Home / ಕವನ / ಕವಿತೆ / ಅಗ್ನಿರಾಜ

ಅಗ್ನಿರಾಜ

ಅಗ್ನಿರಾಜ:
ಬೆಂಕಿ ನಿಲುವಂಗಿ ತೊಟ್ಟುಕೊಂಡು ಬುವಿಯಿಂದ ಬಂದ ಜೀವ
ಸಪ್ತಸ್ವರ್‍ಗಗಳ ಸುಪ್ತ ಮೌನವನು ದಾಟಿಕೊಂಡು ಯಾವ?
ನೀನು ಏನು ಅಧ್ಯಾತ್ಮದೌರಸನೊ? ಅಭವ ಸ್ವಯಂಭವನು.
ಪರಂಧಾಮದಾ ಅತಿಥಿಯೇನು? ಪೌರಾಣ ಕಾಲದವನು.

ಮನುಕುಲ ದೂತ:
ಮಾನವ್ಯಕುಲದ ಹರಿಕಾರ ನಾನು, ಆಂತರ್‍ಯದಾತ್ಮಸಾನು;
ಇರುಳನ್ನು ಕೊಡಹಿ ಸಾವನ್ನೆ ತಡೆದ ಪ್ರಪ್ರಥಮ ಪ್ರಮಥ ನಾನು;
ಅಮೃತಬಿಂಬ ಪ್ರತಿಬಿಂಬಿಸಿರುವ ಸೌಂದರ್‍ಯಲಕ್ಷ್ಮಿಸೂನು.
ಅಮರ ಜ್ಯೋತಿ ಮೃಗವೇಧಕಾಗಿ ಬಂದಂಥ ವ್ಯಾಧಶಿವನು.

ಅಗ್ನಿ ರಾಜ:
ತನ್ನ ಶಕ್ತಿಯಲಿ ನಿನ್ನ ಸುತ್ತಿರುವುದಾವ ಬೆಂಕಿ ಉರಿಯು?
ಪಾಲಿಸುತ್ತಿರೆಯು ಬರ್‍ಚಿ ನಾಲಗೆಯ ಚಾಚಿ ಕಾಯುತಿರೆಯು
ಸನಾತನದ ಸತ್ಕಾಲದಲ್ಲಿ ಸಂಚರಿಸುತ್ತಿಲ್ಲಿ ಬಂದೆ
ಕಲ್ಪನಾತೀತವಾದ ನವಕಿರಣದೊಂದು ಅಂಶವೆಂದೆ?

ಮನುಕುಲ ದೂತ:
ನವೋನವದ ಜಾಗೃತಿಯಲೆದ್ದ ಜೀವಾಗ್ನಿ ತೋಚುತಿಹುದು;
ಮರಣ ಸೀಳಿ ಉದ್ಭವಿಸಿ ಮೇಲೆ ಶಾಶ್ವತಕೆ ಚಾಚುತಿಹುದು;
ಯಜ್ಞ ಪಕ್ಷಿ ಗುರಿಯತ್ತ ಹಾರಿ ಶಿಖೆ ಏರಿ ಹರಿಯುತಿಹುದು;
ಮಾನವ್ಯದಲ್ಲಿ ಮಲಗಿದ್ದು ಎದ್ದ ದೇವತ್ವ ಉರಿಯುತಿಹುದು.

ಅಗ್ನಿರಾಜ:
ಭಂಗುರದ ಹಂಗು ಹರಕೊಂಡು ಬಂದೆ, ಓ ಮಗುವೆ ಏನೋ ಬೇಕೊ?
ಮುಕ್ತನಾಗಿ ಸಾವಿರದ ಸಯ್ತಿನಲಿ ಗುಮ್ಮನಿಹುದೆ? ಸಾಕೋ.
ಏನು ಬ್ರಹ್ಮ ಸಂಮುಖಕೆ ಸಾಕ್ಷಿಯಾಗಿರುವೆ ಎನುವೆ ನೀನು
ಅಸ್ಪರ್‍ಶ ಯೋಗ ನಿರ್‍ವಾಣದಲ್ಲಿ ಲಯವಾಗಬೇಕು ಏನು?

ಮನುಕುಲ ದೂತ:
ಪಾತಾಳಖಾತದಜ್ಞಾನದಲ್ಲು ಹೊತ್ತಿರಲಿ ದಿವ್ಯದೀಪ್ತಿ.
ನರಕಯಾತನೆಯ ಜೀವದಲ್ಲಿ ತಾನಿರಲಿ ದೇವಶಕ್ತಿ.
ಮೂರುಕಾಲಕೂ ಮೀರಿ ದುಃಖಿಸದ ಸುಖವು ಭೂಮಿಗೆಂದೆ
ಅಕ್ಷುಬ್ಧವಾದ ಹದಗೆಡದ ಶಾಂತಿ ಮಾನವಗೆ ಬೇಡಬಂದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...