Home / ಲೇಖನ / ಇತರೆ / ವಚನ ವಿಚಾರ – ಇದು ಇದ್ದರೆ ಅದು

ವಚನ ವಿಚಾರ – ಇದು ಇದ್ದರೆ ಅದು

ಅಂಬುವಿಲ್ಲದಿರ್‍ದಡೆ ಅಂಬುಜವನಾರು ಬಲ್ಲರು
ನೀರಿಲ್ಲದಿರ್‍ದಡೆ ಹಾಲನಾರು ಬಲ್ಲರು
ನಾನಿಲ್ಲದಿರ್‍ದಡೆ ನಿನ್ನನಾರು ಬಲ್ಲರು
ನಿನಗೆ ನಾ
ನನಗೆ ನೀ
ನಿನಗೂ ನನಗೂ ಬೇರೊಂದು ನಿಜವುಂಟೆ
ನಿಃಕಳಂಕ ಮಲ್ಲಿಕಾರ್‍ಜುನಾ

[ಅಂಬು-ನೀರು, ಅಂಬುಜ-ತಾವರೆ, ನೀರಿಲ್ಲದಿರ್‍ದಡೆ-ನೀರಿಲ್ಲದಿದ್ದರೆ]

ಇದು ಮೋಳಿಗೆ ಮಾರಯ್ಯನ ವಚನ. ಅರ್‍ಥ ಅನ್ನುವುದು ಇರುವುದು ದ್ವಂದ್ವಗಳಲ್ಲೇ. ವ್ಯತ್ಯಾಸಗಳೇ ಇರದಿದ್ದರೆ ಅರ್ಥವೂ ಇಲ್ಲ, ಬೇಕಾಗಿಲ್ಲ.

ಅಂಬು ಇರದಿದ್ದರೆ ಅಂಬುಜ ಯಾರಿಗೆ ಗೊತ್ತಾಗುತ್ತದೆ? ಹೇಗೆ ಇರುತ್ತದೆ? ನೀರು ಇರುವುದರಿಂದಲೇ ಹಾಲು ಅನ್ನುವ ಪದಾರ್‍ಥಕ್ಕೆ ಅರ್‍ಥ ಮತ್ತು ಬೆಲೆ. ನಾನೇ ಇರದಿದ್ದರೆ ನೀನು ಅನ್ನುವುದಕ್ಕೆ ಅರ್‍ಥವೆಲ್ಲಿ? ನಾನು ಇರದಿದ್ದರೆ ನಿನ್ನನ್ನು ಅರ್‍ಥಮಾಡಿಕೊಳ್ಳುವವರಾದರೂ ಯಾರು? ‘ನಾನು’ ಅನ್ನುವುದು ಇರುವುದರಿಂದಲೇ ‘ನೀನು’ ಅನ್ನುವುದಕ್ಕೆ ಅರ್‍ಥ. ನಿಜ. ಆದರೆ ಈ ಎಲ್ಲ ಇಮ್ಮೈ ದ್ವಂದ್ವಗಳಿಗೂ ಇರುವ ನಿಜ ಮಾತ್ರ ಒಂದೇ.

ನನಗೂ ನಿನಗೂ ಬೇರೊಂದು ನಿಜವುಂಟೆ ಎಂದು ದೇವರನ್ನು ಕೇಳುತ್ತಾನೆ. ನನ್ನ ಸತ್ಯ ಬೇರೆ, ನಿನ್ನ ಸತ್ಯ ಬೇರೆ ಅನ್ನುವುದು ನಿಜವಲ್ಲ. ಸತ್ಯ ಅನ್ನುವುದು ಒಂದೇ, ಎರಡೆಂಬಂತೆ ಕಾಣುವ ದ್ವಂದ್ವಗಳೆಲ್ಲಕ್ಕೂ ಸತ್ಯವೇ ಆಧಾರ. ಅದನ್ನು ಹೇಳುವುದಲ್ಲ ಕಾಣಲು ಸಾಧ್ಯವಾಗಬೇಕು.
*****

Tagged:

Leave a Reply

Your email address will not be published. Required fields are marked *

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...