Home / ಲೇಖನ / ಇತರೆ / ವಚನ ವಿಚಾರ – ಅತಿಮಥನ

ವಚನ ವಿಚಾರ – ಅತಿಮಥನ

ಅತಿಮಥನವೆಂಬ ಯೋಗವೆನ್ನ ಗತಿಗೆಡಿಸಿತ್ತಯ್ಯ
ದಿತಿಗೆಟ್ಟೆ ನಾನು ಅದರಿಂದ
ಅತಿಶಯದ ತಾತ್ಪರ್ಯ ಗುರುಭಕ್ತಿಯನರಿಯದೆ
ದಿತಿಗೆಟ್ಟೆನಯ್ಯ ತಾತ್ಪರ್‍ಯವನರಿಯದೆ
ತವಕಿಸುವ ಮನವನು ನಿಮ್ಮ ಕಡೆಗೆ ತೆಗೆದುಕೊಂಡು
ಅತಿಶಯದ ತಾತ್ಪರ್ಯ ಗುರುಭಕ್ತಿಯ ಈಯಯ್ಯಾ
ಕಪಿಲಸಿದ್ಧಮಲ್ಲಿಕಾರ್‍ಜುನಾ

[ಅತಿಮಥನ- ಅತಿಯಾದ ವಿಶ್ಲೇಷಣೆ, ದಿತಿಗೆಟ್ಟೆ-ಧೃತಿಗೆಟ್ಟೆ, ಗತಿ-ಚಲನೆ, ಬಾಳು, ಭವಿಷ್ಯ]

ಸಿದ್ಧರಾಮನ ವಚನ. ಇದು ಅತಿಯಾದ ವಿಶ್ಲೇಷಣೆಯ ಅಪಾಯವನ್ನು ಕುರಿತು ಹೇಳುವಂತಿದೆ. ಅತಿಮಥನದ ಪ್ರವೃತ್ತಿಯು ಮನಸ್ಸಿನ ನೆಮ್ಮದಿಯನ್ನು ಕೆಡಿಸುತ್ತದೆ. ಮಥನ ಅನ್ನುವುದು ಅಗತ್ಯ; ಆದರೂ ಅದು ಅತಿ ಆದಾಗ ತೊಂದರೆಕೊಡುವುದು ಖಚಿತ. ಸಿದ್ಧರಾಮನಂತೆಯೇ ಅಲ್ಲಮ ಕೂಡ ವಿಚಾರವೆಂಬುದು ಸಂದೇಹಕ್ಕೆ ಒಳಗು ಎನ್ನುತ್ತಾನೆ.

ಅತಿಯಾದ ಮಥನ ನನ್ನ ಗತಿಯನ್ನು ಕೆಡಿಸಿತ್ತು. ಆದ್ದರಿಂದಲೇ ಅತಿಶಯದ, ವಿಶೇಷವಾದ, ಆಶ್ಚರ್ಯಕರವಾದ, ಬಲು ನೆಮ್ಮದಿಯನ್ನು ತರುವ ಗುರು ಭಕ್ತಿಯನ್ನು ಅರಿಯದೆ ಹೋದೆ. ಗುರು ಭಕ್ತಿ ಅನ್ನುವುದನ್ನು ದೊಡ್ಡದಾದುದರ ಬಗ್ಗೆ ಇರುವ ವಿನಯವೆಂದೂ ಅರ್ಥಮಾಡಿಕೊಳ್ಳಬಹುದು. ಗುರುವಿನ ಬಗ್ಗೆ ಭಕ್ತಿ ಇಲ್ಲದೆ, ಅತಿ ಮಥನದಲ್ಲಿ ತೊಡಗಿ, ಗತಿಗೆಟ್ಟ ನನ್ನ ಮನಸ್ಸನ್ನು ದೇವರು ತನ್ನತ್ತ ತಿರುಗಿಸಿಕೊಂಡು ಎಲ್ಲ ಅರ್ಥದ ಸಾರಾಂಶರೂಪವಾಗಿರುವ ಗುರುಭಕ್ತಿಯನ್ನು ಕೊಡಲಿ ಎಂದು ಪ್ರಾರ್ಥಿಸುತ್ತಾನೆ ಸಿದ್ಧರಾಮ.

ದೇವರು ದೊಡ್ಡವನೇ ಇರಬಹುದು, ಆದರೆ ಕಣ್ಣಿಗೆ ಕಾಣುವ ‘ದೊಡ್ಡ’ ಸಂಗತಿಗಳ ಬಗ್ಗೆ ವಿನಯ, ಭಕ್ತಿ ಇರದಿದ್ದರೆ ನಿಜವಾಗಿ ದೊಡ್ಡವನಾದ ದೇವರು ಸಿಕ್ಕಲಾರ. ಅತಿಮಥನ ಎಂದೂ ನಿಲುಗಡೆಗೆ ಬಾರದು. ಎಲ್ಲ ಮಥನದ ಉದ್ದೇಶವೂ ಒಂದು ನಿರ್ಣಯವನ್ನು ತಲುಪುವುದೇ ತಾನೇ? ಹಾಗೆ ನಿಜವಾದ ತಾತ್ಪರ್ಯವೆಂದರೆ ಗುರುವಿನ ಕುರಿತ ಭಕ್ತಿ, ಅದು ಮಥನದಿಂದ ಅಲ್ಲ, ವಿಶ್ವಾಸದಿಂದ ಮೂಡುವುದು. ಅದು ಬೇಕು ಅನ್ನುತ್ತಾನೆ ಸಿದ್ಧರಾಮ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...