Home / ಬಾಲ ಚಿಲುಮೆ / ಕಥೆ / ಹೆಚ್ಚು ಬುದ್ಧಿವಂತರು ಯಾರು?

ಹೆಚ್ಚು ಬುದ್ಧಿವಂತರು ಯಾರು?

ಬೆಂಗಳೂರೆಂಬ ಪಟ್ಟಣದಲ್ಲಿದ್ದ ರಾಜಕುಮಾರ ಬಡಿಗೇರ, ಜಯಪ್ಪ, ಶಂಕರ್‌ ಗುಡಿಮನಿ- ಮೂವರು ಸೇರಿ ತಮ್ಮಳ್ಳಿಗೆ ಮಕರ ಸಂಕ್ರಾಂತಿ ಹಬ್ಬಕ್ಕೆ ಕಾರಿನಲ್ಲಿ ತೆರಳಿದರು.

ಹಳ್ಳಿಯಲ್ಲಿ ಬಾಲ್ಯದ ಗೆಳೆಯ ಲಕ್ಷ್ಮಣ ಪಾತ್ರೋಟನೊಂದಿಗೆ ಹೊಲ, ಗದ್ದೆ, ತೋಟ, ಹಳ್ಳ, ಕೊಳ್ಳ, ಬಾವಿ ಸುತ್ತಲು ಹೋದರು.

ಅಲ್ಲೊಂದು ಹಳ್ಳದ ಪೊದೆಯಲ್ಲಿ ಅಸ್ಥಿಪಂಜರವೊಂದು ಬಿದ್ದಿತ್ತು. ಎಲ್ಲರೂ ಅದನ್ನು ನೋಡಿ ದಂಗುಬಡಿದು ಹೋದರು.

ಅದಕ್ಕೆ ಲಕ್ಷ್ಮಣ ಪಾತ್ರೋಟ್ ಹೇಳಿದ ‘ಗೆಳೆಯರೆ… ಆ ಆಸ್ಥಿಪಂಜರದ ಗೊಡವೆ ನಮಗೇಕೆ? ನಾಳೆ ಸಂಕ್ರಾಂತಿ ಹಬ್ಬವಿದೆ. ಸ್ನಾನ, ಪೂಜೆ, ಕಬ್ಬು, ಸಿಹಿಗೆಣಸು, ಅವರೆಕಾಯಿ, ನೆಲಗಡಲೆ, ಹೂವುಹಣ್ಣು, ಬೂದುಗುಂಬಳಕಾಯಿ ಇತ್ಯಾದಿ ಹೊತ್ತು ಹೋಗುವ, ಅದನ್ನು ಅಲ್ಲೇ ಬಿಸಾಕಿ ಅದರ ಸುದ್ದಿಗದ್ದಲ ನಮಗೇಕೆ?’ ಎಂದು ಕೈಮುಗಿದು ನಿಂತ.

ರಾಜಕುಮಾರ್‌ ಬಡಿಗೇರ ಆ ಆಸ್ಥಿಪಂಜರವನ್ನೆಲ್ಲ ಫೂನರ್‌ ನಿರ್ಮಾಣ ಮಾಡಿ ಸಂಭ್ರಮಿಸಿದ.

‘ನಾನೇನು ಕಡಿಮೆನೇ…’ ಎಂದು ಶಂಕರ್ ಗುಡಿಮನಿ ಅದಕ್ಕೆ ರಕ್ತ, ಮಾಂಸ, ಆಕಾರ ನೀಡಿಯೇ ಬಿಟ್ಟ!

ಆಹಾ ಅದಕ್ಕೆ ಉಸಿರು ಜೀವ ತುಂಬಿದ ಜಯಪ್ಪ!

ಅಬ್ಬಾ! ಪಿಶಾಚಿಯೊಂದು ಭೂಮಿ ಆಕಾಶದೆತ್ತರ ಎದ್ದು ನಿಂತು- ‘ನನ್ನ ಬದುಕಿಸಿದವರ್‍ಯಾರು? ಮೊದಲು ಅವರನ್ನು ನುಂಗಿ ಬಿಡುವೆ’ ಎಂದು ಮೂವರನ್ನು ನುಂಗಿ ನೀರು ಕುಡಿಯಿತು.

ಇತ್ತ ಪರಿಣಾಮದ ಅರಿವು ಊಹಿಸಿ ಆಗಲೆ ಊರ ಕಡೆ ಓಟ ಕಿತ್ತಿದ್ದ… ಲಕ್ಷ್ಮಣ ಪಾತ್ರೋಟ ಮಹಾ ಬುದ್ಧಿವಂತನೆನಿಸಿದ್ದ!

ಹಳ್ಳಿ ಮನುಷ್ಯ… ಓಡೋಡಿ ಮನೆ ಸೇರಿದ್ದ!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...