Home / ಲೇಖನ / ಇತರೆ / ವಚನ ವಿಚಾರ – ನೀರಿನಂಥ ಮನಸ್ಸು

ವಚನ ವಿಚಾರ – ನೀರಿನಂಥ ಮನಸ್ಸು

ಅನೇಕ ತೆರದ ಯೋನಿಮುಖಂಗಳ ಪೊಕ್ಕು
ನೀರ್‍ಗುಡಿಯಲೆಂದು ಪೋದಡೆ
ಸುಡು ಪೋಗೆಂದು ನೂಂಕಿತ್ತೆ ಜಲ
ಅದರಂತಿರಬೇಡಾ ಹಿರಿಯರ ಮನ
ಮನವಿಚ್ಛಂದವಾಗದೊಂದೆಯಂದದಲಿಪ್ಪಂತಪ್ಪಾ
ನಿಮ್ಮದೊಂದು ಸಮತಾಗುಣವನ್ನನೆಂದು ಪೊದ್ದಿರ್ಪುದು ಹೇಳಾ
ಕಪಿಲಸಿದ್ಧಮಲ್ಲಿಕಾರ್ಜುನಾ

[೫ನೆಯ ಸಾಲು: ಓದಿನ ಅನುಕೂಲಕ್ಕೆ ಹೀಗೆ ಬಿಡಿಸಿಕೊಳ್ಳಿ: ಮನ-ಇಚ್ಛಂದ-ಆಗದೆ-ಒಂದೆ-ಅಂದದಲಿ-ಇಪ್ಪಂತೆ-ಅಪ್ಪ-ಆ; ಪೊದ್ದಿರ್ಪುದು-ಹೊಂದಿರುವುದು]

ಸಿದ್ಧರಾಮನ ವಚನ.
ಹಿಂದಿನ ಜನ್ಮದಲ್ಲಿ ಏನೇ ಆಗಿರಲಿ, ಅಥವಾ ಮಾಡಬಾರದ ಕೆಲಸಗಳನ್ನೇ ಮಾಡಿರಲಿ, ಅಂಥವನು ನೀರು ಕುಡಿಯಲೆಂದು ಹೋದರೆ ‘ನೀನು ಅಯೋಗ್ಯ’ ಎಂದು ಅವನ ದಾಹವನ್ನು ತಣಿಸಲು ನಿರಾಕರಿಸುತ್ತದೆಯೇ ನೀರು? ಇಲ್ಲವಲ್ಲಾ. ನಿಜವಾದ ಹಿರಿಯರ ಮನ ಹಾಗೆ ಇರಬೇಕಲ್ಲವೇ? ಯಾವುದರ ಬಗ್ಗೆಯೂ ತಿರಸ್ಕಾರದ ಲವಲೇಶವೂ ಇಲ್ಲದಂತಿರುವುದೇ ನಿಜವಾದ ಹಿರಿತನ. ಮನಸ್ಸು ಇಚ್ಛಂದವಾಗದೆ (ಇಬ್ಬಾಗವಾಗು) ಒಂದೇ ಅಂದದಲ್ಲಿ ಇರುವಂಥ ನಿಮ್ಮ ಸಮತಾಗುಣವನ್ನು ನನ್ನ ಮನಸ್ಸು ಎಂದು ಹೊಂದೀತು ಎಂದು ಸಿದ್ಧರಾಮ ಕೇಳುತ್ತಾನೆ.

ದೇವರು ಎಂಬುದಿದ್ದರೆ ಅದು ಸಮತಾಗುಣವೇ. ಸಿದ್ಧರಾಮನ ದೃಷ್ಟಿಯಲ್ಲಿ ಏನನ್ನೂ ತಿರಸ್ಕರಿಸಿದ ಗುಣವೇ, ಯಾವ ಗುಣದಿಂದಲೂ ಮನಸ್ಸು ಇಚ್ಚಂದವಾಗದೇ ಇರುವುದೇ, ದೇವರ ಗುಣ, ಅಂಥ ಗುಣ ಬೇಕು ಅನ್ನುವುದು ಬಯಕೆ.

ನಿಸರ್ಗಕ್ಕೆ ಇಂಥ ಸಮತಾಗುಣವಿರುವುದರಿಂದಲೇ ನಾವು ಬದುಕಿದ್ದೇವೆ. ಕೇವಲ ‘ಒಳ್ಳೆ’ಯವರಿಗೆ ಮಾತ್ರವೇ ಮಳೆ ಸುರಿಯುವುದು, ಸೂರ್ಯ ಹೊಳೆಯುವುದು, ನದಿ ಹರಿಯುವುದು, ಮರ ಹಣ್ಣು ಕೊಡುವುದು ಎಂದಾಗಿದ್ದರೆ ಲೋಕದಲ್ಲಿ ನೂರಕ್ಕೆ ತೊಂಬತ್ತೊಂಬತ್ತು ಜನ ಬದುಕುವುದಕ್ಕೇ ಆಗುತ್ತಿರಲಿಲ್ಲವೇನೋ! ಸೇಡಿಲ್ಲದ, ಅವಜ್ಞೆ ಇಲ್ಲದ, ತಿರಸ್ಕಾರವಿಲ್ಲದ ಗುಣ ಎಂದು ಸಮತೆಯನ್ನು ವರ್ಣಿಸಿರುವುದು ಹೊಸತೆಂಬಂತಿದೆ.

ಛಂದ ಮತ್ತು ಅಂದ ಪದಗಳನ್ನು ಒಟ್ಟುಗೂಡಿಸಿರುವ ರೀತಿಯೂ ಗಮನಾರ್ಹ. ಛಂದ ಅನ್ನುವುದು ಛಂದಸ್ಸನ್ನೂ ಚಂದವನ್ನೂ ಒಟ್ಟಿಗೆ ಸೂಚಿಸೀತು.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್‍ ಚಂದ್ರ