಲಗಲ ಗತಿಯ ಅಲೆ ಮಸಕು ಭೂಮಂಡಲದಿ ಬಂತು ಬಳಲಿ
ಉತ್ಫುಲ್ಲಸ್ವಪ್ನೋತ್ಥಗುಂಫಗಳಲಿ.
ಭವ್ಯತೆಯ ಕರುವಿಟ್ಟ ಹಾಗೆ ಬಾಳಾಗಿತ್ತು
ಕಡಲಗಲ ಕೈ ಕಾಲ-ಚಕ್ರ ಅಮುಕಿತ್ತು.

ಮಾನವನ ಆತ್ಮ ಮತ್ತೊಮ್ಮೆ ಪಡೆದಿತು ಬಾಳ ಸಾರಥ್ಯ
ಧೀರ ಉದ್ಧತ ದೇವದೇವತೆಗಳಾತಿಥ್ಯ.
ಪ್ರಪ್ರಭಂಜನ ಪಕ್ಷ ಉತ್‌ಕ್ಷಿಪ್ತ ವಾಯುಪಥದಲ್ಲಿ ಹಾರಿತ್ತು
ಭವ್ಯ ಆದರ್‍ಶಕ್ಕೆ ಗುರಿಯಿಟ್ಟು ಎಸೆದ ಈಟಿಯ ಹಾಗೆ ಏರಿತ್ತು.

ಡೆಂಡಣಿಸಿ ಕಳಚಿ ಬಿದ್ದವು ಪುರಾತನಾಯಸ ಕವಚ
ಗೋಡೆ ಸಿಡಿದೊಡೆದು ಬಿದ್ದಿತು ಪುರಾಣ ಪ್ರಕೃತಿ
ತರುಣತರ ಸೌಂದರ್‍ಯ, ಸುವಿಚಾರ, ಸುಪ್ರಭೆಯ ಜಗದಿ
ಹೊಕ್ಕ ದೇವನು ಮತ್ತೆ ತನ್ನ ಹೊಸತನದಿ.

ಮೂಡಿತ್ತು ದೇವವಾಣಿಯ ಸೊಲ್ಲು ಮಾನವರ ತುಟಿಯಲ್ಲು
ಹೃದಯ ಎಚ್ಚತ್ತಿತ್ತು ಮಿಂಚು ಬೆಡಗಿನ ಬಿಳಿಯ ನಸುಕುಗಳಲು
ಗಾಳಿ ಬೆಳಕಿನ ಬಟ್ಟೆ, ಉಸಿರು ಹರ್‍ಷದ ಕುಸರು
ದೇವಲೀಲೆಯ ಆಟದಂತೆ ಬಾಳು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...