Home / ಲೇಖನ / ಇತರೆ / ವಚನ ವಿಚಾರ – ಮನಸೇ ಇಲ್ಲ, ಕನಸಿನ್ನೆಲ್ಲಿ

ವಚನ ವಿಚಾರ – ಮನಸೇ ಇಲ್ಲ, ಕನಸಿನ್ನೆಲ್ಲಿ

ಅಗಲಿದ ನಲ್ಲನ ಕನಸಿನಲಪ್ಪಿ ಸುಖಿಯಾದಿರವ್ವಾ
ಕಂಡ ಕನಸು ದಿಟವಾದಡೆ ಅವ ನಮ್ಮ ನಲ್ಲನವ್ವಾ
ಮನಸುಳ್ಳವರು ನೀವು ಪುಣ್ಯಗೈದಿರವ್ವಾ
ಮಹಾಲಿಂಗ ಗಜೇಶ್ವರನನಗಲಿದಡೆ
ನಿದ್ರೆಯೆಮಗಿಲ್ಲ
ಕನಸಿನ್ನೆಲ್ಲಿ ಬಹುದವ್ವಾ

[ದಿಟವಾದಡೆ-ನಿಜವಾದರೆ]

ಉರಿಲಿಂಗದೇವನ ವಚನ. ತನ್ನನ್ನು ಹೆಣ್ಣು ಎಂದು ಭಾವಿಸಿಕೊಂಡು ಹೇಳಿರುವ ವಚನ.

ನೀವು ಪುಣ್ಯವಂತರು. ನಲ್ಲ ಅಗಲಿದರೆ ಅವನ ಕನಸು ಕಂಡು ಸುಖಿಯಾಗುತ್ತೀರಿ. ಕನಸು ದಿಟವಾದರೆ ಮಾತ್ರ ನನ್ನ ನಲ್ಲ ನಿಜ. ನೀವು ಪುಣ್ಯವಂತರು. ಯಾಕೆಂದರೆ ನಿಮ್ಮ ಮನಸ್ಸು ನಿಮ್ಮ ಬಳಿ ಇದೆ, ಇಲ್ಲದ ನಲ್ಲನ ಕನಸು ತೋರುತ್ತದೆ. ಮನಸ್ಸನ್ನು ಮಹಾಲಿಂಗ ಗಜೇಶ್ವರನಿಗೆ ಕೊಟ್ಟಿರುವುದರಿಂದ ನನಗೆ ಮನಸ್ಸೂ ಇಲ್ಲ, ಆದ್ದರಿಂದಲೇ ಕನಸೂ ಇಲ್ಲ.

ಮನಸ್ಸು ಕೊಟ್ಟೆ. ಅವನು ಸಿಗಲಿಲ್ಲ. ಅವನೊಡನೆಯೇ ನನ್ನ ಮನಸೂ ಕನಸೂ ಹೋಗಿಬಿಟ್ಟಿವೆ ಎಂಬುದು ಕೇವಲ ಚೆಲುವಾದ ಮಾತುಗಳು ಮಾತ್ರವಲ್ಲ. ಅನುಭವದ ಬಗ್ಗೆ ಮಾತನಾಡಿಕೊಳ್ಳುವುದರ ಸುಳ್ಳುತನವನ್ನು ಕುರಿತದ್ದು. ಮತ್ತೂ ಮನಸು, ಕನಸು ಎರಡೂ ಇಲ್ಲವಾದ ತಹತಹ, ತಳಮಳವನ್ನು ಕುರಿತದ್ದು.

ಕೇವಲ ಅಕ್ಕ ಮಾತ್ರವಲ್ಲ, ಅನೇಕ ವಚನಕಾರರು ತಮ್ಮನ್ನು ಹೆಣ್ಣು ಎಂದು ಭಾವಿಸಿ ತಮ್ಮ ಮತ್ತು ದೇವರ ಸಂಬಂಧ ಕುರಿತು ಹೇಳಿಕೊಂಡಿದ್ದಾರೆ. ಭಕ್ತಿಯ ಹೆಣ್ಣು ಮುಖ ಅರಿಯಲು ಹೆಣ್ಣೆ ಯಾಕಾಗಬೇಕು, ಹೆಣ್ಣು ಮನಸು ಸಾಕು!
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...