Home / ಬಾಲ ಚಿಲುಮೆ / ಕಥೆ / ಕಹಿಸಿಹಿ ಕತೆ

ಕಹಿಸಿಹಿ ಕತೆ

ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವಂತೆ ವಿಜಯನಗರ ಸಾಮ್ರಾಜ್ಯ ಆರಂಭದಲ್ಲೇ ಉತ್ತರ ಭಾರತದ ಕಳಿಂಗ ದೇಶದವರೆಗೂ ಸಿದ್ಧಿ ಪ್ರಸಿದ್ಧಿ ಹೊಂದಿತ್ತು!

ವಿಜಯನಗರ ಸಾಮ್ರಾಜ್ಯವನ್ನು ತೌಳವ ನರಸನಾಯಕ ಅಳುತ್ತಿದ್ದ. “ಅಧಾರ್ಮಿಕರಾದ ಮಹಾರಾಜರು ಎಂದೂ ಶ್ರೇಯಸ್ಸು ಹೊಂದಲಾರರು” ಎಂಬ ಒಂದೇ ಒಂದು ಮೂಲ ಮಂತ್ರದಿಂದ ಇಡೀ ಭರತ ಖಂಡದೆಲ್ಲಲ್ಲ ವಿಜಯನಗರ ಸಾಮ್ರಾಜ್ಯ ಪ್ರಭುದ್ಧ ಮಾನಕ್ಕೆ ಬಂತು.

ಇತ್ತ- ಕಳಿಂಗ ದೇಶದ ಬಸವಭಟ್ಟನೆಂಬ ಉದ್ದಾಮ ಪಂಡಿತರತ್ನ ಆಸ್ಥಾನದ ಪಂಡಿತ ಪಾಮರ ಉತ್ತರ ಭಾರತದಿಂದ ದಕ್ಷಿಣ ಭಾರತದ ಕಡೆಗೆ ಬರೀ ವಾದವಿವಾದ ಮಾಡುತ್ತಾ ಪಾಂಡಿತ್ಯತನ ಪ್ರದರ್ಶಿಸುತ್ತಾ ಎಲ್ಲ ರಾಜ್ಯಗಳನ್ನು ಗೆಲ್ಲುತ್ತಾ ಮೀಸೆ ತಿರುವುತ್ತಾ ಹೊಗಳು ಭಟ್ಟರನ್ನು ಹಿಂದಿಟ್ಟುಕೊಂಡು ವಿಜಯನಗರ ಸಾಮ್ರಾಜ್ಯಕ್ಕೆ ಒಂದು ದಿನ ಎಡಗಾಲಿಟ್ಟು ವಾದ್ಯ ಮೇಳ, ಶಂಕು, ಜಾಗಟೆ, ತುತ್ತೂರಿ ಮೇಲು ಪಂಚಾಂಗವನ್ನು ಓದುತ್ತಾ ಮೆರವಣಿಗೆಯಲ್ಲಿ ಜಯಘೋಷ ಮೊಳಗಿಸುತ್ತಾ ಬಸವಭಟ್ಟ ವಿಜಯನಗರ ಸಾಮ್ರಾಜ್ಯವನ್ನು ಪ್ರವೇಶಿಸಿದ.

ಇಡೀ ವಿಜಯನಗರ ಸಾಮ್ರಾಜ್ಯ ಅಲ್ಲಾಡಿ ಸದ್ದಡಗಿತು! ಉತ್ತರದಿಂದ ದಕ್ಷಿಣದವರೆಗೆ ಬಸವ ಭಟ್ಟನನ್ನು ಗೆದ್ದ ರಾಜ ಮಹಾರಾಜರಿಲ್ಲ! ಹೋಗಲಿ ಉದ್ದಾಮ ಪಂಡಿತ ಪಾಮರರಿಲ್ಲ. ಶರಣಾಗತಿಯೊಂದೇ ಈಗಿರುವ ಮಾರ್ಗವೆಂದು ರಾಜಾಧಿರಾಜ ತೌಳವ ನರಸನಾಯಕ ತಲೆಗೆ ಕೈಹೊತ್ತು ಕುಳಿತೇ ಬಿಟ್ಟ!

ಒಂದು ದಿನ- ಬಸವಭಟ್ಟರಿಗೂ ವ್ಯಾಸರಾಜರಿಗೂ ವಾದ ವಿವಾದ ಶುರುವಾಯಿತು. ಎರಡು ಹಗಲು ಮೂರು ರಾತ್ರಿ ತರ್ಕಬದ್ಧ ವಾದ ಸರಣಿಯು ಸಾಗಿತು! ವೇದವೇದಾಂತ ತರಂಗಗಳಲ್ಲಿ ಪರಿಪೂರ್ಣರಾಗಿದ್ದ ವ್ಯಾಸರಾಜರು ತಮ್ಮ ತತ್ವಸಿದ್ಧಾಂತ ಪ್ರಮಾಣ ಬದ್ಧವಾದ ವಾದವಿವಾದಗಳಲ್ಲಿ ಸಂಪೂರ್ಣವಾಗಿ ಗೆದ್ದರು! ಬಸವಭಟ್ಟರು ಸೋತು ಶರಣಾದರು.

ಅದಕ್ಕೆ ಪ್ರತಿಯಾಗಿ ತೌಳವ ನರಸನಾಯಕ ಬಸವಭಟ್ಟರನ್ನು ಅವರಿಂದೆ ಬಂದಿದ್ದ ಹೊಗಳುಭಟ್ಟರನ್ನು ಸನ್ಮಾನಿಸಿದರು.

ಸನ್ಮಾನ ಸ್ವೀಕರಿಸಿ ಕಣ್ಣೀರಿಟ್ಟು- ‘ಅಯ್ಯೋ ನಮ್ಮನ್ನು ಮನ್ನಿಸಿ, ನಮ್ಮ ಕಳಿಂಗ ದೇಶದ ರಾಜನಿಂದ ಪ್ರೇರೇಪಿತನಾಗಿ ನಮ್ಮ ಶಿಷ್ಯರೊಡಗೂಡಿ ನಿಮ್ಮನ್ನು ನಿಮ್ಮ ಸಾಮ್ರಾಜ್ಯವನ್ನು ಅವಮಾನಿಸಿ ಹೀಯಾಳಿಸಬೇಕೆಂದು ದುಷ್ಟಾಲೋಚನೆ ಇಟ್ಟುಗೊಂಡು ಬಂದವನನ್ನು ಸನ್ಮಾನಿಸಿದ್ದು ಕಣ್ಣು ತೆರೆಸಿದೆ. ನಮ್ಮನ್ನೆಲ್ಲ ಮನ್ನಿಸಿ’ ಎಂದು ಶ್ರೀಪಂಚಿಯ ಲಿಂಗವನ್ನು ಪ್ರೀತಿಪೂರ್ವಕವಾಗಿ ಬಸವಭಟ್ಟ ನೀಡಿದ.

ಅದಕ್ಕೆ ನರಸನಾಯಕ ‘ವಿಜಯನಗರ ಸಾಮ್ರಾಜ್ಯದಲ್ಲಾದ ಕಹಿಯನ್ನು ಇಲ್ಲೇ ಬಿಟ್ಟು ಸನ್ಮಾನವೆಂಬ ಸಿಹಿಯೊಂದಿಗೆ ಕಳಿಂಗ ದೇಶವನ್ನು ತಲುಪಿ’ ಎಂದು ಎಲ್ಲರೆದುರಿಗೆ ಬೆನ್ನುತಟ್ಟಿ ಕಳಿಸಿಕೊಟ್ಟ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...