Home / ಲೇಖನ / ಇತರೆ / ಕೆ ಕೃಷ್ಣಪ್ಪನವರು

ಕೆ ಕೃಷ್ಣಪ್ಪನವರು

ಅಂದು ಶಾಲೆಗೆ ಲೇಟ್ ಕೆಂಚಪ್ಪ ಅವರ ಮಗ ಕೆ. ಕೃಷ್ಣಪ್ಪ ಅವರು ಇತ್ತೀಚೆಗೆ ವಿದೇಶದಿಂದ ಬಂದಿದ್ದರು.

ಕೆ. ಕೃಷ್ಣಪ್ಪನವರು- ಸಾರಿಗೆ ಸಂಸ್ಥೆಯ ಮುದ್ರಣಾಲಯದಲ್ಲಿ ಹಿರಿಯ ಮ್ಯಾಕ್ಯಾನಿಕ್ ಇಂಜಿನಿಯರ್ ಆಗಿ ದಕ್ಷತೆ ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಅವರನ್ನು ಶಾಲಾ ಶಿಕ್ಷಕರೆಲ್ಲ ಮಕ್ಕಳೆಲ್ಲ ಸೇರಿ ಏನನ್ನಾದರೂ ವಿದೇಶದ ಸುದ್ದಿಯೊಂದನ್ನು ಹೇಳಬೇಕೆಂದು ವಿನಂತಿಸಿದರು. ಅಪಾರ ಅನುಭವ ಸೇವಾ ಹಿರಿತನದ ಹಿರಿಯ ವಿಶ್ವಚೇತನವೆಂದೇ ಖ್ಯಾತರಾದ ಶ್ರೀಯುತ ಕೆ. ಕೃಷ್ಣಪ್ಪನವರು ಎದ್ದು ನಿಂತು- ತಾವು ವಿದೇಶದಿಂದ ತಂದಿದ್ದ “ವೈರ್‌ಲೆಸ್ ಪೋಡೊ…”ವನ್ನು ಎಲ್ಲರಿಗೆ ಕುತೂಹಲದಿಂದ ತೋರಿಸುತ್ತಾ ಹೋದರು. ಹೊಚ್ಚ ಹೊಸ ಸೆಟ್ ಅದು! ತಂತ್ರಜ್ಞಾನದ ಉತ್ಕೃಷ್ಟ ಕೊಡುಗೆಯದು ಕೆ. ಕೃಷ್ಣಪ್ಪನವರು ಮಾತಿಗಾರಂಭಿಸಿದರು…

ಓ ನನ್ನ… ಮುದ್ದು ಮಕ್ಕಳೆ… ನೀವೆಲ್ಲ ವೈರ್‌ಲೆಸ್ ಪೋಡೊವನ್ನು ಈಗ ನೋಡಿದಿರಲ್ಲಾ…?! ಇನ್ನು ಮುಂದೆ ಸೆಲ್‌ಫೋನ್ ಕೈಲಿಡಿದು ಸೆಲ್ಫಿಗೆ ಲುಕ್ ಕೊಡುವುದೂ ತುಸು ಇಬ್ಬಂದಿನೇ… ಅಪಾಯನೇ ಎಷ್ಟೋ ಜನರು ಪ್ರಾಣ ಕಳೆದುಕೊಂಡಿರುವರೂ… ಕೂಡಾ. ಅದೂ ನಿಖರವಾಗಿ ಬರುವುದೆಂದೂ ಖಾತ್ರಿ ಇಲ್ಲ! ಇಂಥಾ ಪುಟ್ಟ ಸಮಸ್ಯೆಯನ್ನು ದೂರ ಮಾಡಲು ಬಂದ ‘ಸೆಲ್ಫಿಸ್ಟಿಕ್’ ಕೂಡಾ ತುಂಬಾ ಓಲ್ಡಾಯಿತು..!!

ಈಗೀಗ ದೇಶ ವಿದೇಶಗಳಲ್ಲಿ ತೀರಾ ಸದ್ದುಗದ್ದಲ ಮಾಡುತ್ತಿರುವುದು ವೈರ್‌ಲೆಸ್ ಪೋಡೊ.. ಈಗೋ ನನ್ನ ಕೈಲಿರುವ ವೈರ್‌ಲೆಸ್ ಪೋಡೊ… ಇದು ಬ್ಲೂಟೂತ್ ರೀತಿಯಲ್ಲಿ ಕೆಲಸ ಮಾಡುವುದು. ಈಗೋ ಇದರ ಹಿಂಬದಿಗೆ ಮ್ಯಾಗ್ನೆಟ್ ಇದ್ದು ಎಲ್ಲಿ ಬೇಕಾದಲ್ಲಿ ಸಿಕ್ಕಿಸಲು ಕ್ಲಿಕ್ಕಿಸಲು ಸಾಧ್ಯವಿದೆ. ತದನಂತರ ನಿಮ್ಮ ಸೆಲ್‌ಫೋನ್‌ಗೆ ಕನೆಕ್ಟ್ ಮಾಡಿಕೊಳ್ಳಬಹುದು!

