Home / ಲೇಖನ / ಇತರೆ / ಕೆ ಕೃಷ್ಣಪ್ಪನವರು

ಕೆ ಕೃಷ್ಣಪ್ಪನವರು

ಅಂದು ಶಾಲೆಗೆ ಲೇಟ್ ಕೆಂಚಪ್ಪ ಅವರ ಮಗ ಕೆ. ಕೃಷ್ಣಪ್ಪ ಅವರು ಇತ್ತೀಚೆಗೆ ವಿದೇಶದಿಂದ ಬಂದಿದ್ದರು.

ಕೆ. ಕೃಷ್ಣಪ್ಪನವರು- ಸಾರಿಗೆ ಸಂಸ್ಥೆಯ ಮುದ್ರಣಾಲಯದಲ್ಲಿ ಹಿರಿಯ ಮ್ಯಾಕ್ಯಾನಿಕ್ ಇಂಜಿನಿಯರ್ ಆಗಿ ದಕ್ಷತೆ ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಅವರನ್ನು ಶಾಲಾ ಶಿಕ್ಷಕರೆಲ್ಲ ಮಕ್ಕಳೆಲ್ಲ ಸೇರಿ ಏನನ್ನಾದರೂ ವಿದೇಶದ ಸುದ್ದಿಯೊಂದನ್ನು ಹೇಳಬೇಕೆಂದು ವಿನಂತಿಸಿದರು. ಅಪಾರ ಅನುಭವ ಸೇವಾ ಹಿರಿತನದ ಹಿರಿಯ ವಿಶ್ವಚೇತನವೆಂದೇ ಖ್ಯಾತರಾದ ಶ್ರೀಯುತ ಕೆ. ಕೃಷ್ಣಪ್ಪನವರು ಎದ್ದು ನಿಂತು- ತಾವು ವಿದೇಶದಿಂದ ತಂದಿದ್ದ “ವೈರ್‌ಲೆಸ್ ಪೋಡೊ…”ವನ್ನು ಎಲ್ಲರಿಗೆ ಕುತೂಹಲದಿಂದ ತೋರಿಸುತ್ತಾ ಹೋದರು. ಹೊಚ್ಚ ಹೊಸ ಸೆಟ್ ಅದು! ತಂತ್ರಜ್ಞಾನದ ಉತ್ಕೃಷ್ಟ ಕೊಡುಗೆಯದು ಕೆ. ಕೃಷ್ಣಪ್ಪನವರು ಮಾತಿಗಾರಂಭಿಸಿದರು…

ಓ ನನ್ನ… ಮುದ್ದು ಮಕ್ಕಳೆ… ನೀವೆಲ್ಲ ವೈರ್‌ಲೆಸ್ ಪೋಡೊವನ್ನು ಈಗ ನೋಡಿದಿರಲ್ಲಾ…?! ಇನ್ನು ಮುಂದೆ ಸೆಲ್‌ಫೋನ್ ಕೈಲಿಡಿದು ಸೆಲ್ಫಿಗೆ ಲುಕ್ ಕೊಡುವುದೂ ತುಸು ಇಬ್ಬಂದಿನೇ… ಅಪಾಯನೇ ಎಷ್ಟೋ ಜನರು ಪ್ರಾಣ ಕಳೆದುಕೊಂಡಿರುವರೂ… ಕೂಡಾ. ಅದೂ ನಿಖರವಾಗಿ ಬರುವುದೆಂದೂ ಖಾತ್ರಿ ಇಲ್ಲ! ಇಂಥಾ ಪುಟ್ಟ ಸಮಸ್ಯೆಯನ್ನು ದೂರ ಮಾಡಲು ಬಂದ ‘ಸೆಲ್ಫಿಸ್ಟಿಕ್’ ಕೂಡಾ ತುಂಬಾ ಓಲ್ಡಾಯಿತು..!!

ಈಗೀಗ ದೇಶ ವಿದೇಶಗಳಲ್ಲಿ ತೀರಾ ಸದ್ದುಗದ್ದಲ ಮಾಡುತ್ತಿರುವುದು ವೈರ್‌ಲೆಸ್ ಪೋಡೊ.. ಈಗೋ ನನ್ನ ಕೈಲಿರುವ ವೈರ್‌ಲೆಸ್ ಪೋಡೊ… ಇದು ಬ್ಲೂಟೂತ್ ರೀತಿಯಲ್ಲಿ ಕೆಲಸ ಮಾಡುವುದು. ಈಗೋ ಇದರ ಹಿಂಬದಿಗೆ ಮ್ಯಾಗ್ನೆಟ್ ಇದ್ದು ಎಲ್ಲಿ ಬೇಕಾದಲ್ಲಿ ಸಿಕ್ಕಿಸಲು ಕ್ಲಿಕ್ಕಿಸಲು ಸಾಧ್ಯವಿದೆ. ತದನಂತರ ನಿಮ್ಮ ಸೆಲ್‌ಫೋನ್‌ಗೆ ಕನೆಕ್ಟ್ ಮಾಡಿಕೊಳ್ಳಬಹುದು!

