Home / ಬಾಲ ಚಿಲುಮೆ / ಕಥೆ / ಕಹಿಸಿಹಿ ಕತೆ

ಕಹಿಸಿಹಿ ಕತೆ

ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವಂತೆ ವಿಜಯನಗರ ಸಾಮ್ರಾಜ್ಯ ಆರಂಭದಲ್ಲೇ ಉತ್ತರ ಭಾರತದ ಕಳಿಂಗ ದೇಶದವರೆಗೂ ಸಿದ್ಧಿ ಪ್ರಸಿದ್ಧಿ ಹೊಂದಿತ್ತು!

ವಿಜಯನಗರ ಸಾಮ್ರಾಜ್ಯವನ್ನು ತೌಳವ ನರಸನಾಯಕ ಅಳುತ್ತಿದ್ದ. “ಅಧಾರ್ಮಿಕರಾದ ಮಹಾರಾಜರು ಎಂದೂ ಶ್ರೇಯಸ್ಸು ಹೊಂದಲಾರರು” ಎಂಬ ಒಂದೇ ಒಂದು ಮೂಲ ಮಂತ್ರದಿಂದ ಇಡೀ ಭರತ ಖಂಡದೆಲ್ಲಲ್ಲ ವಿಜಯನಗರ ಸಾಮ್ರಾಜ್ಯ ಪ್ರಭುದ್ಧ ಮಾನಕ್ಕೆ ಬಂತು.

ಇತ್ತ- ಕಳಿಂಗ ದೇಶದ ಬಸವಭಟ್ಟನೆಂಬ ಉದ್ದಾಮ ಪಂಡಿತರತ್ನ ಆಸ್ಥಾನದ ಪಂಡಿತ ಪಾಮರ ಉತ್ತರ ಭಾರತದಿಂದ ದಕ್ಷಿಣ ಭಾರತದ ಕಡೆಗೆ ಬರೀ ವಾದವಿವಾದ ಮಾಡುತ್ತಾ ಪಾಂಡಿತ್ಯತನ ಪ್ರದರ್ಶಿಸುತ್ತಾ ಎಲ್ಲ ರಾಜ್ಯಗಳನ್ನು ಗೆಲ್ಲುತ್ತಾ ಮೀಸೆ ತಿರುವುತ್ತಾ ಹೊಗಳು ಭಟ್ಟರನ್ನು ಹಿಂದಿಟ್ಟುಕೊಂಡು ವಿಜಯನಗರ ಸಾಮ್ರಾಜ್ಯಕ್ಕೆ ಒಂದು ದಿನ ಎಡಗಾಲಿಟ್ಟು ವಾದ್ಯ ಮೇಳ, ಶಂಕು, ಜಾಗಟೆ, ತುತ್ತೂರಿ ಮೇಲು ಪಂಚಾಂಗವನ್ನು ಓದುತ್ತಾ ಮೆರವಣಿಗೆಯಲ್ಲಿ ಜಯಘೋಷ ಮೊಳಗಿಸುತ್ತಾ ಬಸವಭಟ್ಟ ವಿಜಯನಗರ ಸಾಮ್ರಾಜ್ಯವನ್ನು ಪ್ರವೇಶಿಸಿದ.

ಇಡೀ ವಿಜಯನಗರ ಸಾಮ್ರಾಜ್ಯ ಅಲ್ಲಾಡಿ ಸದ್ದಡಗಿತು! ಉತ್ತರದಿಂದ ದಕ್ಷಿಣದವರೆಗೆ ಬಸವ ಭಟ್ಟನನ್ನು ಗೆದ್ದ ರಾಜ ಮಹಾರಾಜರಿಲ್ಲ! ಹೋಗಲಿ ಉದ್ದಾಮ ಪಂಡಿತ ಪಾಮರರಿಲ್ಲ. ಶರಣಾಗತಿಯೊಂದೇ ಈಗಿರುವ ಮಾರ್ಗವೆಂದು ರಾಜಾಧಿರಾಜ ತೌಳವ ನರಸನಾಯಕ ತಲೆಗೆ ಕೈಹೊತ್ತು ಕುಳಿತೇ ಬಿಟ್ಟ!

ಒಂದು ದಿನ- ಬಸವಭಟ್ಟರಿಗೂ ವ್ಯಾಸರಾಜರಿಗೂ ವಾದ ವಿವಾದ ಶುರುವಾಯಿತು. ಎರಡು ಹಗಲು ಮೂರು ರಾತ್ರಿ ತರ್ಕಬದ್ಧ ವಾದ ಸರಣಿಯು ಸಾಗಿತು! ವೇದವೇದಾಂತ ತರಂಗಗಳಲ್ಲಿ ಪರಿಪೂರ್ಣರಾಗಿದ್ದ ವ್ಯಾಸರಾಜರು ತಮ್ಮ ತತ್ವಸಿದ್ಧಾಂತ ಪ್ರಮಾಣ ಬದ್ಧವಾದ ವಾದವಿವಾದಗಳಲ್ಲಿ ಸಂಪೂರ್ಣವಾಗಿ ಗೆದ್ದರು! ಬಸವಭಟ್ಟರು ಸೋತು ಶರಣಾದರು.

ಅದಕ್ಕೆ ಪ್ರತಿಯಾಗಿ ತೌಳವ ನರಸನಾಯಕ ಬಸವಭಟ್ಟರನ್ನು ಅವರಿಂದೆ ಬಂದಿದ್ದ ಹೊಗಳುಭಟ್ಟರನ್ನು ಸನ್ಮಾನಿಸಿದರು.

ಸನ್ಮಾನ ಸ್ವೀಕರಿಸಿ ಕಣ್ಣೀರಿಟ್ಟು- ‘ಅಯ್ಯೋ ನಮ್ಮನ್ನು ಮನ್ನಿಸಿ, ನಮ್ಮ ಕಳಿಂಗ ದೇಶದ ರಾಜನಿಂದ ಪ್ರೇರೇಪಿತನಾಗಿ ನಮ್ಮ ಶಿಷ್ಯರೊಡಗೂಡಿ ನಿಮ್ಮನ್ನು ನಿಮ್ಮ ಸಾಮ್ರಾಜ್ಯವನ್ನು ಅವಮಾನಿಸಿ ಹೀಯಾಳಿಸಬೇಕೆಂದು ದುಷ್ಟಾಲೋಚನೆ ಇಟ್ಟುಗೊಂಡು ಬಂದವನನ್ನು ಸನ್ಮಾನಿಸಿದ್ದು ಕಣ್ಣು ತೆರೆಸಿದೆ. ನಮ್ಮನ್ನೆಲ್ಲ ಮನ್ನಿಸಿ’ ಎಂದು ಶ್ರೀಪಂಚಿಯ ಲಿಂಗವನ್ನು ಪ್ರೀತಿಪೂರ್ವಕವಾಗಿ ಬಸವಭಟ್ಟ ನೀಡಿದ.

ಅದಕ್ಕೆ ನರಸನಾಯಕ ‘ವಿಜಯನಗರ ಸಾಮ್ರಾಜ್ಯದಲ್ಲಾದ ಕಹಿಯನ್ನು ಇಲ್ಲೇ ಬಿಟ್ಟು ಸನ್ಮಾನವೆಂಬ ಸಿಹಿಯೊಂದಿಗೆ ಕಳಿಂಗ ದೇಶವನ್ನು ತಲುಪಿ’ ಎಂದು ಎಲ್ಲರೆದುರಿಗೆ ಬೆನ್ನುತಟ್ಟಿ ಕಳಿಸಿಕೊಟ್ಟ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...