Home / ಲೇಖನ / ಇತರೆ / ವಚನ ವಿಚಾರ – ಮನಸೇ ಇಲ್ಲ, ಕನಸಿನ್ನೆಲ್ಲಿ

ವಚನ ವಿಚಾರ – ಮನಸೇ ಇಲ್ಲ, ಕನಸಿನ್ನೆಲ್ಲಿ

ಅಗಲಿದ ನಲ್ಲನ ಕನಸಿನಲಪ್ಪಿ ಸುಖಿಯಾದಿರವ್ವಾ
ಕಂಡ ಕನಸು ದಿಟವಾದಡೆ ಅವ ನಮ್ಮ ನಲ್ಲನವ್ವಾ
ಮನಸುಳ್ಳವರು ನೀವು ಪುಣ್ಯಗೈದಿರವ್ವಾ
ಮಹಾಲಿಂಗ ಗಜೇಶ್ವರನನಗಲಿದಡೆ
ನಿದ್ರೆಯೆಮಗಿಲ್ಲ
ಕನಸಿನ್ನೆಲ್ಲಿ ಬಹುದವ್ವಾ

[ದಿಟವಾದಡೆ-ನಿಜವಾದರೆ]

ಉರಿಲಿಂಗದೇವನ ವಚನ. ತನ್ನನ್ನು ಹೆಣ್ಣು ಎಂದು ಭಾವಿಸಿಕೊಂಡು ಹೇಳಿರುವ ವಚನ.

ನೀವು ಪುಣ್ಯವಂತರು. ನಲ್ಲ ಅಗಲಿದರೆ ಅವನ ಕನಸು ಕಂಡು ಸುಖಿಯಾಗುತ್ತೀರಿ. ಕನಸು ದಿಟವಾದರೆ ಮಾತ್ರ ನನ್ನ ನಲ್ಲ ನಿಜ. ನೀವು ಪುಣ್ಯವಂತರು. ಯಾಕೆಂದರೆ ನಿಮ್ಮ ಮನಸ್ಸು ನಿಮ್ಮ ಬಳಿ ಇದೆ, ಇಲ್ಲದ ನಲ್ಲನ ಕನಸು ತೋರುತ್ತದೆ. ಮನಸ್ಸನ್ನು ಮಹಾಲಿಂಗ ಗಜೇಶ್ವರನಿಗೆ ಕೊಟ್ಟಿರುವುದರಿಂದ ನನಗೆ ಮನಸ್ಸೂ ಇಲ್ಲ, ಆದ್ದರಿಂದಲೇ ಕನಸೂ ಇಲ್ಲ.

ಮನಸ್ಸು ಕೊಟ್ಟೆ. ಅವನು ಸಿಗಲಿಲ್ಲ. ಅವನೊಡನೆಯೇ ನನ್ನ ಮನಸೂ ಕನಸೂ ಹೋಗಿಬಿಟ್ಟಿವೆ ಎಂಬುದು ಕೇವಲ ಚೆಲುವಾದ ಮಾತುಗಳು ಮಾತ್ರವಲ್ಲ. ಅನುಭವದ ಬಗ್ಗೆ ಮಾತನಾಡಿಕೊಳ್ಳುವುದರ ಸುಳ್ಳುತನವನ್ನು ಕುರಿತದ್ದು. ಮತ್ತೂ ಮನಸು, ಕನಸು ಎರಡೂ ಇಲ್ಲವಾದ ತಹತಹ, ತಳಮಳವನ್ನು ಕುರಿತದ್ದು.

ಕೇವಲ ಅಕ್ಕ ಮಾತ್ರವಲ್ಲ, ಅನೇಕ ವಚನಕಾರರು ತಮ್ಮನ್ನು ಹೆಣ್ಣು ಎಂದು ಭಾವಿಸಿ ತಮ್ಮ ಮತ್ತು ದೇವರ ಸಂಬಂಧ ಕುರಿತು ಹೇಳಿಕೊಂಡಿದ್ದಾರೆ. ಭಕ್ತಿಯ ಹೆಣ್ಣು ಮುಖ ಅರಿಯಲು ಹೆಣ್ಣೆ ಯಾಕಾಗಬೇಕು, ಹೆಣ್ಣು ಮನಸು ಸಾಕು!
*****

Tagged:

Leave a Reply

Your email address will not be published. Required fields are marked *

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...