Home / ಲೇಖನ / ಇತರೆ / ವಚನ ವಿಚಾರ – ಅತಿಮಥನ

ವಚನ ವಿಚಾರ – ಅತಿಮಥನ

ಅತಿಮಥನವೆಂಬ ಯೋಗವೆನ್ನ ಗತಿಗೆಡಿಸಿತ್ತಯ್ಯ
ದಿತಿಗೆಟ್ಟೆ ನಾನು ಅದರಿಂದ
ಅತಿಶಯದ ತಾತ್ಪರ್ಯ ಗುರುಭಕ್ತಿಯನರಿಯದೆ
ದಿತಿಗೆಟ್ಟೆನಯ್ಯ ತಾತ್ಪರ್‍ಯವನರಿಯದೆ
ತವಕಿಸುವ ಮನವನು ನಿಮ್ಮ ಕಡೆಗೆ ತೆಗೆದುಕೊಂಡು
ಅತಿಶಯದ ತಾತ್ಪರ್ಯ ಗುರುಭಕ್ತಿಯ ಈಯಯ್ಯಾ
ಕಪಿಲಸಿದ್ಧಮಲ್ಲಿಕಾರ್‍ಜುನಾ

[ಅತಿಮಥನ- ಅತಿಯಾದ ವಿಶ್ಲೇಷಣೆ, ದಿತಿಗೆಟ್ಟೆ-ಧೃತಿಗೆಟ್ಟೆ, ಗತಿ-ಚಲನೆ, ಬಾಳು, ಭವಿಷ್ಯ]

ಸಿದ್ಧರಾಮನ ವಚನ. ಇದು ಅತಿಯಾದ ವಿಶ್ಲೇಷಣೆಯ ಅಪಾಯವನ್ನು ಕುರಿತು ಹೇಳುವಂತಿದೆ. ಅತಿಮಥನದ ಪ್ರವೃತ್ತಿಯು ಮನಸ್ಸಿನ ನೆಮ್ಮದಿಯನ್ನು ಕೆಡಿಸುತ್ತದೆ. ಮಥನ ಅನ್ನುವುದು ಅಗತ್ಯ; ಆದರೂ ಅದು ಅತಿ ಆದಾಗ ತೊಂದರೆಕೊಡುವುದು ಖಚಿತ. ಸಿದ್ಧರಾಮನಂತೆಯೇ ಅಲ್ಲಮ ಕೂಡ ವಿಚಾರವೆಂಬುದು ಸಂದೇಹಕ್ಕೆ ಒಳಗು ಎನ್ನುತ್ತಾನೆ.

ಅತಿಯಾದ ಮಥನ ನನ್ನ ಗತಿಯನ್ನು ಕೆಡಿಸಿತ್ತು. ಆದ್ದರಿಂದಲೇ ಅತಿಶಯದ, ವಿಶೇಷವಾದ, ಆಶ್ಚರ್ಯಕರವಾದ, ಬಲು ನೆಮ್ಮದಿಯನ್ನು ತರುವ ಗುರು ಭಕ್ತಿಯನ್ನು ಅರಿಯದೆ ಹೋದೆ. ಗುರು ಭಕ್ತಿ ಅನ್ನುವುದನ್ನು ದೊಡ್ಡದಾದುದರ ಬಗ್ಗೆ ಇರುವ ವಿನಯವೆಂದೂ ಅರ್ಥಮಾಡಿಕೊಳ್ಳಬಹುದು. ಗುರುವಿನ ಬಗ್ಗೆ ಭಕ್ತಿ ಇಲ್ಲದೆ, ಅತಿ ಮಥನದಲ್ಲಿ ತೊಡಗಿ, ಗತಿಗೆಟ್ಟ ನನ್ನ ಮನಸ್ಸನ್ನು ದೇವರು ತನ್ನತ್ತ ತಿರುಗಿಸಿಕೊಂಡು ಎಲ್ಲ ಅರ್ಥದ ಸಾರಾಂಶರೂಪವಾಗಿರುವ ಗುರುಭಕ್ತಿಯನ್ನು ಕೊಡಲಿ ಎಂದು ಪ್ರಾರ್ಥಿಸುತ್ತಾನೆ ಸಿದ್ಧರಾಮ.

ದೇವರು ದೊಡ್ಡವನೇ ಇರಬಹುದು, ಆದರೆ ಕಣ್ಣಿಗೆ ಕಾಣುವ ‘ದೊಡ್ಡ’ ಸಂಗತಿಗಳ ಬಗ್ಗೆ ವಿನಯ, ಭಕ್ತಿ ಇರದಿದ್ದರೆ ನಿಜವಾಗಿ ದೊಡ್ಡವನಾದ ದೇವರು ಸಿಕ್ಕಲಾರ. ಅತಿಮಥನ ಎಂದೂ ನಿಲುಗಡೆಗೆ ಬಾರದು. ಎಲ್ಲ ಮಥನದ ಉದ್ದೇಶವೂ ಒಂದು ನಿರ್ಣಯವನ್ನು ತಲುಪುವುದೇ ತಾನೇ? ಹಾಗೆ ನಿಜವಾದ ತಾತ್ಪರ್ಯವೆಂದರೆ ಗುರುವಿನ ಕುರಿತ ಭಕ್ತಿ, ಅದು ಮಥನದಿಂದ ಅಲ್ಲ, ವಿಶ್ವಾಸದಿಂದ ಮೂಡುವುದು. ಅದು ಬೇಕು ಅನ್ನುತ್ತಾನೆ ಸಿದ್ಧರಾಮ.
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...