Home / ಕವನ / ಕವಿತೆ / ಅಗ್ನಿರಾಜ

ಅಗ್ನಿರಾಜ

ಅಗ್ನಿರಾಜ:
ಬೆಂಕಿ ನಿಲುವಂಗಿ ತೊಟ್ಟುಕೊಂಡು ಬುವಿಯಿಂದ ಬಂದ ಜೀವ
ಸಪ್ತಸ್ವರ್‍ಗಗಳ ಸುಪ್ತ ಮೌನವನು ದಾಟಿಕೊಂಡು ಯಾವ?
ನೀನು ಏನು ಅಧ್ಯಾತ್ಮದೌರಸನೊ? ಅಭವ ಸ್ವಯಂಭವನು.
ಪರಂಧಾಮದಾ ಅತಿಥಿಯೇನು? ಪೌರಾಣ ಕಾಲದವನು.

ಮನುಕುಲ ದೂತ:
ಮಾನವ್ಯಕುಲದ ಹರಿಕಾರ ನಾನು, ಆಂತರ್‍ಯದಾತ್ಮಸಾನು;
ಇರುಳನ್ನು ಕೊಡಹಿ ಸಾವನ್ನೆ ತಡೆದ ಪ್ರಪ್ರಥಮ ಪ್ರಮಥ ನಾನು;
ಅಮೃತಬಿಂಬ ಪ್ರತಿಬಿಂಬಿಸಿರುವ ಸೌಂದರ್‍ಯಲಕ್ಷ್ಮಿಸೂನು.
ಅಮರ ಜ್ಯೋತಿ ಮೃಗವೇಧಕಾಗಿ ಬಂದಂಥ ವ್ಯಾಧಶಿವನು.

ಅಗ್ನಿ ರಾಜ:
ತನ್ನ ಶಕ್ತಿಯಲಿ ನಿನ್ನ ಸುತ್ತಿರುವುದಾವ ಬೆಂಕಿ ಉರಿಯು?
ಪಾಲಿಸುತ್ತಿರೆಯು ಬರ್‍ಚಿ ನಾಲಗೆಯ ಚಾಚಿ ಕಾಯುತಿರೆಯು
ಸನಾತನದ ಸತ್ಕಾಲದಲ್ಲಿ ಸಂಚರಿಸುತ್ತಿಲ್ಲಿ ಬಂದೆ
ಕಲ್ಪನಾತೀತವಾದ ನವಕಿರಣದೊಂದು ಅಂಶವೆಂದೆ?

ಮನುಕುಲ ದೂತ:
ನವೋನವದ ಜಾಗೃತಿಯಲೆದ್ದ ಜೀವಾಗ್ನಿ ತೋಚುತಿಹುದು;
ಮರಣ ಸೀಳಿ ಉದ್ಭವಿಸಿ ಮೇಲೆ ಶಾಶ್ವತಕೆ ಚಾಚುತಿಹುದು;
ಯಜ್ಞ ಪಕ್ಷಿ ಗುರಿಯತ್ತ ಹಾರಿ ಶಿಖೆ ಏರಿ ಹರಿಯುತಿಹುದು;
ಮಾನವ್ಯದಲ್ಲಿ ಮಲಗಿದ್ದು ಎದ್ದ ದೇವತ್ವ ಉರಿಯುತಿಹುದು.

ಅಗ್ನಿರಾಜ:
ಭಂಗುರದ ಹಂಗು ಹರಕೊಂಡು ಬಂದೆ, ಓ ಮಗುವೆ ಏನೋ ಬೇಕೊ?
ಮುಕ್ತನಾಗಿ ಸಾವಿರದ ಸಯ್ತಿನಲಿ ಗುಮ್ಮನಿಹುದೆ? ಸಾಕೋ.
ಏನು ಬ್ರಹ್ಮ ಸಂಮುಖಕೆ ಸಾಕ್ಷಿಯಾಗಿರುವೆ ಎನುವೆ ನೀನು
ಅಸ್ಪರ್‍ಶ ಯೋಗ ನಿರ್‍ವಾಣದಲ್ಲಿ ಲಯವಾಗಬೇಕು ಏನು?

ಮನುಕುಲ ದೂತ:
ಪಾತಾಳಖಾತದಜ್ಞಾನದಲ್ಲು ಹೊತ್ತಿರಲಿ ದಿವ್ಯದೀಪ್ತಿ.
ನರಕಯಾತನೆಯ ಜೀವದಲ್ಲಿ ತಾನಿರಲಿ ದೇವಶಕ್ತಿ.
ಮೂರುಕಾಲಕೂ ಮೀರಿ ದುಃಖಿಸದ ಸುಖವು ಭೂಮಿಗೆಂದೆ
ಅಕ್ಷುಬ್ಧವಾದ ಹದಗೆಡದ ಶಾಂತಿ ಮಾನವಗೆ ಬೇಡಬಂದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...