Home / ಕವನ / ಕವಿತೆ / ಅತೃಪ್ತಿ

ಅತೃಪ್ತಿ

ಎಲ್ಲಿದೆಲ್ಲಿದೆ ತಣಿವು ? ಏತರಲ್ಲಿದೆ ತಣಿವು ?
ಎಲ್ಲಿಯೆಲ್ಲಿಯು ಕಾಣಲೊಲ್ಲದಾ ತಣಿವು!

ಕುಸುರುಕುಸುರಿನ ಚಿನ್ನ -ರನ್ನ ದೊಡವೆಗಳಿಟ್ಟು
ಹೊಸ ಮಿರುಗಿನಾ ಸೀರೆ ಬಣ್ಣಗುಪ್ಪಸ ತೊಟ್ಟು
ಸಾಕುಸಾಕಿನ್ನೆಂಬ ತಣಿವ ಪಡೆಯುವರು,
ಆ ಕೆಳದಿಯರು ನಕ್ಕು ನಲಿದಾಡುತಿಹರು.

ಇದು ಏನು? ನನ್ನದೀ ಎದೆಯಾಟವಚ್ಚರಿಯು!
ಒಡವೆಯುಡುಗೆಯನೊಲಿದು ಪಡೆಯುವೆನು, ಆದರೆಯು
ಒಡವೆ ಬಗೆದುಗುಡವನು ದೂಡಲಿಲ್ಲ!
ಉಡುಗೆ ತಣಿವನು ನಸುವು ನೀಡಲಿಲ್ಲ!

ಸರಿವರಯದವರೆಲ್ಲ ತೆರತೆರದ-ಹುರುಳಿರುವ-
ಅರಳುಗಳ ನುಡಿಮುಡಿದು ಹರುಷದಲಿ ಹಿಗ್ಗುವರು.
ಹಾರಯಿಸಿ ಹಾರಯಿಸಿ ಹೂಮುಡಿಯೆ ನಾನು,
ತೀರಲಿಲ್ಲವತೃಪ್ತಿ, ಹೇರಿತದು ಇನ್ನೂ!

ಕೊಳಲೂದಿ ವೀಣೆ ತಂಬೂರಿಗಳ ಬಾಜಿಸುತ
ಗೆಳತಿಯರು ಸುಲಭದಲಿ ಗಳಿಸುವರು ತೃಪ್ತಿಯನು;
ಕೊಳಲುಲಿಯು ಬಗೆದುಗುಡ ದೊಡಲಿಲ್ಲ!
ವೀಣೆ ತಣಿವನು ನಸುವು ನೀಡಲಿಲ್ಲ!

ಅನುಕೂಲದೈವರಾ ವನಿತೆಯರು, ನಾ ದೈವ-
ದನುನಯವ ಕಳೆದುಕೊಂಡವಳು; ದಿಟವೇ ದೇವ?
ಅಲ್ಲವಿಂತಿದು! ಅವರದದೆ ಸುಖದ ಕೊನೆಯು;
ಎಲ್ಲಿದೆಯೊ ದೂರ ನನ್ನಾ ಸುಖದ ಮನೆಯು..!

ಆ ಸುಖದ ಮನೆಯನೊಂದಿಸುವ ಒಡವೆಯ ಬಯಸಿ
ಆಶೆ-ಸೊನ್ನರತಿ ಬಗೆಯೊಳಗೆ ಬೆಂಕೆಯನಿರಿಸಿ
ಊದಿ ಉರಿಮಾಡಿ ಏನನೋ ಕಾಸುತಿಹಳು,
ಏತರಿಂದಲೊ ಯಾವುದನೊ ಹಣಿಯುತಿಹಳು.
* * * *
ಮನವ ಮನೆಮಾಡಿರುವ ದುಗುಡವನು ತೆಗೆದು
ತಣಿವನೀವಾ ಒಡವೆ ದೊರೆವುದೆನಗೆಂದು?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...