Home / ಕವನ / ಕವಿತೆ / ಓಡುತೆ ಬಾ! ಬಾ!

ಓಡುತೆ ಬಾ! ಬಾ!


ಮೂಡಣ ದಿಶೆಯಲಿ
ಪಡುವಣ ದಿಶೆಯಲಿ
ಮೂಡುವ ಅಡಗುವ
ರವಿ ಹೊಂಬಣ್ಣವ
ಭರದಲಿ, ಹರುಷದಿ
ಹೊಗಳುತಲಿರುತಿರೆ ಕವಿಜನರು;
ಚೆನ್ನೆಯೆ ನಿನ್ನಯ
ಕನ್ನಡಿ ಹೊಳಪಿನ
ಕನ್ನೆಯ ಮೇಲಣ
ಕೆಂಬಣ್ಣವ ನಾ
ಹೊಗಳುತ ನಿಂತಿಹೆ
ಓಡುತೆ ಬಾ! ಬಾ! ಹಾರುತೆ ಬಾ! ಬಾ!


ಸರದಲಿಶೋಭಿಪ
ಅರಳಿದಕಮಲಕೆ
ಗುಂಗೀಹುಳಗಳು
ಮಕರಂದವ ಸಲೆ
ಸೇವಿಸಲೆಂದುಂ ಧಾವಿಪ
ನೋಟವ ಬಣ್ಣಿಸುತಿರಲಾಕವಿಜನರು;

ಸರಸಿಜವದನೆಯೆ
ನನ್ನಯಪ್ರೇಮದ
ಗುಂಗೀಹುಳವದು
ನಿನ್ನಯ ಅಧರಾಮೃತವಂ
ಸೇವಿಸೆ ಧಾವಿಸಿ
ದಣಿದಿದೆ ಬಾ! ಬಾ! ತಣಿಸಲು ಬಾ! ಬಾ!


ಬೆಳಗಿನಜಾವದಿ
ತೋಟದನೋಟ!
ಪರಿಮಳಬೀರುವ
ಪೂಗಳನೋಟ!
ಕುಣಿಕುಣಿದಾಡುವ
ನವಿಲಿನ ನೋಟವದೆಲ್ಲವು ಕವಿಜನಕಿರಲಿ;
ರಮಣಿಯೆ ನನಗಿದೆ
ನಿನ್ನಯ ನೋಟ!
ಆದದೋ ಅಲ್ಲಿದೆ
ಪ್ರೇಮದ ತೋಟ!
ಸುಂದರಿ ನಲಿಯಲು
ಓಡುತೆ ಬಾ! ಬಾ! ಹಾರುತೆ ಬಾ! ಬಾ!


ರಮಣಿಯೆ ನೋಡದೂ
ಹಿರಿಯರು ನೀಡಿದ
ಗಾಂಧಿಯು ಬಯಸುವ
ಪಾವನ ರಾಟಿಯ
ಹಿಂದಕೆ ಒಗೆವುದೆ?
ಬಾ! ಬಾ! ತಿರುಹಲು ಬೇಗನೆ ಬಾ! ಬಾ!
ನೂಲನುತೆಗೆದಿಡು!
ಮಗ್ಗವಹೂಡುವೆ!
ವಸ್ತ್ರವಮಾಡುವೆ!
ಬಡವಗೆನೀಡಲು
ಪುಣ್ಯವಪಡೆಯಲು
ಓಡುತೆ ಬಾ! ಬಾ! ಹಾರುತೆ ಬಾ! ಬಾ!


ಕಮಲಿನಿಬೇಕು;
ನನಯಬಲವದು
ನಿನಗಿರಬೇಕು;
ನಿನ್ನಯಬಲವದು
ನನಗಿರಬೇಕು;
ಈರ್‍ವರ ಬಲವಧುದೇಶಕೆಬೇಕು;
ಕನ್ನಡಮಾತೆಯ
ಭಾರತಮಾತೆಯ
ಸೇವೆಯಗೈಯುತೆ
ಪ್ರೇಮದಲೀರ್‍ವರು
ಸಗ್ಗಕೆಪೋಗುವಾ!
ಓಡುತೆ ಬಾ! ಹಾ! ಹಾರುತೆ ಬಾ! ಬಾ!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...