ವಿಡಿಯೋ ಗ್ರೂಪ್ ಫಿ ಕೂಡಾ ಸಾಧ್ಯ! ಹೀಗಾಗಿ ಬೇರೊಬ್ಬರಿಗೆ ಫೋಟೋ ತೆಗೆಯಿರಿ ಎಂದು ದುಂಬಾಲು ಬೀಳುವುದೂ ಇರುವುದಿಲ್ಲ ಎಂದು ಕೆ. ಕೃಷ್ಣಪ್ಪನವರು ಬಾಳ ಚೆಂದಾಗಿ ವಿವರಿಸುತ್ತಾ ನಿಂತರು.

ಅಲ್ಲಿದ್ದವರೆಲ್ಲ ಬಲು ಕುತೂಹಲದಿ ಕೇಳುತ್ತಾ ಕುಳಿತರು. ಇವರ ಮಾತೆಂದರೆ ಹಾಲು ಜೇನು ಸವಿಸವಿ ಕಲ್ಲು ಸಕ್ಕರೆ ಎಲ್ಲರಿಗೆ ಅವರೆಂದರೆ… ಅಕ್ಕರೆ….

ಹೌದು! ಪುಟ್ಟದಾದ ಅಂದಚೆಂದದ ಈ ವೈರ್‌ಲೆಸ್‌ ಪೋಡೊವನ್ನು ನೀವೆಲ್ಲ ಸುಲಭವಾಗಿ ನಿಮ್ಮೊಂದಿಗೆ ಎಲ್ಲಿಗೆ ಬೇಕಾದರೂ ಜೊತೆ ಜೊತೆಯಲ್ಲಿ ತೀರಾ ಸರಳವಾಗಿ ತೆಗೆದುಕೊಂಡು ಹೋಗಬಹುದು. ಏಕೆಂದರೆ ನೀವೂ ಎಲ್ಲಿ ಬೇಕಾದರೂ ನಿಂತು ಕುಂತು ಲುಕ್ ಕೊಟ್ಟರೆ ಸಾಕು ಅದರಷ್ಟಕ್ಕೆ ಅದೇ ಫೋಟೋ ತೆಗೆಯುವುದು! ಹೀಗಿದೆ ಪೋಡೊ.. ಮಹಿಮೆ?! ಕೃಷ್ಣಪ್ಪನವರ ಮಾತಿನ ಮೋಡಿನ ಹಾಗೇ ಮುತ್ತಿನ ಹಾರದಾ ಹಾಗೇ. ಮಾಣಿಕ್ಯದ ದೀಪ್ತಿಯಾ ಹಾಗೇ… ಅಲ್ಲಿದ್ದವರೆಲ್ಲ ಹೌದೌದು ಎಂದರು.

ಎಲ್ಲರ ಕೈಯಲ್ಲಿರುವ ಸೆಲ್ ಫೋನ್‌ಗಳ ದರಗಳಂತೇ ಇದೂ ಕೂಡಾ ಹೆಚ್ಚಿನ ದರವಿಲ್ಲ! ಹೆಚ್ಚಿನ ಉಪಯೋಗವಿದೆಯೆಂದೂ.. ಕೆ.ಕೃಷ್ಣಪ್ಪನವರು ವಿವರಿಸುತ್ತಾ ನಿಂತರು. ಹೊತ್ತು ಹೋಗಿದ್ದು ಗೊತ್ತೇ ಆಗಲಿಲ್ಲ. ಹೊಸ ಹೊಸ ವಿಚಾರ ಹೊಚ್ಚ ಹೊಸತು ಪೋಡೊ….

ಅಲ್ಲಿದ್ದವರೆಲ್ಲ ಹರ್ಷದಿ ಚಪ್ಪಾಳೆ ತಟ್ಟಿದರಲ್ಲದೆ, ಅವರನ್ನು ಸನ್ಮಾನಿಸಿದರು. ಅಲ್ಲಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...