Home / ಲೇಖನ / ಇತರೆ / ವಚನ ವಿಚಾರ – ನೀರಿನಂಥ ಮನಸ್ಸು

ವಚನ ವಿಚಾರ – ನೀರಿನಂಥ ಮನಸ್ಸು

ಅನೇಕ ತೆರದ ಯೋನಿಮುಖಂಗಳ ಪೊಕ್ಕು
ನೀರ್‍ಗುಡಿಯಲೆಂದು ಪೋದಡೆ
ಸುಡು ಪೋಗೆಂದು ನೂಂಕಿತ್ತೆ ಜಲ
ಅದರಂತಿರಬೇಡಾ ಹಿರಿಯರ ಮನ
ಮನವಿಚ್ಛಂದವಾಗದೊಂದೆಯಂದದಲಿಪ್ಪಂತಪ್ಪಾ
ನಿಮ್ಮದೊಂದು ಸಮತಾಗುಣವನ್ನನೆಂದು ಪೊದ್ದಿರ್ಪುದು ಹೇಳಾ
ಕಪಿಲಸಿದ್ಧಮಲ್ಲಿಕಾರ್ಜುನಾ

[೫ನೆಯ ಸಾಲು: ಓದಿನ ಅನುಕೂಲಕ್ಕೆ ಹೀಗೆ ಬಿಡಿಸಿಕೊಳ್ಳಿ: ಮನ-ಇಚ್ಛಂದ-ಆಗದೆ-ಒಂದೆ-ಅಂದದಲಿ-ಇಪ್ಪಂತೆ-ಅಪ್ಪ-ಆ; ಪೊದ್ದಿರ್ಪುದು-ಹೊಂದಿರುವುದು]

ಸಿದ್ಧರಾಮನ ವಚನ.
ಹಿಂದಿನ ಜನ್ಮದಲ್ಲಿ ಏನೇ ಆಗಿರಲಿ, ಅಥವಾ ಮಾಡಬಾರದ ಕೆಲಸಗಳನ್ನೇ ಮಾಡಿರಲಿ, ಅಂಥವನು ನೀರು ಕುಡಿಯಲೆಂದು ಹೋದರೆ ‘ನೀನು ಅಯೋಗ್ಯ’ ಎಂದು ಅವನ ದಾಹವನ್ನು ತಣಿಸಲು ನಿರಾಕರಿಸುತ್ತದೆಯೇ ನೀರು? ಇಲ್ಲವಲ್ಲಾ. ನಿಜವಾದ ಹಿರಿಯರ ಮನ ಹಾಗೆ ಇರಬೇಕಲ್ಲವೇ? ಯಾವುದರ ಬಗ್ಗೆಯೂ ತಿರಸ್ಕಾರದ ಲವಲೇಶವೂ ಇಲ್ಲದಂತಿರುವುದೇ ನಿಜವಾದ ಹಿರಿತನ. ಮನಸ್ಸು ಇಚ್ಛಂದವಾಗದೆ (ಇಬ್ಬಾಗವಾಗು) ಒಂದೇ ಅಂದದಲ್ಲಿ ಇರುವಂಥ ನಿಮ್ಮ ಸಮತಾಗುಣವನ್ನು ನನ್ನ ಮನಸ್ಸು ಎಂದು ಹೊಂದೀತು ಎಂದು ಸಿದ್ಧರಾಮ ಕೇಳುತ್ತಾನೆ.

ದೇವರು ಎಂಬುದಿದ್ದರೆ ಅದು ಸಮತಾಗುಣವೇ. ಸಿದ್ಧರಾಮನ ದೃಷ್ಟಿಯಲ್ಲಿ ಏನನ್ನೂ ತಿರಸ್ಕರಿಸಿದ ಗುಣವೇ, ಯಾವ ಗುಣದಿಂದಲೂ ಮನಸ್ಸು ಇಚ್ಚಂದವಾಗದೇ ಇರುವುದೇ, ದೇವರ ಗುಣ, ಅಂಥ ಗುಣ ಬೇಕು ಅನ್ನುವುದು ಬಯಕೆ.

ನಿಸರ್ಗಕ್ಕೆ ಇಂಥ ಸಮತಾಗುಣವಿರುವುದರಿಂದಲೇ ನಾವು ಬದುಕಿದ್ದೇವೆ. ಕೇವಲ ‘ಒಳ್ಳೆ’ಯವರಿಗೆ ಮಾತ್ರವೇ ಮಳೆ ಸುರಿಯುವುದು, ಸೂರ್ಯ ಹೊಳೆಯುವುದು, ನದಿ ಹರಿಯುವುದು, ಮರ ಹಣ್ಣು ಕೊಡುವುದು ಎಂದಾಗಿದ್ದರೆ ಲೋಕದಲ್ಲಿ ನೂರಕ್ಕೆ ತೊಂಬತ್ತೊಂಬತ್ತು ಜನ ಬದುಕುವುದಕ್ಕೇ ಆಗುತ್ತಿರಲಿಲ್ಲವೇನೋ! ಸೇಡಿಲ್ಲದ, ಅವಜ್ಞೆ ಇಲ್ಲದ, ತಿರಸ್ಕಾರವಿಲ್ಲದ ಗುಣ ಎಂದು ಸಮತೆಯನ್ನು ವರ್ಣಿಸಿರುವುದು ಹೊಸತೆಂಬಂತಿದೆ.

ಛಂದ ಮತ್ತು ಅಂದ ಪದಗಳನ್ನು ಒಟ್ಟುಗೂಡಿಸಿರುವ ರೀತಿಯೂ ಗಮನಾರ್ಹ. ಛಂದ ಅನ್ನುವುದು ಛಂದಸ್ಸನ್ನೂ ಚಂದವನ್ನೂ ಒಟ್ಟಿಗೆ ಸೂಚಿಸೀತು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...