ವಿಡಿಯೋ ಗ್ರೂಪ್ ಫಿ ಕೂಡಾ ಸಾಧ್ಯ! ಹೀಗಾಗಿ ಬೇರೊಬ್ಬರಿಗೆ ಫೋಟೋ ತೆಗೆಯಿರಿ ಎಂದು ದುಂಬಾಲು ಬೀಳುವುದೂ ಇರುವುದಿಲ್ಲ ಎಂದು ಕೆ. ಕೃಷ್ಣಪ್ಪನವರು ಬಾಳ ಚೆಂದಾಗಿ ವಿವರಿಸುತ್ತಾ ನಿಂತರು.

ಅಲ್ಲಿದ್ದವರೆಲ್ಲ ಬಲು ಕುತೂಹಲದಿ ಕೇಳುತ್ತಾ ಕುಳಿತರು. ಇವರ ಮಾತೆಂದರೆ ಹಾಲು ಜೇನು ಸವಿಸವಿ ಕಲ್ಲು ಸಕ್ಕರೆ ಎಲ್ಲರಿಗೆ ಅವರೆಂದರೆ… ಅಕ್ಕರೆ….

ಹೌದು! ಪುಟ್ಟದಾದ ಅಂದಚೆಂದದ ಈ ವೈರ್‌ಲೆಸ್‌ ಪೋಡೊವನ್ನು ನೀವೆಲ್ಲ ಸುಲಭವಾಗಿ ನಿಮ್ಮೊಂದಿಗೆ ಎಲ್ಲಿಗೆ ಬೇಕಾದರೂ ಜೊತೆ ಜೊತೆಯಲ್ಲಿ ತೀರಾ ಸರಳವಾಗಿ ತೆಗೆದುಕೊಂಡು ಹೋಗಬಹುದು. ಏಕೆಂದರೆ ನೀವೂ ಎಲ್ಲಿ ಬೇಕಾದರೂ ನಿಂತು ಕುಂತು ಲುಕ್ ಕೊಟ್ಟರೆ ಸಾಕು ಅದರಷ್ಟಕ್ಕೆ ಅದೇ ಫೋಟೋ ತೆಗೆಯುವುದು! ಹೀಗಿದೆ ಪೋಡೊ.. ಮಹಿಮೆ?! ಕೃಷ್ಣಪ್ಪನವರ ಮಾತಿನ ಮೋಡಿನ ಹಾಗೇ ಮುತ್ತಿನ ಹಾರದಾ ಹಾಗೇ. ಮಾಣಿಕ್ಯದ ದೀಪ್ತಿಯಾ ಹಾಗೇ… ಅಲ್ಲಿದ್ದವರೆಲ್ಲ ಹೌದೌದು ಎಂದರು.

ಎಲ್ಲರ ಕೈಯಲ್ಲಿರುವ ಸೆಲ್ ಫೋನ್‌ಗಳ ದರಗಳಂತೇ ಇದೂ ಕೂಡಾ ಹೆಚ್ಚಿನ ದರವಿಲ್ಲ! ಹೆಚ್ಚಿನ ಉಪಯೋಗವಿದೆಯೆಂದೂ.. ಕೆ.ಕೃಷ್ಣಪ್ಪನವರು ವಿವರಿಸುತ್ತಾ ನಿಂತರು. ಹೊತ್ತು ಹೋಗಿದ್ದು ಗೊತ್ತೇ ಆಗಲಿಲ್ಲ. ಹೊಸ ಹೊಸ ವಿಚಾರ ಹೊಚ್ಚ ಹೊಸತು ಪೋಡೊ….

ಅಲ್ಲಿದ್ದವರೆಲ್ಲ ಹರ್ಷದಿ ಚಪ್ಪಾಳೆ ತಟ್ಟಿದರಲ್ಲದೆ, ಅವರನ್ನು ಸನ್ಮಾನಿಸಿದರು. ಅಲ್ಲಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...