Home / ಲೇಖನ / ಇತರೆ / ವಚನ ವಿಚಾರ – ನೀರಿನಂಥ ಮನಸ್ಸು

ವಚನ ವಿಚಾರ – ನೀರಿನಂಥ ಮನಸ್ಸು

ಅನೇಕ ತೆರದ ಯೋನಿಮುಖಂಗಳ ಪೊಕ್ಕು
ನೀರ್‍ಗುಡಿಯಲೆಂದು ಪೋದಡೆ
ಸುಡು ಪೋಗೆಂದು ನೂಂಕಿತ್ತೆ ಜಲ
ಅದರಂತಿರಬೇಡಾ ಹಿರಿಯರ ಮನ
ಮನವಿಚ್ಛಂದವಾಗದೊಂದೆಯಂದದಲಿಪ್ಪಂತಪ್ಪಾ
ನಿಮ್ಮದೊಂದು ಸಮತಾಗುಣವನ್ನನೆಂದು ಪೊದ್ದಿರ್ಪುದು ಹೇಳಾ
ಕಪಿಲಸಿದ್ಧಮಲ್ಲಿಕಾರ್ಜುನಾ

[೫ನೆಯ ಸಾಲು: ಓದಿನ ಅನುಕೂಲಕ್ಕೆ ಹೀಗೆ ಬಿಡಿಸಿಕೊಳ್ಳಿ: ಮನ-ಇಚ್ಛಂದ-ಆಗದೆ-ಒಂದೆ-ಅಂದದಲಿ-ಇಪ್ಪಂತೆ-ಅಪ್ಪ-ಆ; ಪೊದ್ದಿರ್ಪುದು-ಹೊಂದಿರುವುದು]

ಸಿದ್ಧರಾಮನ ವಚನ.
ಹಿಂದಿನ ಜನ್ಮದಲ್ಲಿ ಏನೇ ಆಗಿರಲಿ, ಅಥವಾ ಮಾಡಬಾರದ ಕೆಲಸಗಳನ್ನೇ ಮಾಡಿರಲಿ, ಅಂಥವನು ನೀರು ಕುಡಿಯಲೆಂದು ಹೋದರೆ ‘ನೀನು ಅಯೋಗ್ಯ’ ಎಂದು ಅವನ ದಾಹವನ್ನು ತಣಿಸಲು ನಿರಾಕರಿಸುತ್ತದೆಯೇ ನೀರು? ಇಲ್ಲವಲ್ಲಾ. ನಿಜವಾದ ಹಿರಿಯರ ಮನ ಹಾಗೆ ಇರಬೇಕಲ್ಲವೇ? ಯಾವುದರ ಬಗ್ಗೆಯೂ ತಿರಸ್ಕಾರದ ಲವಲೇಶವೂ ಇಲ್ಲದಂತಿರುವುದೇ ನಿಜವಾದ ಹಿರಿತನ. ಮನಸ್ಸು ಇಚ್ಛಂದವಾಗದೆ (ಇಬ್ಬಾಗವಾಗು) ಒಂದೇ ಅಂದದಲ್ಲಿ ಇರುವಂಥ ನಿಮ್ಮ ಸಮತಾಗುಣವನ್ನು ನನ್ನ ಮನಸ್ಸು ಎಂದು ಹೊಂದೀತು ಎಂದು ಸಿದ್ಧರಾಮ ಕೇಳುತ್ತಾನೆ.

ದೇವರು ಎಂಬುದಿದ್ದರೆ ಅದು ಸಮತಾಗುಣವೇ. ಸಿದ್ಧರಾಮನ ದೃಷ್ಟಿಯಲ್ಲಿ ಏನನ್ನೂ ತಿರಸ್ಕರಿಸಿದ ಗುಣವೇ, ಯಾವ ಗುಣದಿಂದಲೂ ಮನಸ್ಸು ಇಚ್ಚಂದವಾಗದೇ ಇರುವುದೇ, ದೇವರ ಗುಣ, ಅಂಥ ಗುಣ ಬೇಕು ಅನ್ನುವುದು ಬಯಕೆ.

ನಿಸರ್ಗಕ್ಕೆ ಇಂಥ ಸಮತಾಗುಣವಿರುವುದರಿಂದಲೇ ನಾವು ಬದುಕಿದ್ದೇವೆ. ಕೇವಲ ‘ಒಳ್ಳೆ’ಯವರಿಗೆ ಮಾತ್ರವೇ ಮಳೆ ಸುರಿಯುವುದು, ಸೂರ್ಯ ಹೊಳೆಯುವುದು, ನದಿ ಹರಿಯುವುದು, ಮರ ಹಣ್ಣು ಕೊಡುವುದು ಎಂದಾಗಿದ್ದರೆ ಲೋಕದಲ್ಲಿ ನೂರಕ್ಕೆ ತೊಂಬತ್ತೊಂಬತ್ತು ಜನ ಬದುಕುವುದಕ್ಕೇ ಆಗುತ್ತಿರಲಿಲ್ಲವೇನೋ! ಸೇಡಿಲ್ಲದ, ಅವಜ್ಞೆ ಇಲ್ಲದ, ತಿರಸ್ಕಾರವಿಲ್ಲದ ಗುಣ ಎಂದು ಸಮತೆಯನ್ನು ವರ್ಣಿಸಿರುವುದು ಹೊಸತೆಂಬಂತಿದೆ.

ಛಂದ ಮತ್ತು ಅಂದ ಪದಗಳನ್ನು ಒಟ್ಟುಗೂಡಿಸಿರುವ ರೀತಿಯೂ ಗಮನಾರ್ಹ. ಛಂದ ಅನ್ನುವುದು ಛಂದಸ್ಸನ್ನೂ ಚಂದವನ್ನೂ ಒಟ್ಟಿಗೆ ಸೂಚಿಸೀತು.
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...